ವಿವಾಹೇತರ ಸಂಬಂಧ ಹೊಂದಿ ದೂರಾದರೂ ಕೊಡಬೇಕು ಜೀವನಾಂಶ
ಬೆಂಗಳೂರು, ಡಿಸೆಂಬರ್ 23: ಮದುವೆಯಾಗಿ ನಂತರ ವಿಚ್ಛೇದನ ಪಡೆದರೆ ಮಡದಿಗೆ ಜೀವನಾಂಶ ಕೊಡುವುದು ಕಾನೂನು. ಆದರೆ ಲಿವ್ ಇನ್ ರಿಲೇಷನ್ಶಿಪ್ (ಮದುವೆ ಆಗದೆ ಸಹಜೀವನ) ಹಾಗೂ ವಿವಾಹೇತರ ಸಂಬಂಧದಲ್ಲಿದ್ದು ಬೇರೆಯಾದರೂ ಜೀವನಾಂಶ ಕೊಡಬೇಕಾಗುತ್ತದೆ.
ಹೌದು, ಪ್ರಕರಣವೊಂದರ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಲಿವ್ ಇನ್ ರಿಲೇಶನ್ಶಿಪ್ ನಲ್ಲಿದ್ದು ಅಥವಾ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿ ನಂತರ ಏಕಾಏಕಿ ಮಹಿಳೆಯನ್ನು ತೊರೆದರೆ ಆ ಮಹಿಳೆಗೆ ಪುರುಷನು ಜೀವನಾಂಶ ನೀಡಬೇಕು ಎಂದು ಆದೇಶ ನೀಡಿದೆ.
ವಿವಾಹಿತ ಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಬೆಂಗಳೂರಿನ 46 ವರ್ಷದ ಮಹಿಳೆಯೊಬ್ಬರು ತಮಗೆ ಮೋಸ ಆಗಿದೆ. ಸಂತ್ರಸ್ತೆ ಆಗಿದ್ದೇನೆ ಎಂದು ಅಳಲು ತೋಡಿಕೊಂಡು ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆಕೆಯ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

58 ವರ್ಷದ ವ್ಯಕ್ತಿಯೊಬ್ಬರು 1985 ರಲ್ಲಿ ಮದುವೆ ಆಗಿ ಮೂರು ಮಕ್ಕಳನ್ನು ಹೊಂದಿದ್ದರು. ಅದೇ ವ್ಯಕ್ತಿ ನಂತರ ಮತ್ತೊಬ್ಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿ, ಇಬ್ಬರು ಮಕ್ಕಳನ್ನೂ ಹೊಂದಿದ್ದರು.
ಆದರೆ ಏಕಾ-ಏಕಿ 2012 ರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ತೊರೆದರು. ನಂತರ ಆ ಮಹಿಳೆ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ಸೆಷನ್ಸ್ ಕೋರ್ಟ್ ಮಹಿಳೆಯ ಅರ್ಜಿಯನ್ನು ತಳ್ಳಿ ಹಾಕಿತ್ತು, ನಂತರ ಅದೇ ಮಹಿಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್, ಮಹಿಳೆಯೊಂದಿಗೆ ವ್ಯಕ್ತಿಗೆ ಗಾಡ ಸಂಬಂಧ ಇತ್ತು. ಮಕ್ಕಳ ಶಾಲಾ ದಾಖಲೆಯಲ್ಲಿ ತಂದೆಯ ಹೆಸರು ಈತನದ್ದೇ ದಾಖಲಿಸಲಾಗಿದೆ. ವ್ಯಕ್ತಿಯೂ ಸಹ ವಿವಾಹೇತರ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ.
ಹಾಗಾಗಿ ಮಹಿಳೆಗೆ ಪ್ರತಿ ತಿಂಗಳು ಐದು ಸಾವಿರ ಕೊಡಬೇಕು, ಮೂರು ಸಾವಿರ ಬಾಡಿಗೆಗೆ ಕೊಡಬೇಕು, ಅಷ್ಟೆ ಅಲ್ಲದೆ ಈ ಹಣವನ್ನು ಸಂತ್ರಸ್ತೆಯು ಎಂದು ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರೋ ಅಂದಿನಿಂದಲೂ ಕೊಡಬೇಕು. ಶೇ 7 ಬಡ್ಡಿ ದರ ಸೇರಿಸಿ ಕೊಡಬೇಕು ಎಂದು ಆದೇಶ ಹೊರಡಿಸಿದೆ.
ಇದೊಂದು ಅಪರೂಪದ ಪ್ರಕರಣ ಎಂದು ಬಣ್ಣಿಸಿದ ಹೈಕೋರ್ಟ್, ಸುಪ್ರೀಂಕೋರ್ಟ್ ನ ಹಲವು ಪ್ರಕರಣಗಳನ್ನು ಉಲ್ಲೇಖಿಸಿ ಜೀವನಾಂಶ ನೀಡಲು ಆದೇಶಿಸಿತು. ಅಲ್ಲದೆ ಸಂತ್ರಸ್ತೆಯು ನ್ಯಾಯಾಲಯದ ಮೆಟ್ಟಿಲೇರಿದ ಧೈರ್ಯವನ್ನೂ ಶ್ಲಾಘಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications