ಹವ್ಯಕ ಮಹಾಸಭೆ ಚುನಾವಣೆ: ಆದಿಶಂಕರ ಬಳಗಕ್ಕೆ ಜಯ
ಬೆಂಗಳೂರು, ಡಿ 18: ಸಮಸ್ತ ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆಯ 16 ಸ್ಥಾನಗಳಿಗೆ ಭಾನುವಾರ (ಡಿ 17) ನಡೆದ ಚುನಾವಣೆಯಲ್ಲಿ, ಎಲ್ಲಾ ಸ್ಥಾನಗಳಲ್ಲಿ ಸಮಾಜ ನಿಷ್ಠವಾದ ಶ್ರೀ ಆದಿಶಂಕರ ಬಳಗಕ್ಕೆ ಸೇರಿದ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ವಿಜೇತರಾಗಿದ್ದಾರೆ.
ಚುನಾವಣೆ ನಡೆದ 16 ಸ್ಥಾನಗಳಲ್ಲಿ 12ಸ್ಥಾನಗಳಿಗೆ ಆದಿಶಂಕರ ಬಳಗದವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 4ಸ್ಥಾನಗಳಿಗೆ ಮತದಾನದ ಮೂಲಕ ಆಯ್ಕೆ ನಡೆಯಿತು.

ಆದಿಶಂಕರ ಬಳಗದ ಅಭ್ಯರ್ಥಿಗಳಾದ ಎ ಎನ್ ಹೆಗಡೆ ಹಾರೂಗಾರ್ (2235) ಪ್ರಶಾಂತ ಭಟ್ (2211) ಪ್ರಸನ್ನ ಕೆ ಎಸ್ (2183) ಕೃಷ್ಣಮೂರ್ತಿ ಎಸ್ ಭಟ್ (2151) ಮತಗಳನ್ನು ಪಡೆದು ಪ್ರಚಂಡ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಪ್ರತಿಸ್ಪರ್ಧಿಗಳಾಗಿದ್ದ ಎಂ ಆರ್ ಮಂಜುನಾಥ್(485) ಶಿವಾನಂದ ಎಸ್(437) ಎಂ ಎನ್ ಹೆಗಡೆ ಕಡತೋಕ(424) ತಾರಾನಾಥ್ ಯು ಆರ್ (349) ಮತಗಳನ್ನು ಮಾತ್ರ ಪಡೆಯುವ ಮೂಲಕ ಸೋಲು ಅನುಭವಿಸಿದ್ದಾರೆ.
ಹವ್ಯಕ ಸಮಾಜ ಈ ಚುನಾವಣೆಯ ಮೂಲಕ " ಸಮಾಜ ಒಗ್ಗಟ್ಟಾಗಿದೆ, ಸಮಾಜ ಒಡೆಯುವವರನ್ನು ತಿರಸ್ಕರಿಸುತ್ತದೆ" ಎಂಬ ಸ್ಪಷ್ಟ ಉತ್ತರವನ್ನು ನೀಡಿ ಗುರುಸ್ಥಾನಗಳಿಗೆ ಹಾಗೂ ಸಮಾಜಕ್ಕೆ ಗೌರವವನ್ನು ಸಲ್ಲಿಸಿದೆ ಎಂದು ಆದಿಶಂಕರ ಬಳಗ ಸಂತೋಷ ವ್ಯಕ್ತ ಪಡಿಸಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications