ರಾಹುಲ್ ಗಾಂಧಿ ಪತ್ತೆ ಹಚ್ಚುವಲ್ಲಿ ಸುಬ್ರಮಣ್ಯ ಸ್ವಾಮಿ ಯಶಸ್ವಿ!
ರಾಯಚೂರು, ಏ 11: ಬಹುದಿನಗಳಿಂದ ನಾಪತ್ತೆಯಾಗಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆಂದು ಕಂಡುಕೊಳ್ಳುವಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ಯಶಸ್ವಿಯಾಗಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿಂದು (ಏ 11) ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದ ಸ್ವಾಮಿ, ರಾಹುಲ್ ಗಾಂಧಿ ಲ್ಯಾಟಿನ್ ಅಮೆರಿಕಾದ ಉರುಗ್ವೆ ದೇಶದಲ್ಲಿದ್ದಾರೆಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಎಲ್ಲಿದ್ದಾರೆಂದು ಕಾಂಗ್ರೆಸ್ ಮುಖಂಡರಿಗೇ ಸರಿಯಾಗಿ ತಿಳಿದಿಲ್ಲ. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಆ ಮಟ್ಟಿಗೆ ಗೌಪ್ಯತೆ ಕಾಪಾಡಿಕೊಂಡು ಬಂದಿದ್ದಾರೆ. (ಹೊಸ ಹಿಂದೂ ಸಂಘಟನೆಗೆ ಓಂಕಾರ ಬರೆದ ಸ್ವಾಮಿ)

ಕಾಂಗ್ರೆಸ್ ಪಕ್ಷದಲ್ಲೀಗ ಹಣದ ಕೊರತೆಯಿದ್ದು, ಅದಕ್ಕಾಗಿ ಸದಸ್ಯತ್ವ ಅಭಿಯಾನದ ಹೆಸರಿನಲ್ಲಿ ಹಣ ಪಡೆದುಕೊಳ್ಳಲಾಗುತ್ತಿದೆ ಎಂದು ಲೇವಡಿ ಮಾಡಿದ ಸ್ವಾಮಿ, ರಾಹುಲ್ ಗಾಂಧಿ ರಜೆಯಿಂದ ಭಾರತಕ್ಕೆ ವಾಪಸ್ ಬಂದ ನಂತರ ಹೊಸ ಬದಲಾವಣೆಯಾಗಲಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಮೂರ್ಖತನ ಎಂದು ಜರಿದಿದ್ದಾರೆ.
ಮುಂಬೈ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಲ್ಲಾ ದಾಖಲೆಗಳಿದ್ದರೂ ಉಗ್ರ ಲಕ್ವಿಯನ್ನು ಬಂಧ ಮುಕ್ತಗೊಳಿಸಲಾಗಿದೆ. ಇದು ಪಾಕಿಸ್ತಾನದಲ್ಲಿ ಸರಕಾರಕ್ಕಿಂತ ಐಎಸ್ಎ ಪ್ರಬಲವಾಗಿದೆ ಎನ್ನುವುದನ್ನು ರುಜುವಾತು ಪಡೆಸುತ್ತದೆ ಎಂದು ಸುಬ್ರಮಣ್ಯಂ ಸ್ವಾಮಿ ಆರೋಪಿಸಿದ್ದಾರೆ.
ಕೇಜ್ರಿವಾಲ್ 420: ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಕ್ಕಾ 420. ಪಕ್ಷದ ಸಂಸ್ಥಾಪಕ ಸದಸ್ಯರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳಲಾಯಿತು ಎನ್ನುವುದನ್ನು ದೆಹಲಿ ಜನತೆ ನೋಡಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಪ್ರತಿ ಮನೆಗೂ ವೈಫೈ ಸಂಪರ್ಕದ ಭರವಸೆ ಕೇಜ್ರಿವಾಲ್ ನೀಡಿದ್ದರು. ಆದರೆ ಇದುವರೆಗೂ ಅದನ್ನು ಈಡೇರಿಸಲು ಕೇಜ್ರಿವಾಲ್ ಅವರಿಗೆ ಸಾಧ್ಯವಾಯಿತೇ ಎಂದು ಸುಬ್ರಮಣ್ಯ ಸ್ವಾಮಿ ಪ್ರಶ್ನಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications