ಸರ್ವಪಕ್ಷ ಸಭೆ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 23: ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.
ಮೇಕೆದಾಟು, ಕಾವೇರಿ, ಮಹದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಸರ್ವಪಕ್ಷಗಳ ನಿಯೋಗದ ಮೂಲಕ ತೆರಳಿ ಪ್ರಧಾನಿಯನ್ನು ಭೇಟಿಯಾಗೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಲಿವೆ ಎಂದು ಭಾವಿಸಿದ್ದೇನೆ. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ ಎಂದು ಸಿದ್ದರಾಮಯ್ಯ ಎಕ್ಸ್ನಲ್ಲಿ ಮಾಡಲಾದ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ಬೆಂಬಲ ನೀಡಲಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ.
ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ. 7/7
— CM of Karnataka (@CMofKarnataka) August 23, 2023
- ಮುಖ್ಯಮಂತ್ರಿ @siddaramaiah #ಸರ್ವಪಕ್ಷಸಭೆ #ಕಾವೇರಿ #ಮಹದಾಯಿ…
ಕಾವೇರಿ ವಿವಾದ ಬಹಳ ಹಳೆಯದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಕಾವೇರಿ ಪ್ರಾಧಿಕಾರವು 22 ಸಭೆ ಹಾಗೂ ನಿಯಂತ್ರಣ ಸಮಿತಿಯು 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.

ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯ ವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20ನೇ ತಾರೀಖಿನ ವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ.
ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ. ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು.
ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯೂಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆಂಬ ವಿಶ್ವಾಸವಿದೆ.
ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications