ಬೆಂಗಳೂರಿನಲ್ಲಿ ಡಿ.12ರಂದು ವಾಯುಪಡೆಗೆ ನೇಮಕಾತಿ
ಬೆಂಗಳೂರು, ನ. 24 : ಭಾರತೀಯ ವಾಯು ಪಡೆಯು ಗ್ರೂಫ್ ಎಕ್ಸ್ ವಿಭಾಗದ ಎಜುಕೇಷನ್ ಇನ್ಸ್ಟ್ರಕ್ಟರ್ ಹುದ್ದೆಗಳ ಭರ್ತಿಗಾಗಿ 2014ರ ಡಿಸೆಂಬರ್ 12 ರಂದು ಬೆಂಗಳೂರಿನ ಕಬ್ಬನ್ ರಸ್ತೆಯ ಏರ್ಮನ್ ಆಯ್ಕೆ ಕೇಂದ್ರದಲ್ಲಿ ನೇಮಕಾತಿ ನಡೆಯಲಿದೆ. 22 ವರ್ಷಕ್ಕೆ ಮೇಲ್ಪಟ್ಟ ಅವಿವಾಹಿತ ಪುರುಷ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.
ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳು ಕನಿಷ್ಠ ಶೇ. 50 ಅಂಕಗಳೊಂದಿಗೆ ಕಲೆ, ವಿಜ್ಞಾನ, ವಾಣಿಜ್ಯ ವಿಭಾಗಗಳಲ್ಲಿ ಪದವಿ ಪಡೆದಿದ್ದು ಬಿ.ಎಡ್., ಪದವಿ ಅಥವಾ ಸರ್ಕಾರದಿಂದ ಮಾನ್ಯತೆ ಹೊಂದಿದ ಶಾಲೆ/ಕಾಲೇಜಿನಲ್ಲ್ಲಿ ಎರಡು ವರ್ಷಗಳ ಬೋಧನಾ ಅನುಭವ ಅಥವಾ ಇಂಗ್ಲೀಷ್ನಲ್ಲಿ ಸ್ನಾತಕೋತ್ತರ ಪದವಿ ಪಡೆದರಾಗಿರಬಕು.

ಪದವಿ ಅಭ್ಯರ್ಥಿಗಳು 1991ರ ಫೆಬ್ರವರಿ 1 ಮತ್ತು 1995 ರ ಮೇ 31 ರ ನಡುವೆ ಹುಟ್ಟಿದವರಾಗಿರಬೇಕು. ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು 1988ರ ಫೆಬ್ರವರಿ 1 ರಿಂದ 1995ರ ಮೇ 31 ರ ನಡುವೆ ಜನಿಸಿದವರಾಗಿರಬೇಕು. [ಎಸ್ ಬಿಐನಲ್ಲಿ 6425 ಕ್ಲರ್ಕ್ ಹುದ್ದೆಗಳಿವೆ ಅರ್ಜಿ ಹಾಕಿ]
ಅರ್ಹ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಉತ್ತೀರ್ಣರಾಗಿರುವ ದಾಖಲೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರಮಾಣ ಪತ್ರಗಳ ಮೂಲ ಪ್ರತಿ ಹಾಗೂ ನಾಲ್ಕು ಸ್ವಯಂ ದೃಢೀಕರಿಸಿದ ಪ್ರತಿಗಳು ಹಾಗೂ 7 ಪಾಸ್ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರಗಳೊಡನೆ ಪರೀಕ್ಷೆಗೆ ಹಾಜರಾಗಬೇಕು.
ಹೆಚ್ಚಿನ ವಿವರಗಳಿಗಾಗಿ www.indianairforce.nic.in ವೆಬ್ಸೈಟ್ ಅಥವ ವಾಯುದಳ ನೇಮಕಾತಿ ಕೇಂದ್ರ ನಂ. 1 ಕಬ್ಬನ್ ರಸ್ತೆ, ಬೆಂಗಳೂರು 560 001 ಇಲ್ಲಿಗೆ ಭೇಟಿ ನೀಡಬಹುದಾಗಿದೆ. 080-25592199 ದೂರವಾಣಿ ಸಂಖ್ಯೆಗೂ ಕರೆ ಮಾಡಿ ಮಾಹಿತಿ ಪಡೆಯಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications