ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದ: ಕೇಂದ್ರದ ವಿರುದ್ಧ ತೊಡೆತಟ್ಟಲು ಸರ್ವ ಪಕ್ಷ ಸಭೆ ನಿರ್ಣಯ

By Manjunatha
|
Google Oneindia Kannada News

ಬೆಂಗಳೂರು, ಜೂನ್ 30: ಕೇಂದ್ರ ರಚಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕುರಿತು ಸರ್ವಪಕ್ಷ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಒಮ್ಮತದಿಂದ ತೆಗೆದುಕೊಳ್ಳಲಾಗಿದೆ.

ಸಿಎಂ ಕುಮಾರಸ್ವಾಮಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸದಾನಂದ ಗೌಡ, ಹಲವು ಸಚಿವರು, ಶಾಸಕರು ಮತ್ತು ರಾಜ್ಯದ ಸಂಸದರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, ಜೂನ್ 2ರಂದು ಕೇಂದ್ರದ ಕಾವೇರಿ ನೀರು ನಿಯಂತ್ರಣ ಸಮಿತಿ ಕರೆದಿರುವ ಸಭೆಗೆ ರಾಜ್ಯದ ಪ್ರತಿನಿಧಿಯನ್ನು ಕಳುಹಿಸುವ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು ಎಂದರು.

All party meeting held today to discuss about cauvery issue

ಸಭೆಯಲ್ಲಿ ರಾಜ್ಯದ ಕಷ್ಟಗಳನ್ನು ಹೇಳಲು, ಸಮಿತಿಯ ಚರ್ಚೆಯ ಬಗ್ಗೆ ತಿಳಿಯಲು ರಾಜ್ಯದ ಪ್ರತಿನಿಧಿ ಹಾಜರಿರುವುದು ಅವಶ್ಯಕ. ಅಲ್ಲದೆ ಪ್ರತಿನಿಧಿ ಇಲ್ಲದೆಯೂ ಸ್ವತಂತ್ರ್ಯವಾಗಿ ನಿರ್ಣಯ ತೆಗೆದುಕೊಳ್ಳುವ ಅವಕಾಶ ಸಮಿತಿಗೆ ಇರುವ ಕಾರಣ ಪ್ರತಿನಿಧಿಯನ್ನು ಕಳುಹಿಸಲೇ ಬೇಕಿದೆ ಎಂದು ಅವರು ಹೇಳಿದರು.

ರಾಜ್ಯದ ಒಟ್ಟು 40 (28 ಸಂಸದರು + 12 ರಾಜ್ಯಸಭಾ ಸದಸ್ಯರು) ಸಂಸದರು ಜೂನ್ 18ರಿಂದ ಆಗುವ ಲೋಕಸಭೆ ಅಧಿವೇಶನದಲ್ಲಿ ಕಾವೇರಿ ವಿಷಯದ ಬಗ್ಗೆ ಸದನದಲ್ಲಿ ಹೊರಾಟ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಬಿಜೆಪಿ ಕೇಂದ್ರ ಸಚಿವ ಅನಂತ್‌ಕುಮಾರ್ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

All party meeting held today to discuss about cauvery issue

ಕೇಂದ್ರದ ಏಕಪಕ್ಷೀಯ ನಿರ್ಧಾರ ಕುರಿತು ರಾಜ್ಯವು ನ್ಯಾಯಾಲಯದ ಮೊರೆ ಹೋಗಬೇಕೆಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದ್ದು. ಹಿರಿಯ ನ್ಯಾಯವಾದಿ ನಾರಿಮನ್ ಅವರ ಜೊತೆ ಚರ್ಚಿಸಿದ ನಂತರ ರಾಜ್ಯವು ಕೇಂದ್ರದ ನಡೆಯ ವಿರುದ್ಧ ಸರ್ವೋಚ್ಛನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದರು.

ಸಿದ್ದರಾಮಯ್ಯ ಅವರು ಸಭೆಗೆ ಗೈರಾದ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಅವರನ್ನು ವೈಯಕ್ತಿಕವಾಗಿ ನಾನೇ ಸಭೆಗೆ ಆಹ್ವಾನಿಸಿದ್ದೆ. ವೈಯಕ್ತಿಕ ಕಾರಣಗಳಿಂದಾಗಿ ಸಭೆಗೆ ಆಗಮಿಸಲು ಆಗದು ಆದರೆ ಸಭೆಯ ನಿರ್ಣಯಗಳಿಗೆ ಸಮ್ಮತಿ ಇದೆಯೆಂದು ಅವರು ನಿನ್ನೆಯೇ ತಿಳಿಸಿದ್ದರು ಎಂದು ಡಿಕೆಶಿ ಸ್ಪಷ್ಟಪಡಿಸಿದರು.

English summary
All party meeting held in Bengaluru today to discuss Cauvery issue. Meeting held in the leadership of CM Kumaraswamy. BJP president Yeddyurappa and many MPs and MLAs were in the meeting. Siddaramiah absent to meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X