ನಾಡದೇವಿಯ ಭಾವಚಿತ್ರ: ತಜ್ಞರ ಶಿಫಾರಸ್ಸಿಗೆ ಅಧಿಕೃತ ಮುದ್ರೆ ಶೀಘ್ರ
ಬೆಂಗಳೂರು, ನವೆಂಬರ್ 21: ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಶಿಫಾರಸು ನೀಡಿದೆ. ಈ ಶಿಫಾರಸಿಗೆ ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳಲಿದೆ. ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರುತ್ತದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಹಲವಾರು ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಬಳಸಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ನಿರ್ದಿಷ್ಟವಾದ ಚಿತ್ರಕೃತಿಯ ಕೊರತೆಯಿರುವ ಹಿನ್ನೆಲೆಯಲ್ಲಿ ಸರ್ಕಾರವು ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.
ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಸಮಿತಿ ಸೂಚಿಸಿರುವಂತೆ ಕಲಾವಿದರಾದ ಸೋಮಶೇಖರ್ ಕೆ ಅವರಿಗೆ ಚಿತ್ರ ಸಿದ್ಧಪಡಿಸಿ ಸಲ್ಲಿಸಲು ಕೋರಲಾಗಿತ್ತು.
ಸಮಿತಿಯ ಶಿಫಾರಸಿನಂತೆ ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಭಾವಚಿತ್ರದಲ್ಲಿ ಈ ಕೆಳಗಿನ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ.

1. ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ.
2. ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವ ಕಂಗೊಳಿಸಿದೆ.
3. ದ್ವಿಭುಜ ಅಂದರೆ ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗಿದೆ.
4. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ.
5. ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ.
6. ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.
7. ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.
8. ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.
9. ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ ಹಾರಗಳು, ಕರ್ನಾಟಕ ಲಾಂಛನ - ಗಂಡ ಭೇರುಂಡ ಪದಕ ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ.
ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ್ಯೋತಕಗಳಾಗಿವೆ. ತೆಳುವಾದ ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ಒಂದು ರೀತಿಯ ಮೆರಗು ನೀಡಿದೆ, ಕೆಳಗೆ ಸುಂದರ ಸದೃಢ ತಾವರೆ ಹೂವು(ಕಮಲ) ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ.
10. ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಸಸ್ಯಕಾಶಿಯು ಸೊಬಗನ್ನು ಅಳವಡಿಸಲಾಗಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications