ಮುಜರಾಯಿ ದೇಗುಲ: ಶಾಸಕರಿಗೆ 40 ಲಕ್ಷ ದೇಣಿಗೆ

ಪಕ್ಷ ಯಾವುದೇ ಆದರೂ ಎಲ್ಲ ಶಾಸಕರಿಗೂ ಅವರವರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮುಜರಾಯಿ ದೇಗುಲಗಳ ಜೀರ್ಣೋದ್ಧಾರಕ್ಕಾಗಿ ಈ ದೇಣಿಗೆ ಪಡೆಯಲಿದ್ದಾರೆ ಎಂದು ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ವಿಧಾನಪರಿಷತ್ತಿನಲ್ಲಿ ಸೋಮವಾರ ಹೇಳಿದ್ದಾರೆ.
'ವಿಧಾನಸಭೆ ಸದಸ್ಯರಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ. ವಿಧಾನಪರಿಷತ್ ಸದಸ್ಯರಿಗೆ ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ. ಜತೆಗೆ, ಪಕ್ಷವನ್ನು ಆಧರಿಸಿ ಶಾಸಕರಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ' ಎಂದು ಬಿಜೆಪಿ ಸದಸ್ಯ ವಿಜಯ್ ಶಂಕರ್ ಅವರು ಗಂಭೀರ ಆರೋಪ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವರು 'ಸದಸ್ಯರ ನಡುವೆ ಯಾವುದೇ ಭೇದಭಾವ ಮಾಡಿಲ್ಲ. ಎಲ್ಲ ಸದಸ್ಯರಿಗೂ ಅನುದಾನ ನೀಡಲಾಗುವುದು' ಎಂದು ಹೇಳಿದರು.
'ಶಾಸಕರು ತಮ್ಮ ವ್ಯಾಪ್ತಿಯ ದೇವಾಲಯಗಳ ಅಭಿವೃದ್ಧಿಗೆ ಎಷ್ಟು ಅನುದಾನ ಬೇಕು ಎಂಬ ಬಗ್ಗೆ ವಿವರವನ್ನು ಕಳುಹಿಸಿದರೆ ಇಲಾಖೆಯು ತಕ್ಷಣ ಅದನ್ನು ಪರಿಶೀಲಿಸಿ, ಅನುದಾನ ಬಿಡುಗಡೆ ಮಾಡಲಿದೆ' ಎಂದು ಮುಜರಾಯಿ ಸಚಿವರು ಸ್ಪಷ್ಟಪಡಿಸಿದರು.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿರುವ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ 617 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮುಜರಾಯಿ ಮತ್ತು ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2010-11ರಲ್ಲಿ 2939 ದೇವಾಲಯಗಳಿಗೆ 199 ಕೋಟಿ, 2011-12ರಲ್ಲಿ 4253 ದೇವಾಲಯಗಳಿಗೆ 167 ಕೋಟಿ, ಮತ್ತು 2012-13ರಲ್ಲಿ 5835 ದೇವಾಲಯಗಳಿಗೆ 250 ಕೋಟಿ ರೂ. ಬಿಡುಡಗೆ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 34,453 ದೇವಾಲಯಗಳು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿದ್ದು, 2013-14 ನೇ ಸಾಲಿನಲ್ಲಿ ಇದುವರೆಗೂ 27 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಮುಜರಾಯಿ ಸಚಿವ ಹುಕ್ಕೇರಿ ಅವರು ವಿಧಾನಸಭೆಯಲ್ಲಿ ತಿಳಿಸಿದರು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications