ಪಟ್ಟಣಗೆರೆ ಶೆಡ್ನಲ್ಲಿ ಸ್ಟಾರ್ ನಟನ ಮೀಟ್ ಆಗಿದ್ದ ಐಶ್ವರ್ಯಾ ಗೌಡ, ವಂಚನೆ ಕೇಸ್ಗೆ ಹೊಸ ಟ್ವಿಸ್ಟ್
ಕೋಟ್ಯಂತರ ರೂಪಾಯಿ ಚಿನ್ನ ವಂಚನೆ ಕೇಸ್ನಲ್ಲಿ ಸಿಲುಕಿಕೊಂಡಿರುವ ಆರೋಪಿ ಐಶ್ವರ್ಯ ಗೌಡ ಅವರ ಬಗ್ಗೆ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಮೊದಲಿಗೆ ಐಶ್ವರ್ಯ ಗೌಡ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು. ಇದೀಗ ಇದೇ ಕೇಸ್ನಲ್ಲಿ ಪಟ್ಣಣಗೆರೆ ಶೆಡ್ನ ಹೆಸರು ಕೂಡ ಕೇಳಿಬಂದಿದೆ.
ಹೌದು, ಸುಮಾರು 14 ಕೆ.ಜಿ ಚಿನ್ನದ ಕೇಸ್ನಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ಐಶ್ವರ್ಯಾ ಗೌಡ ಅವರಿಗೆ ಪಟ್ಟಣಗೆರೆಯ ಶೆಡ್ನ ನಂಟಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪಟ್ಟಣಗೆರೆ ಶೆಡ್ ಕುಖ್ಯಾತಿ ಪಡೆದಿತ್ತು. ಇದೇ ಶೆಡ್ನಲ್ಲಿ ಐಶ್ವರ್ಯ ಗೌಡ ಸ್ಟಾರ್ ನಟರೊಬ್ಬರನ್ನು ಮೀಟ್ ಮಾಡಿರುವ ವಿಚಾರ ಬಹಿರಂಗವಾಗಿದೆ.

ರಾಜಕಾರಣಿಗಳು ಮಾತ್ರವಲ್ಲದೆ ಸಿನಿಮಾ ರಂಗದವರಿಗೂ ಐಶ್ವರ್ಯ ಗೌಡ ಚಳ್ಳೆಹಣ್ಣು ತಿನ್ನಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಎನ್ನಲಾದ ನಟ ಧರ್ಮ ಕೂಡ ಸ್ಟಾರ್ ನಟರೊಬ್ಬರನ್ನು ಇದೇ ಶೆಡ್ನಲ್ಲಿ ಐಶ್ವರ್ಯಾಗೆ ಪರಿಚಯ ಮಾಡಿಸಿದ್ದರು ಎನ್ನಲಾಗಿದೆ.
ಅಲ್ಲದೆ ನಟ ಸಿನಿಮಾ ಶೂಟಿಂಗ್ಗೆ ಹಲವು ದುಬಾರಿ ಕಾರುಗಳನ್ನು ಕೂಡ ಐಶ್ವರ್ಯಾ ಕೊಟ್ಟಿದ್ದರು. ಇದರ ನಂತರ ಇವರಿಬ್ಬರ ನಡುವೆ ಉತ್ತಮ ಸ್ನೇಹ ಕೂಡ ಇತ್ತು. ಕಿರುತೆರೆ ನಟಿಯರು ಹಾಗೂ ಸ್ಟಾರ್ ನಟನೊಂದಿಗೆ ಐಶ್ವರ್ಯ ನಂಟು ಹೊಂದಿದ್ದು, ಅವರಿಗೆ ದುಬಾರಿ ಗಿಫ್ಟ್ಗಳನ್ನು ನೀಡಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸ್ಟಾರ್ ನಟ ಹಾಗೂ ನಟಿಯರಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರಂತೆ.

ಅಲ್ಲದೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಎಸ್ಎಲ್ವಿವಿ ಪ್ರೊಡಕ್ಷನ್ ಎಂದು ಐಶ್ವರ್ಯ ದಂಪತಿ 2021ರಲ್ಲಿ ನೋಂದಣಿ ಮಾಡಿಸಿದ್ದರು. ವಂಚನೆ ಮಾಡುವ ಉದ್ದೇಶದಿಂದಲೇ ಇವರು ತಮ್ಮ ನೋಂದಣಿ ಮಾಡಿಸಿದ್ದರು ಎನ್ನುವ ಸಂಶಯವೂ ವ್ಯಕ್ತವಾಗಿದೆ.
ಏನಿದು ಪ್ರಕರಣ?: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ನಂಬಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್.ಹರೀಶ್ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆ ಇವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ಕೋರ್ಟ್ ಆದೇಶಿಸಿತ್ತು.
ಇದೇ ಕೇಸ್ನಲ್ಲಿ ಕನ್ನಡ ನಟ ಧರ್ಮೇಂದ್ರ ಅವರ ಹೆಸರು ಕೂಡ ಕೇಳಿಬಂದಿದೆ. ದೂರುದಾರರಾದ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಐತಾಳ್ ಅವರಿಗೆ ಕರೆ ಮಾಡಿದ್ದ ಧರ್ಮೇಂದ್ರ, ಡಿ.ಕೆ.ಸುರೇಶ್ ಅವರ ಧ್ವನಿಯಲ್ಲಿ ಮಾತನಾಡಿದ್ದರು ಎನ್ನಲಾಗಿದೆ. ಇದೀಗ ಪಟ್ಟಣಗೆರೆ ಶೆಡ್ನಲ್ಲಿ ಐಶ್ವರ್ಯ ಅವರು ಭೇಟಿಯಾಗಿದ್ದ ಸ್ಟಾರ್ ನಟ ಯಾರು ಎಂಬುದನ್ನು ಪೊಲೀಸರು ಪತ್ತೆ ಹಚ್ಚಲು ಮುಂದಾಗಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications