ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ತುಪ್ಪ ಸುರಿದ ಎಕೆ ಸುಬ್ಬಯ್ಯ
ಮಡಿಕೇರಿ, ಜುಲೈ 16 : ಇಡೀ ಕೊಡಗಿನ ಜನ ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು ಎಂದು ಹೋರಾಟ ನಡೆಸುತ್ತಿದ್ದರೆ ಹಿರಿಯ ವಕೀಲ, ವಿಧಾನಪರಿಷತ್ ಮಾಜಿ ಸದಸ್ಯ ಎ.ಕೆ.ಸುಬ್ಬಯ್ಯ ಅವರು ಕೆಜೆ ಜಾರ್ಜ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಆತ್ಮಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಸಮಾಜ ಘಾತುಕ ಕೃತ್ಯವಾಗಿದ್ದು, ಉನ್ನತ ಹುದ್ದೆಯಲ್ಲಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗುವದು ಖಂಡನೀಯ ಕ್ರಮ ಎಂದು ಹೇಳಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. [ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ : ಬಂದ್ ಸಂಪೂರ್ಣ ಯಶಸ್ವಿ]
ಕೆ.ಜೆ.ಜಾರ್ಜ್ ಅವರಿಗೆ ಬೆಂಬಲ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾರ್ಜ್ ಅವರಿಂದ ಕಿರುಕುಳ ಆಗಿದ್ದರೆ ಜಾರ್ಜ್ ಅವರು ಗೃಹ ಸಚಿವರಾಗಿದ್ದಾಗಲೇ ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಈಗ ಏಕೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ? ಎಂದು ಪ್ರಶ್ನಿಸಿದರು. [ಗಣಪತಿ ಆತ್ಮಹತ್ಯೆ ಸಿಐಡಿ ವರದಿ ಸೋರಿಕೆ, ಸರಕಾರಕ್ಕೆ ಮುಜುಗರ?]

ಕೆಜೆ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯ ಮಾಡುವ ಮೂಲಕ ಕೊಚ್ಚೆಯಲ್ಲಿ ಮೀನು ಹಿಡಿಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರಲ್ಲದೆ, ಗಣಪತಿ ಆತ್ಮಹತ್ಯೆಗೆ ಮನೋವ್ಯಾಕುಲವೇ ಕಾರಣ ಎಂದು ಅಭಿಪ್ರಾಯಪಟ್ಟರು.
ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದ ಸುಬ್ಬಯ್ಯ, 174 ಸೆಕ್ಷನ್ ಪ್ರಕಾರ ಈಗಾಗಲೇ ತನಿಖೆ ಆರಂಭಗೊಂಡಿದ್ದು, ಇದರ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ಎಂದು ತಿಳಿದುಬಂದಲ್ಲಿ ಎಫ್ಐಆರ್ ದಾಖಲಿಸಲು ಅವಕಾಶವಿದೆ. ಆದರೆ 174ರಡಿಯಲ್ಲೇ ತನಿಖೆಯನ್ನು ಕೈಗೊಳ್ಳಲು ಬಿಡದೆ ಅರ್ಥಹೀನ ಆಂದೋಲನದ ಮೂಲಕ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.
ಆತ್ಮಹತ್ಯೆ ಮಾಡಿಕೊಂಡ ಎಂ.ಕೆ. ಗಣಪತಿ ಹಾಗೂ ಡಿವೈಎಸ್ಪಿ ಕಲ್ಲಪ್ಪ ಅವರು ಕೇಸರೀಕರಣಗೊಂಡಿದ್ದರು. ಇವತ್ತು ಕೇಸರೀಕರಣಗೊಂಡ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದು, ಗಣಪತಿ ಅವರ ಆತ್ಮಹತ್ಯೆಗೆ ಸಂಘ ಪರಿವಾರವೇ ನೇರ ಹೊಣೆ ಎಂದು ಬಿಜೆಪಿ ವಿರುದ್ಧವೇ ತಿರುಗುಬಾಣ ಬಿಟ್ಟರು. [ಗಣಪತಿ ಕುಟುಂಬಕ್ಕೆ ನ್ಯಾಯ ಸಿಗುವುದು ಅನುಮಾನ : ಪ್ರತಾಪ್]
ಗಣಪತಿ ಆತ್ಮಹತ್ಯೆ ವಿಚಾರದಲ್ಲಿ ಹಲವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಹುಚ್ಚರಂತೆ ಹೇಳಿಕೆ ನೀಡುತ್ತಿದ್ದು, ಅವರ ರೋಗಕ್ಕೆ ಔಷಧಿ ಇಲ್ಲದಂತಾಗಿದೆ ಎಂದು ಸುಬ್ಬಯ್ಯ ವ್ಯಂಗ್ಯವಾಡಿದರು.
ಸುಬ್ಬಯ್ಯ ಅವರ ಹೇಳಿಕೆಗಳು ಕೊಡಗಿನಲ್ಲಿ ಕಿಚ್ಚು ಹಚ್ಚಲು ಕಾರಣವಾಗಿದೆ. ಈ ಹಿಂದೆಯೂ ಹಲವು ಘಟನೆಗಳ ಸಂದರ್ಭ ಸುಬ್ಬಯ್ಯ ಅವರ ಹೇಳಿಕೆಗಳಿಗೆ ಪ್ರತಿಭಟನೆ, ಖಂಡನೆ, ಹಲ್ಲೆಗಳು ನಡೆದಿದ್ದವು. ಇದೀಗ ನೀಡಿರುವ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications