ಝಿಕಾ ವೈರಸ್ ಭೀತಿ; ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ
ಬೆಂಗಳೂರು, ಜುಲೈ 10: ಕೊರೊನಾ ಸೋಂಕಿನ ಭೀತಿ ನಡುವೆ ನೆರೆ ರಾಜ್ಯ ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಕಾರಣ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಈ ಬಗ್ಗೆ ರಾಜ್ಯದಲ್ಲಿಯೂ ಕಾಳಜಿ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ.

"ನೆರೆ ರಾಜ್ಯ ಕೇರಳದಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಇದೀಗ ಮುಂಗಾರು ಮಳೆಯಾಗುತ್ತಿದೆ. ಇದು ಝಿಕಾ ಸೋಂಕಿಗೆ ಕಾರಣವಾಗುವ ಏಡೆಸ್ ಸೊಳ್ಳೆಗಳು ಹೆಚ್ಚಾಗಲು ಕಾರಣವಾಗಹುದು. ಹೀಗಾಗಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಈ ಕುರಿತು ಜಾಗೃತಿ ಮೂಡಿಸಲಿದ್ದಾರೆ" ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸೊಳ್ಳೆಗಳ ಹರಡುವಿಕೆ ಹೆಚ್ಚಾಗದಂತೆ ತಡೆಯಲು ತ್ಯಾಜ್ಯ ನಿರ್ವಹಣೆ ಕುರಿತು ಎಚ್ಚರಿಕೆ ವಹಿಸಲಾಗಿದೆ. ಶುಚಿತ್ವ ಕಾಯ್ದುಕೊಳ್ಳಲು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದೆ.
ಕೇರಳದ ತಿರುವನಂತಪುರಂನಲ್ಲಿ ಗುರುವಾರ ಹದಿನಾಲ್ಕು ಝಿಕಾ ವೈರಸ್ ಪ್ರಕರಣಗಳು ದಾಖಲಾಗಿವೆ. ಕೇಂದ್ರವು ತನ್ನ ಆರು ಸದಸ್ಯರ ತಂಡವನ್ನು ಪರಿಸ್ಥಿತಿ ನಿಭಾಯಿಸಲು ಕೇರಳಕ್ಕೆ ಕಳುಹಿಸಿದೆ.












Click it and Unblock the Notifications