ಸಮಾಜ ಕಲ್ಯಾಣ ಇಲಾಖೆಯಿಂದ 'ಐರಾವತ' ಟ್ಯಾಕ್ಸಿ ಯೋಜನೆ
ಬೆಂಗಳೂರು, ಸೆಪ್ಟೆಂಬರ್ 26 : ಸಮಾಜ ಕಲ್ಯಾಣ ಇಲಾಖೆ ಎಸ್ಸಿ/ಎಸ್ಟಿ ಪಂಗಡದ ವಿದ್ಯಾವಂತ ಯುವಕರಿಗೆ ಉದ್ಯೋಗ ಒದಗಿಸಲು ಹೊಸ ಯೋಜನೆಯನ್ನು ಜಾರಿಗೆ ತರಲಿದೆ. ಈ ಯೋಜನೆ ಅನ್ವಯ ರಾಜ್ಯದ ಮೂರು ನಗರದಲ್ಲಿ ಹೊಸ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತದೆ.
225 ಕೋಟಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ 'ಐರಾವತ' ಎಂಬ ಯೋಜನೆ ಜಾರಿಗೆ ತರಲಿದೆ. ಯೋಜನೆ ಅನ್ವಯ 4,500 ಕಾರುಗಳನ್ನು ಖರೀದಿ ಮಾಡಲಾಗುತ್ತಿದ್ದು, ಮೂರು ನಗರದಲ್ಲಿ ಟ್ಯಾಕ್ಸಿಗಳು ಸಂಚಾರ ನಡೆಸಲಿವೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದೆಯೂ ಟ್ಯಾಕ್ಸಿ ಖರೀದಿಗೆ ಸಹಾಯಧನ ನೀಡುವ ಯೋಜನೆ ಜಾರಿಯಲ್ಲಿತ್ತು. ಆದರೆ, ಅದರ ಅನುಷ್ಠಾನದ ಬಗ್ಗೆ ಹಲವಾರು ದೂರುಗಳಿದ್ದವು. ಆದ್ದರಿಂದ, ನೂತನ ಮಾದರಿಯಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಎಸ್ಸಿ/ಎಸ್ಟಿ ಪಂಗಡಕ್ಕೆ ಸೇರಿದ ವಿದ್ಯಾವಂತ ಯುವಕರಿಗೆ ಉದ್ಯೋಗ ಒದಗಿಸಲು 'ಐರಾವತ' ಯೋಜನೆ ಜಾರಿಗೆ ಬರಲಿದೆ. ಪ್ರತಿಷ್ಠಿತ ಊಬರ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಈ ಯೋಜನೆ ಜಾರಿಗೊಳಿಸಲಾಗುತ್ತಿದೆ.

ಪ್ರಾಯೋಗಿಕ ಯೋಜನೆ
ಸಮಾಜ ಕಲ್ಯಾಣ ಇಲಾಖೆ ಎಸ್ಸಿ/ಎಸ್ಟಿ ಪಂಗಡದ ವಿದ್ಯಾವಂತ ನಿರುದ್ಯೋಗಿ ಯುವ ಪೀಳಿಗೆಯ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮ ಶೀಲತೆಗಾಗಿ 'ಐರಾವತ' ಯೋಜನೆ ಜಾರಿಗೊಳಿಸುತ್ತಿದೆ. 225 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ಬರುತ್ತಿದ್ದು, 4,500 ಟ್ಯಾಕ್ಸಿಗಳನ್ನು ಕೊಳ್ಳಲು ಸಹಾಯಧನ ನೀಡಲಾಗುತ್ತದೆ.
ಟ್ಯಾಕ್ಸಿ ಪಡೆದು ಯುವಕರು ಆರ್ಥಿಕವಾಗಿ ಸದೃಢಗೊಳ್ಳಲು ಸಹಕಾರ ನೀಡಲಾಗುತ್ತದೆ.

ಮೂರು ನಗರದಲ್ಲಿ ಟ್ಯಾಕ್ಸಿ ಸೇವೆ
ಟ್ಯಾಕ್ಸಿ ಸೇವೆ ಒದಗಿಸುವ ಕುರಿತು ಊಬರ್ ಜೊತೆ ಇಲಾಖೆ ಒಪ್ಪಂದ ಮಾಡಿಕೊಳ್ಳಲಿದೆ. ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ 'ಐರಾವತ' ಯೋಜನೆಯಡಿ ಟ್ಯಾಕ್ಸಿಗಳು ಸಂಚಾರ ನಡೆಸಲಿವೆ.
ಎಸ್ಸಿ/ಎಸ್ಟಿ ವರ್ಗದ ನಿರುದ್ಯೋಗಿ ಯುವಕರಿಗಾಗಿ ಮಾತ್ರ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಟ್ಯಾಕ್ಸಿ ಕೊಳ್ಳಲು 5 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಐದು ಲಕ್ಷಕ್ಕಿಂತ ಹೆಚ್ಚಿನ ಹಣದ ಟ್ಯಾಕ್ಸಿ (ವಾಹನ) ಗಳನ್ನು ಪಡೆದರೆ ಊಬರ್ ಕಂಪನಿ ಅದರ ಜವಾಬ್ದಾರಿ ವಹಿಸಿಕೊಳ್ಳಲಿದೆ.

ಅಕ್ಟೋಬರ್ 2ರಿಂದ ಅರ್ಜಿ
ಟ್ಯಾಕ್ಸಿ ಕೊಳ್ಳಲು ಸಹಾಯಧನ ಪಡೆಯಲು ಇಚ್ಛಿಸುವ ಯುವಕರು ಅಕ್ಟೋಬರ್ 2ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಪಾರದರ್ಶಕತೆ ಕಾಪಾಡಲು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚನೆ ಮಾಡಲಾಗಿದೆ. ಅರ್ಜಿ ಜೊತೆಗೆ ಆಧಾರ್ ಕಾರ್ಡ್ ನಂಬರ್ ಸಹ ನೀಡಬೇಕು. ಒಮ್ಮೆ ಫಲಾನುಭವಿ ಆದವರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ.

ಸಹಾಯಧನ ಏರಿಕೆ
ಹಿಂದೆಯೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಟ್ಯಾಕ್ಸಿ ಖರೀದಿ ಯೋಜನೆ ಜಾರಿಯಲ್ಲಿತ್ತು. ಆದರೆ, ಅದರ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪಗಳಿತ್ತು. ಈಗ ಹೊಸ ಸ್ವರೂಪದಲ್ಲಿ ಯೋಜನೆ ಜಾರಿಗೆ ತರಲಾಗುತ್ತಿದೆ. ಟ್ಯಾಕ್ಸಿ ಕೊಳ್ಳಲು ಇದ್ದ ಸಹಾಯಧನವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
|
ಪ್ರಿಯಾಂಕ್ ಖರ್ಗೆ ಟ್ವಿಟ್
ಐರಾವತ ಯೋಜನೆ ಕುರಿತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications