ರಾಜ್ಯದ ಎಲ್ಲಾ ಆಸ್ಪತ್ರೆಗಳ ಶೇ.80ರಷ್ಟು ಹಾಸಿಗೆಗಳು ಕೊರೊನಾ ಸೋಂಕಿತರಿಗೆ ಮೀಸಲು: ಸುಧಾಕರ್
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿರುವ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೇವಲ ಹಾಸಿಗೆಗಳು ಮಾತ್ರವಲ್ಲದೆ ಐಸಿಯುಗಳನ್ನು ಕೂಡ ಮೀಸಲಿಡುವಂತೆ ತಿಳಿಸಿದ್ದಾರೆ. ಡಯಾಲಿಸಿಸ್ ರೋಗಿಗಳು, ಮದರ್ ಕೇರ್ ಕೇಂದ್ರಗಳು, ಜೀವಕ್ಕೆ ಕುತ್ತು ತರುವ ಕಾಯಿಲೆಗಳಿಂದ ನರಳುತ್ತಿರುವ ಹಾಸಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲಾ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗಾಗಿಯೇ ಮೀಸಲಿಡಬೇಕು ಎಂದು ಹೇಳಿದ್ದಾರೆ.
ದೇಶದಲ್ಲಿ ಈವರೆಗೂ ಸುಮಾರು 12.7 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದ್ದು, ಒಂದು ಅಥವಾ ಎರಡು ಡೋಸ್ ಲಸಿಕೆ ಪಡೆದ 99.96% ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಕಂಡುಬಂದಿಲ್ಲ.

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗಿರುವ ಅತ್ಯಂತ ದೊಡ್ಡ ಅಸ್ತ್ರವಾಗಿದ್ದು ಎಲ್ಲ ಅರ್ಹ ವ್ಯಕ್ತಿಗಳೂ ಕೂಡಲೇ ಲಸಿಕೆ ಪಡೆಯಬೇಕೆಂದು ಮನವಿ ಮಾಡುತ್ತೇನೆ.
ಕೊರೊನಾ ಸೋಂಕು ಹೆಚ್ಚಿರುವ ಕಲಬುರ್ಗಿ, ಬೀದರ್, ವಿಜಯಪುರ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಲಾಯಿತು.
ಜಿಲ್ಲೆಯಲ್ಲಿ ಸೋಂಕಿನ ಸ್ಥಿತಿಗತಿ ಹಾಗೂ ಕೈಗೊಂಡಿರುವ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಲಾಯಿತು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ಪ್ರತಿಯೊಬ್ಬ ಕೊರೊನಾ ಸೋಂಕಿತ ವ್ಯಕ್ತಿಗೂ ಸೂಕ್ತ ಚಿಕಿತ್ಸೆ ಒದಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.
Recommended Video
-
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
ಇರಾನ್ ಹೇಳಿಕೆಯಲ್ಲಿ ಗೊಂದಲ ಸೃಷ್ಟಿಸಿದ HE ಪದ: ಇದು ಉದ್ದೇಶಪೂರ್ವಕವೇ? ಮಂಜುನಾಥ ಕೊಳ್ಳೇಗಾಲ ವಿಶ್ಲೇಷಣೆ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications