Get Updates
Get notified of breaking news, exclusive insights, and must-see stories!

ನಾಡದೇವಿಯ ಭಾವಚಿತ್ರ: ತಜ್ಞರ ಶಿಫಾರಸ್ಸಿಗೆ ಅಧಿಕೃತ ಮುದ್ರೆ ಶೀಘ್ರ

ಬೆಂಗಳೂರು, ನವೆಂಬರ್ 21: ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಶಿಫಾರಸು ನೀಡಿದೆ. ಈ ಶಿಫಾರಸಿಗೆ ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳಲಿದೆ. ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರುತ್ತದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಹಲವಾರು ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಬಳಸಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ನಿರ್ದಿಷ್ಟವಾದ ಚಿತ್ರಕೃತಿಯ ಕೊರತೆಯಿರುವ ಹಿನ್ನೆಲೆಯಲ್ಲಿ ಸರ್ಕಾರವು ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.

ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಸಮಿತಿ ಸೂಚಿಸಿರುವಂತೆ ಕಲಾವಿದರಾದ ಸೋಮಶೇಖರ್ ಕೆ ಅವರಿಗೆ ಚಿತ್ರ ಸಿದ್ಧಪಡಿಸಿ ಸಲ್ಲಿಸಲು ಕೋರಲಾಗಿತ್ತು.

ಸಮಿತಿಯ ಶಿಫಾರಸಿನಂತೆ ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಭಾವಚಿತ್ರದಲ್ಲಿ ಈ ಕೆಳಗಿನ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ.

all set to approval of expert committee recommendations in nagadevathe photo

1. ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ.

2. ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವ ಕಂಗೊಳಿಸಿದೆ.

3. ದ್ವಿಭುಜ ಅಂದರೆ ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗಿದೆ.

4. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ.

5. ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ.

6. ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.

7. ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.

8. ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.

9. ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ ಹಾರಗಳು, ಕರ್ನಾಟಕ ಲಾಂಛನ - ಗಂಡ ಭೇರುಂಡ ಪದಕ ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ.

ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ್ಯೋತಕಗಳಾಗಿವೆ. ತೆಳುವಾದ ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ಒಂದು ರೀತಿಯ ಮೆರಗು ನೀಡಿದೆ, ಕೆಳಗೆ ಸುಂದರ ಸದೃಢ ತಾವರೆ ಹೂವು(ಕಮಲ) ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ.

10. ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಸಸ್ಯಕಾಶಿಯು ಸೊಬಗನ್ನು ಅಳವಡಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+