ಸದಾಶಿವ ಆಯೋಗದ ವರದಿ : ಕಾನೂನು ಸಲಹೆ ಪಡೆಯಲು ನಿರ್ಧಾರ
ಬೆಂಗಳೂರು, ಜನವರಿ 16 : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಪರಿಶಿಷ್ಟ ಜಾತಿಯ ಬಲಗೈ ಬಣ ಒಪ್ಪಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಮಾತುಕತೆ ಫಲ ನೀಡಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಸಭೆಯಲ್ಲಿ, ವರದಿ ಜಾರಿಗೆ ಒಪ್ಪಿಗೆ ಸಿಕ್ಕಿದೆ. ಎರಡೂ ಸಮುದಾಯಗಳ ಮುಖಂಡರು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು, 'ಬಲಗೈ ಮತ್ತು ಎಡಗೈ ಸಮುದಾಯದವರು ಒಂದೇ ತಾಯಿಯ ಮಕ್ಕಳಿದ್ದಂತೆ. ಮೀಸಲಾತಿ ಜಾರಿಗೆ ಬಂದಾಗ ಒಟ್ಟಿಗೆ ಪಡೆದಿದ್ದೇವೆ' ಎಂದರು.

'ಮೀಸಲಾತಿ ಹಂಚಿಕೆ ಸಂದರ್ಭದಲ್ಲಿ ಕಿತ್ತಾಡುವುದು ಬೇಡ. ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಎಂದು ಬಲಗೈ ಸಮುದಾಯದ ಮುಖಂಡರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ' ಎಂದು ಆಂಜನೇಯ ಸ್ಪಷ್ಟಪಡಿಸಿದರು.
'ಕಾನೂನು ತಜ್ಞರ ಅಭಿಪ್ರಾಯ ಪಡೆದು, ನಂತರ ದಲಿತ ಸಂಘಟನೆಗಳ ಜೊತೆ ಮತ್ತೊಮ್ಮೆ ಸಭೆ ನಡೆಸಿ ಸಚಿವ ಸಂಪುಟದ ಮುಂದೆ ವರದಿಯನ್ನು ಇಟ್ಟು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರವನ್ನು ಕೈಗೊಳ್ಳಲಿದ್ದೇವೆ' ಎಂದು ಆಂಜನೇಯ ವಿವರಿಸಿದರು.
'ವರದಿಯ ಅನ್ವಯ ಬಲಗೈ ಸಮುದಾಯಕ್ಕೆ ಶೇ 5, ಎಡಗೈ ಸಮಯದಾಯಕ್ಕೆ ಶೇ 6ರಷ್ಟು ಮೀಸಲಾತಿ ಸಿಗಲಿದೆ. ಕಾನೂನಿನಲ್ಲಿ ಅವಕಾಶವಿದ್ದರೆ ತಲಾ 5.5ರಷ್ಟು ಹಂಚಿಕೆ ಮಾಡುವಂತೆ ಕೆಲವರು ಸಲಹೆ ನೀಡಿದ್ದಾರೆ' ಎಂದರು.
'ಎರಡೂ ಸಮುದಾಯಗಳ ಸಂಸದರು ಮತ್ತು ಶಾಸಕರ ಸಭೆಯನ್ನು ಮತ್ತೊಮ್ಮೆ ಕರೆಯುತ್ತೇವೆ. ಅವರನ್ನು ಒಪ್ಪಿಸಿ ಆದಷ್ಟು ಬೇಗ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಾಗುತ್ತದೆ' ಎಂದು ಸಚಿವರು ಹೇಳಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications