ರಾಜ್ಯದ ನಗರಗಳಲ್ಲಿ ಮೇ ಅಂತ್ಯದ ವೇಳೆಗೆ ನಗರ ಸಾರಿಗೆ'
ಬೆಂಗಳೂರು, ಮಾರ್ಚ್, 14: ರಾಜ್ಯದ ಎಲ್ಲ ಪ್ರಮುಖ ನಗರಗಳಲ್ಲಿ ಮೇ ಅಂತ್ಯದ ವೇಳೆಗೆ ನಗರ ಸಾರಿಗೆ ಸೇವೆ ಆರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇತ್ತೀಚೆಗೆ ಹೇಳಿದ್ದಾರೆ.
ಬಹುತೇಕ ಕಡೆ ನಗರ ಸಾರಿಗೆ ಸೇವೆ ಆರಂಭವಾಗಿದ್ದರೂ ಇನ್ನೂ ಹದಿನಾಲ್ಕು ನಗರಗಳಲ್ಲಿ ನಗರ ಸಾರಿಗೆ ಆರಂಭವಾಗಿಲ್ಲ. ಆದರೆ ಮೇ ತಿಂಗಳ ವೇಳೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಸೇರಿದಂತೆ ಪ್ರಮುಖ ನಗರಗಳಲ್ಲಿ ನಗರ ಸಾರಿಗೆ ಸೇವೆ ಆರಂಭವಾಗಲಿದೆ ಎಂದರು.[ಕೆಎಸ್ಆರ್ಟಿಸಿಯ ಬಯೋ ಬಸ್ ಉಪಯೋಗಗಳು]
ಚಾಮರಾಜನಗರ, ಮಂಡ್ಯ, ಮದ್ದೂರು, ಶಿವಮೊಗ್ಗ, ರಾಮನಗರ, ಭದ್ರಾವತಿ, ಉಡುಪಿ, ಚಿಕ್ಕಮಗಳೂರು, ಸಾಗರ ಸೇರಿದಂತೆ ಅನೇಕ ನಗರಗಳಿಗೆ ಹೆಚ್ಚುವರಿ ಸಾರಿಗೆ ಸೇವೆ ಒದಗಿಸಲಾಗುವುದು. ಶಿವಮೊಗ್ಗಕ್ಕೆ ಅರವತ್ತೈದು ಬಸ್ ಗಳನ್ನು ಒದಗಿಸುವುದೂ ಸೇರಿದಂತೆ 1083 ಹೊಸ ಬಸ್ ಖರೀದಿಗೆ ಸರ್ಕಾರ ಮುಂದಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ವಿವರ ನೀಡಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮಾದರಿಯಲ್ಲಿ ಜಿಲ್ಲಾ ಕೇಂದ್ರಗಳ ಮೂಲಕ ನಗರ ಸಾರಿಗೆ ಅಭಿವೃದ್ಧಿ ಪಡಿಸಲಾಗುವುದು. ಹಲವಾರು ಕಾರಣಗಳಿಂದ ನಗರ ಸಾರಿಗೆ ವ್ಯವಸ್ಥೆಗೆ ಬಸ್ ಗಳನ್ನು ಒದಗಿಸುವುದು ವಿಳಂಬವಾಗಿದೆ. ಆದರೆ, ಈಗ ಎಲ್ಲ ತಾಂತ್ರಿಕ ತೊಂದರೆಗಳು ದೂರವಾಗಿವೆ ಎಂದು ಅವರು ಸ್ಪಷ್ಟಪಡಿಸಿದರು.[16 ಪ್ರಮುಖ ನಗರಗಳಲ್ಲಿ ನಗರ ಸಾರಿಗೆ ಬಸ್ ಸೌಲಭ್ಯ]
ಕೆಲ ಖಾಸಗಿ ವಾಹನ ಸೇವೆಗಳು ರೈಲ್ವೇ ನಿಲ್ದಾಣದಿಂದ ಮನೆಯವರೆಗೆ ಕರೆದೊಯ್ಯಲು ದುಬಾರಿ ಶುಲ್ಕ ವಿಧಿಸುತ್ತಿರುವುದರಿಂದ ಹಿಡಿದು ಹಲವು ರೀತಿಯಲ್ಲಿ ಪ್ರಯಾಣಿಕರನ್ನು ದೋಚುವ ಕೆಲಸ ಮಾಡುತ್ತಿವೆ ಎಂಬುದು ತಮ್ಮ ಗಮನಕ್ಕೆ ಬಂದಿದೆ.
ರೈಲ್ವೇ ನಿಲ್ದಾಣದಿಂದ ಹಿಡಿದು, ಬಸ್ ನಿಲ್ದಾಣದಿಂದ ಹಿಡಿದು ತಮ್ಮ ತಮ್ಮ ಮನೆಗಳ ತನಕ ತೆರಳಲು ನಗರ ಸಾರಿಗೆ ವ್ಯವಸ್ಥೆ ಜನರಿಗೆ ಅನುಕೂಲ ಒದಗಿಸಿಕೊಡಲಿದೆ ಎಂದರು.
ಅಂಗವಿಕಲರ ಪಾಸ್, ವೃದ್ಧರಿಗೆ ನೀಡುವ ಪಾಸ್, ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪಾಸ್ ಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications