ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮಾಜ ಕಲ್ಯಾಣ ಇಲಾಖೆಯಿಂದ 'ಐರಾವತ' ಟ್ಯಾಕ್ಸಿ ಯೋಜನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26 : ಸಮಾಜ ಕಲ್ಯಾಣ ಇಲಾಖೆ ಎಸ್‌ಸಿ/ಎಸ್‌ಟಿ ಪಂಗಡದ ವಿದ್ಯಾವಂತ ಯುವಕರಿಗೆ ಉದ್ಯೋಗ ಒದಗಿಸಲು ಹೊಸ ಯೋಜನೆಯನ್ನು ಜಾರಿಗೆ ತರಲಿದೆ. ಈ ಯೋಜನೆ ಅನ್ವಯ ರಾಜ್ಯದ ಮೂರು ನಗರದಲ್ಲಿ ಹೊಸ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತದೆ.

225 ಕೋಟಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ 'ಐರಾವತ' ಎಂಬ ಯೋಜನೆ ಜಾರಿಗೆ ತರಲಿದೆ. ಯೋಜನೆ ಅನ್ವಯ 4,500 ಕಾರುಗಳನ್ನು ಖರೀದಿ ಮಾಡಲಾಗುತ್ತಿದ್ದು, ಮೂರು ನಗರದಲ್ಲಿ ಟ್ಯಾಕ್ಸಿಗಳು ಸಂಚಾರ ನಡೆಸಲಿವೆ.

ಓಲಾ, ಊಬರ್ ಪ್ರಯಾಣಿಕರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರಓಲಾ, ಊಬರ್ ಪ್ರಯಾಣಿಕರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದೆಯೂ ಟ್ಯಾಕ್ಸಿ ಖರೀದಿಗೆ ಸಹಾಯಧನ ನೀಡುವ ಯೋಜನೆ ಜಾರಿಯಲ್ಲಿತ್ತು. ಆದರೆ, ಅದರ ಅನುಷ್ಠಾನದ ಬಗ್ಗೆ ಹಲವಾರು ದೂರುಗಳಿದ್ದವು. ಆದ್ದರಿಂದ, ನೂತನ ಮಾದರಿಯಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗ ನೇಮಕಾತಿ, 34 ಹುದ್ದೆದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗ ನೇಮಕಾತಿ, 34 ಹುದ್ದೆ

ಎಸ್‌ಸಿ/ಎಸ್‌ಟಿ ಪಂಗಡಕ್ಕೆ ಸೇರಿದ ವಿದ್ಯಾವಂತ ಯುವಕರಿಗೆ ಉದ್ಯೋಗ ಒದಗಿಸಲು 'ಐರಾವತ' ಯೋಜನೆ ಜಾರಿಗೆ ಬರಲಿದೆ. ಪ್ರತಿಷ್ಠಿತ ಊಬರ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಈ ಯೋಜನೆ ಜಾರಿಗೊಳಿಸಲಾಗುತ್ತಿದೆ.

ಧಾರವಾಡ ಐಐಟಿಯಲ್ಲಿ 33 ಹುದ್ದೆಗೆ ಅರ್ಜಿ ಆಹ್ವಾನಧಾರವಾಡ ಐಐಟಿಯಲ್ಲಿ 33 ಹುದ್ದೆಗೆ ಅರ್ಜಿ ಆಹ್ವಾನ

ಪ್ರಾಯೋಗಿಕ ಯೋಜನೆ

ಪ್ರಾಯೋಗಿಕ ಯೋಜನೆ

ಸಮಾಜ ಕಲ್ಯಾಣ ಇಲಾಖೆ ಎಸ್‌ಸಿ/ಎಸ್‌ಟಿ ಪಂಗಡದ ವಿದ್ಯಾವಂತ ನಿರುದ್ಯೋಗಿ ಯುವ ಪೀಳಿಗೆಯ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮ ಶೀಲತೆಗಾಗಿ 'ಐರಾವತ' ಯೋಜನೆ ಜಾರಿಗೊಳಿಸುತ್ತಿದೆ. 225 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ಬರುತ್ತಿದ್ದು, 4,500 ಟ್ಯಾಕ್ಸಿಗಳನ್ನು ಕೊಳ್ಳಲು ಸಹಾಯಧನ ನೀಡಲಾಗುತ್ತದೆ.
ಟ್ಯಾಕ್ಸಿ ಪಡೆದು ಯುವಕರು ಆರ್ಥಿಕವಾಗಿ ಸದೃಢಗೊಳ್ಳಲು ಸಹಕಾರ ನೀಡಲಾಗುತ್ತದೆ.

ಮೂರು ನಗರದಲ್ಲಿ ಟ್ಯಾಕ್ಸಿ ಸೇವೆ

ಮೂರು ನಗರದಲ್ಲಿ ಟ್ಯಾಕ್ಸಿ ಸೇವೆ

ಟ್ಯಾಕ್ಸಿ ಸೇವೆ ಒದಗಿಸುವ ಕುರಿತು ಊಬರ್ ಜೊತೆ ಇಲಾಖೆ ಒಪ್ಪಂದ ಮಾಡಿಕೊಳ್ಳಲಿದೆ. ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ 'ಐರಾವತ' ಯೋಜನೆಯಡಿ ಟ್ಯಾಕ್ಸಿಗಳು ಸಂಚಾರ ನಡೆಸಲಿವೆ.

ಎಸ್‌ಸಿ/ಎಸ್‌ಟಿ ವರ್ಗದ ನಿರುದ್ಯೋಗಿ ಯುವಕರಿಗಾಗಿ ಮಾತ್ರ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಟ್ಯಾಕ್ಸಿ ಕೊಳ್ಳಲು 5 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಐದು ಲಕ್ಷಕ್ಕಿಂತ ಹೆಚ್ಚಿನ ಹಣದ ಟ್ಯಾಕ್ಸಿ (ವಾಹನ) ಗಳನ್ನು ಪಡೆದರೆ ಊಬರ್ ಕಂಪನಿ ಅದರ ಜವಾಬ್ದಾರಿ ವಹಿಸಿಕೊಳ್ಳಲಿದೆ.

ಅಕ್ಟೋಬರ್ 2ರಿಂದ ಅರ್ಜಿ

ಅಕ್ಟೋಬರ್ 2ರಿಂದ ಅರ್ಜಿ

ಟ್ಯಾಕ್ಸಿ ಕೊಳ್ಳಲು ಸಹಾಯಧನ ಪಡೆಯಲು ಇಚ್ಛಿಸುವ ಯುವಕರು ಅಕ್ಟೋಬರ್ 2ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಪಾರದರ್ಶಕತೆ ಕಾಪಾಡಲು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚನೆ ಮಾಡಲಾಗಿದೆ. ಅರ್ಜಿ ಜೊತೆಗೆ ಆಧಾರ್ ಕಾರ್ಡ್‌ ನಂಬರ್ ಸಹ ನೀಡಬೇಕು. ಒಮ್ಮೆ ಫಲಾನುಭವಿ ಆದವರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ.

ಸಹಾಯಧನ ಏರಿಕೆ

ಸಹಾಯಧನ ಏರಿಕೆ

ಹಿಂದೆಯೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಟ್ಯಾಕ್ಸಿ ಖರೀದಿ ಯೋಜನೆ ಜಾರಿಯಲ್ಲಿತ್ತು. ಆದರೆ, ಅದರ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪಗಳಿತ್ತು. ಈಗ ಹೊಸ ಸ್ವರೂಪದಲ್ಲಿ ಯೋಜನೆ ಜಾರಿಗೆ ತರಲಾಗುತ್ತಿದೆ. ಟ್ಯಾಕ್ಸಿ ಕೊಳ್ಳಲು ಇದ್ದ ಸಹಾಯಧನವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಪ್ರಿಯಾಂಕ್‌ ಖರ್ಗೆ ಟ್ವಿಟ್

ಐರಾವತ ಯೋಜನೆ ಕುರಿತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಟ್ವಿಟ್ ಮಾಡಿದ್ದಾರೆ.

English summary
Karnataka Social Welfare Department will launch Airavata scheme to provide jobs for youth of Scheduled Caste and Scheduled Tribes. Under new project youths will get subsidy of Rs 5 lakh to purchase car for taxi service.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X