ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು? ಎಲ್ಲ ಸುಳ್ಳು ಅಂದ್ರು ಗೌಡ್ರು!

|
Google Oneindia Kannada News

Recommended Video

ಸಮ್ಮಿಶ್ರ ಸರ್ಕಾರದ ಬಗ್ಗೆ ಇದ್ದ ಗೊಂದಲವನ್ನ ಬಗೆಹರಿಸಿದ ಎಚ್ ಡಿ ದೇವೇಗೌಡ | Oneindia kannada

ಬೆಂಗಳೂರು, ಆಗಸ್ಟ್ 31: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮತ್ತೆ ಬಿರುಕು ಮೂಡುವ ಲಕ್ಷಣಗಳು ಗೋಚರಿಸುತ್ತಿವೆ ಎಂಬ ವದಂತಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಳ್ಳಿಹಾಕಿದ್ದಾರೆ.

ರಾಹುಲ್ ಬಳಿ ಸಿದ್ದು ಬಗ್ಗೆ ದೂರು ನೀಡಿದರಾ ಕುಮಾರಸ್ವಾಮಿ?ರಾಹುಲ್ ಬಳಿ ಸಿದ್ದು ಬಗ್ಗೆ ದೂರು ನೀಡಿದರಾ ಕುಮಾರಸ್ವಾಮಿ?

"ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಮತ್ತು ಜೆಡಿ ಎಸ್ ನಡುವೆ ಎಲ್ಲವೂ ಚೆನ್ನಾಗಿಯೇ ಇದೆ. ನಾವು ಎಂದಿಗೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಲೋಕಸಭಾ ಚುನಾವಣೆಯಲ್ಲೂ ಒಟ್ಟಾಗಿಯೇ ಹೋರಾಡುತ್ತೇವೆ" ಎಂದು ಎಚ್ ಡಿ ದೇವೇಗೌಡ ಹೇಳಿದರು.

ಮೈತ್ರಿ ಸರ್ಕಾರಕ್ಕೆ 100 ದಿನ : ಮಾಡಿದ್ದೇನು?, ಮಾಡಬೇಕಿರುವುದೇನು? ಮೈತ್ರಿ ಸರ್ಕಾರಕ್ಕೆ 100 ದಿನ : ಮಾಡಿದ್ದೇನು?, ಮಾಡಬೇಕಿರುವುದೇನು?

All is well between JDS and Congress: HD Deve Gowda

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇತ್ತೀಚೆಗಷ್ಟೇ ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ನೀಡಿದ್ದು ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್-ಜೆಡಿಎಸ್ ನಡುವೆ ಬಿರುಕು ಮೂಡಿದೆ ಎನ್ನಲಾಗಿತ್ತು. ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಬಳಿ ದೂರು ಹೇಳುತ್ತಾರೆ ಎನ್ನಲಾಗಿತ್ತು. ಆದರೆ ಅಂಥ ಬೆಳವಣಿಗೆ ಏನೂ ನಡೆಯಲಿಲ್ಲ.

English summary
Former prime minister HD Deve Gowda while asking about differences in JDS and Congress coalition government in Karnataka, said: All is well between Congress and JDS. They will not allow BJP to come to power and will collectively fight together in case of any eventuality including the parliamentary elections
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X