ಅಕ್ರಮ-ಸಕ್ರಮ ದಂಡ ಶುಲ್ಕ ನಿಗದಿ, ರಿಯಾಯಿತಿ
ಬೆಂಗಳೂರು, ಮೇ 05 : ಅಕ್ರಮ ನಿವೇಶನದಲ್ಲಿ ಕಟ್ಟಿದ ಮನೆಯನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರ ದಂಡ ಶುಲ್ಕ ನಿಗದಿ ಮಾಡಿದೆ. ದಂಡ ಶುಲ್ಕದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನರಿಗೆ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ.
ಬುಧವಾ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಂದಾಯ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡವರು ದಂಡ ಪಾವತಿ ಮಾಡಿ ಸಕ್ರಮಗೊಳಿಸಕೊಳ್ಳಬಹುದು' ಎಂದರು. [ನಗರ ಪ್ರದೇಶದಲ್ಲಿ ಅಕ್ರಮ-ಸಕ್ರಮ : ಏನು, ಹೇಗೆ?]

ದಂಡ ಶುಲ್ಕ ಎಷ್ಟು? : ಗ್ರಾಮೀಣ ಪ್ರದೇಶದಲ್ಲಿ ಮನೆ ಕಟ್ಟಿ ಕೊಂಡರುವವರು 30X40, 60X40 ಹಾಗೂ 50X80 ಅಳತೆಯ ಭೂಮಿಯನ್ನು ಕಾನೂನಾತ್ಮಕವಾಗಿ ಪಡೆಯಲು ಫಲಾನುಭವಿಗಳು 2000, 4000 ಮತ್ತು 6000 ರೂ. ಪಾವತಿ ಮಾಡಬೇಕು. [ಕರ್ನಾಟಕ : ಅಕ್ರಮ-ಸಕ್ರಮ, ನಿಮಗಿದು ತಿಳಿದಿರಲಿ]
ನಗರ ಪ್ರದೇಶದಲ್ಲಿರುವ 20X30 ಅಳತೆಯಲ್ಲಿ ಮನೆಯಲ್ಲಿ ವಾಸವಾಗಿರುವ ಫಲಾನುಭವಿಗಳಿಗೆ ಸಕ್ರಮ ಮಾಡಿಕೊಳ್ಳಲು 10,000ರೂ. ದಂಡ ಪಾವತಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ಕೊಟ್ಟಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನರಿಗೆ ದಂಡಮೊತ್ತದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ.
ದಂಡ ಶುಲ್ಕದಲ್ಲಿ ರಿಯಾಯಿತಿ ನೀಡಿರುವುದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications