ಮೋದಿ ನೀಡಿರುವ ಗುರಿ ಮುಟ್ಟಲು ಸರ್ವ ಪ್ರಯತ್ನ: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?
ನವದೆಹಲಿ,ಸೆಪ್ಟೆಂಬರ್ 09: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ವಿಶ್ವ EV (ಎಲೆಕ್ಟ್ರಿಕ್ ವಾಹನ) ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ (Society of Indian Automobile Manufacturers-SIAM) ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸುವ ಮುನ್ನ ಮಾತನಾಡಿದ ಅವರು, ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು, ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರೀಕ್ ವಾಹನ (EV) ಉದ್ಯಮವೂ ಭಾರತದಲ್ಲಿ ವೆಗಗತಿಯಲ್ಲಿ ಬೆಳೆಯುತ್ತಿದೆ ಎಂದು ಹೇಳಿದರು.

ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ರು. ಮುಂದಿನ ಪೀಳಿಗೆಯ ಇಂಧನ ಕ್ಷಮತೆ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಸುಧಾರಿತ ಬ್ಯಾಟರಿ ಸೇಲ್ಗಳಿಗೆ (ACC) ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ((PLI) ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದ ಸಚಿವರು; ₹18,100 ಕೋಟಿ ಗುರಿಯ ಅನುದಾನ ಹೊಂದಿರುವ ಈ ಯೋಜನೆಯು 50 ಗಿಗಾ ವಾಟ್-ಗೋಚಾರ್ (GWh) ಉತ್ಪಾದನಾ ಸಾಮರ್ಥ್ಯವನ್ನು ಹೊಂದಲು ಉದ್ದೇಶಿಸಲಾಗಿದೆ. ಮೂರು ಕಂಪನಿಗಳು ಈಗಾಗಲೇ 30 GWh ನೀಡಲು ಸಾಮರ್ಥ್ಯ ಹೊಂದಿವೆ ಎಂದರು.
FAME-II ಯೋಜನೆಯು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ತಯಾರಿಕೆಗೆ ಕೊಡಲಾಗುತ್ತಿರುವ ಪ್ರೋತ್ಸಾಹವನ್ನು ಮುಂದುವರಿಸಲಾಗುವುದು. ಇದಕ್ಕೆ ₹15,500 ಕೋಟಿ ಹಣವನ್ನು ಒದಗಿಸಲು ಬಜೆಟ್ ನಿರ್ಧರಿಸಲಾಗಿದ್ದು , ಮಾಲಿನ್ಯ ಕಡಿಮೆ ಮಾಡುವುದು ಮತ್ತು ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ವಿದ್ಯುದೀಕರಿಸಲು ಈ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.
ಇದರೊಂದಿಗೆ ಮಾರ್ಚ್ 2024ರಲ್ಲಿ ಆರಂಭವಾದ ಎಲೆಕ್ಟ್ರಿಕ್ ಮೋಬಿಲಿಟಿ ಪ್ರೋತ್ಸಾಹ ಯೋಜನೆ (EMPS) ಸರಕಾರ ಹೆಚ್ಚು ಒತ್ತು ನೀಡಿದೆ. ವರ್ಷದಿಂದ ವರ್ಷಕ್ಕೆ ಇದು ವೃದ್ಧಿಯಾಗುತ್ತಲೇ ಇದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗಾಗಿ ಸರ್ಕಾರದ ಅಚಲ ಬದ್ಧತೆ ಹೊಂದಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಫಾರ್ಮುಲಾ ಒನ್ ರೇಸರ್ ಕಾರ್ತಿಕ್ ನಾರಾಯಣ್, SIAM ಅಧ್ಯಕ್ಷ ವಿನೋದ ಅಗರ್ವಾಲ್ , ಉಪಾಧ್ಯಕ್ಷ ಶೈಲೇಶ್ ಚಂದ್ರ, ನಿರ್ದೇಶಕರಾದ ರಾಜೇಶ್ ಮೆನನ್ ಮತ್ತು ಡೈರೆಕ್ಟರ್ ಜನರಲ್ ಪ್ರಶಾಂತ್ ಬ್ಯಾನರ್ಜಿ ಸೇರಿದಂತೆ ಉದ್ಯಮದ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಲಿಗೆ ಹಸಿರು ನಿಶಾನೆ ತೋರಿಸುವ ಮುನ್ನ ಅವರು ಎಲೆಕ್ಟ್ರಿಕ್ ಆಟೋವನ್ನು ಚಾಲನೆ ಮಾಡಿದರು. ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಚಾಲನೆ ಮಾಡಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications