Get Updates
Get notified of breaking news, exclusive insights, and must-see stories!

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಭ್ರಷ್ಟಾಚಾರದ ಆರೋಪ: ತನಿಖೆಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು, ಮೇ 30: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (ಕೆಕೆಆರ್‌ಡಿಬಿ) ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಪಕ್ಷದ ನಾಯಕ ಪ್ರಿಯಾಂಕ್ ಖರ್ಗೆ ಅವರ ದೂರಿನ ಮೇರೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಖರ್ಗೆ ಈಗಾಗಲೇ ಹೇಳಿದ್ದಾರೆ. ನಿಧಿಯ ದುರುಪಯೋಗದ ತನಿಖೆಗೆ ಆದೇಶ ಮಾಡಲಾಗಿದೆ. ಬಿಜೆಪಿಯ ಹಿಡನ್ ಅಜೆಂಡಾವನ್ನು ಪೂರೈಸಲು ಮತ್ತು ಅವರ ಸ್ವಂತ ಶಾಸಕರಿಗೆ ಕೋಟಿಗಳನ್ನು ತಿರುಗಿಸಲಾಗಿದೆ. ಈ ಹಿಂದೆ ಭರವಸೆ ನೀಡಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Karnataka Chief Minister Siddaramaiah

ಕರ್ನಾಟಕದ ಕೆಲವು ಬಿಜೆಪಿ ನಾಯಕರು ಗುತ್ತಿಗೆದಾರರೊಂದಿಗೆ ಕೈಜೋಡಿಸಿದ್ದು, ಕೆಕೆಆರ್‌ಡಿಬಿಗೆ ಬಿಡುಗಡೆಯಾದ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಈ ಹಿಂದೆ ಆರೋಪಿಸಿದ್ದರು. ಈ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ಚುನಾವಣೆಯ ಪ್ರಚಾರದ ಪ್ರಮುಖ ವಿಷಯವೆಂದರೆ ಭ್ರಷ್ಟಾಚಾರವು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪರಸ್ಪರ ಆರೋಪಗಳನ್ನು ಮಾಡಿದ್ದವು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ? ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಕರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.

Karnataka Chief Minister Siddaramaiah

ಅಧಿಕಾರ ವ್ಯಾಪ್ತಿ ಮೀರಿ 327 ಕೋಟಿ ರೂ. ದೇಶಿ ಹಸುಗಳ ಸಾಕಾಣಿಕೆಗೆ ಪ್ರೋತ್ಸಾಹ ಧನ ನೀಡಿರುವ ಮಾಹಿತಿ ಇದೆ. ಈಗಾಗಲೇ ಹಸು ಹೊಂದಿರುವವರಿಗೆ ಅನುದಾನ ನೀಡಿದಂತೆ ದಾಖಲೆ ಸೃಷ್ಟಿಸಲಾಗಿದೆ. ಅಧ್ಯಕ್ಷರು, ಕಾರ್ಯದರ್ಶಿಗಳ ವ್ಯಾಪ್ತಿಗೆ ಇಲ್ಲದಿದ್ದರೂ ಖಾಸಗಿ ಅನುದಾನಿತ ಶಾಲೆಗಳಿಗೆ 327 ಕೋಟಿ ಮಂಜೂರು ಮಾಡಲಾಗಿದೆ. ಅಧಿಕಾರ ವ್ಯಾಪ್ತಿ ಮೀರಿ ಹೊಲಿಗೆ ತರಬೇತಿಗೆ 2 ಕೋಟಿ ವೆಚ್ಚ ಮಾಡಲಾಗಿದೆ.

ಸರ್ಕಾರದ ಅನುಮೋದನೆ ಇಲ್ಲದೆ ಕೊರೋನಾದಿಂದ ಮೃತ ಖಾಸಗಿ ಶಿಕ್ಷಕರಿಗೆ 50 ಸಾವಿರ ಪರಿಹಾರ ನೀಡಲಾಗಿದೆ. ಲೋಕೋಪಯೋಗಿ ಬಾಡಿಗೆ ಕಟ್ಟಡಗಳಿಗೆ ನಿಯಮ ಬಾಹಿರವಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಒಂದು ಜಿಲ್ಲೆಗೆ ಒದಗಿಸುವ ಅನುದಾನ ಸೇಡಂ ತಾಲೂಕು ಒಂದಕ್ಕೆ ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಬಳಸಲಾಗಿದೆ. ಮೇಲ್ಕಂಡ ವಿಚಾರಗಳಿಗೆ ಸೂಕ್ತ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+