ಮೇಲುಕೋಟೆಯ ವೈರಮುಡಿ ಉತ್ಸವಕ್ಕೆ ಬಸ್ ಸೇವೆ

ಮಂಡ್ಯ, ಮಾ. 30 : ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಉತ್ಸವ ಸೋಮವಾರ ರಾತ್ರಿ ನಡೆಯಲಿದೆ. ಉತ್ಸವಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸೋಮವಾರ ರಾತ್ರಿ 8 ಗಂಟೆಗೆ ವೈರಮುಡಿ ಉತ್ಸವ ಆರಂಭವಾಗಲಿದ್ದು, ಮಂಗಳವಾರ ಮುಂಜಾನೆ 3.30ರ ತನಕ ನಡೆಯಲಿದೆ. ಮಂಡ್ಯ, ಮೈಸೂರು, ನಾಗಮಂಗಲ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಿಂದ ಸಾವಿರಾರು ಭಕ್ತರು ಮೇಲುಕೋಟೆಗೆ ಆಗಮಿಸಲಿದ್ದಾರೆ. [ಮೇಲುಕೋಟೆ ದೇವಾಲಯದಿಂದ ಆಭರಣ ನಾಪತ್ತೆ]

melukote

ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು 1,500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮಂಡ್ಯ, ಮೈಸೂರು, ನಾಗಮಂಗಲದಿಂದ ಬರುವ ಪ್ರಯಾಣಿಕರಿಗಾಗಿ ವಿಶೇಷ ಬಸ್ ಸೇವೆ ಒದಗಿಸಲಾಗಿದೆ. [ದೇವಾಲಯದಲ್ಲಿ ನಡೆದ ಅಪಶಕುನಕ್ಕೆ ಬೆಚ್ಚಿಬಿದ್ದ ಜನತೆ]

ಬೆಂಗಳೂರಿನಿಂದ ಬಸ್ ಸೌಲಭ್ಯ : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವೈರಮುಡಿ ಉತ್ಸವಕ್ಕಾಗಿ ಒಂದು ದಿನದ ಪ್ರವಾಸವನ್ನು ಮಾರ್ಚ್ 30 ರಂದು ಏರ್ಪಡಿಸಿದೆ. ಬೆಂಗಳೂರಿನ ಬಾದಾಮಿ ಹೌಸ್‍ನಿಂದ ಮಧ್ಯಾಹ್ನ 3 ಗಂಟೆಗೆ ಈ ಬಸ್ ಹೊರಡಲಿದ್ದು, ಮಂಗಳವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದೆ. ಪ್ರಯಾಣದರ 550 ರೂ. ಹೆಚ್ಚಿನ ಮಾಹಿತಿಗಾಗಿ 43344334, 22275869, 8970650070 ದೂರವಾಣಿ ಸಂಖ್ಯೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+