ಗರ್ಭಿಣಿ ಹೊಟ್ಟೆಯಲ್ಲಿ 3 ಅಡಿ ಬಟ್ಟೆ, ವೈದ್ಯರ ಎಡವಟ್ಟಿಗೆ ಶಿಕ್ಷೆ ಗ್ಯಾರಂಟಿ!
'ವೈದ್ಯೋ ನಾರಾಯಣ ಹರಿ' ಅಂತಾ ಭಾರತೀಯರು ವೈದ್ಯರನ್ನು ಗೌರವಿಸುತ್ತಾರೆ. ಹಾಗೇ ದೇವರಿಗೆ ವೈದ್ಯರನ್ನು ಹೋಲಿಕೆ ಕೂಡ ಮಾಡುತ್ತಾರೆ. ಯಾಕಂದ್ರೆ ವೈದ್ಯರು ಜನರ ಜೀವ ಉಳಿಸುವ ಕೆಲಸ ಮಾಡುತ್ತಾರೆ. ಆದರೆ ಇಲ್ಲೊಂದು ಖಾಸಗಿ ಆಸ್ಪತ್ರೆ ವೈದ್ಯರು ಮಹಿಳೆಯ ಹೊಟ್ಟೆಯಲ್ಲಿ 3 ಅಡಿ ಉದ್ದದ ಬಟ್ಟೆಯನ್ನೇ ತುರುಕಿದ ಆರೋಪ ಕೇಳಿಬಂದಿದೆ!
ಆರೋಗ್ಯವೇ ಭಾಗ್ಯ ಅಂತಾರೆ ಹಿರಿಯರು, ಆದರೆ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರ ಕೂಡ ಮಾಫಿಯಾ ಆಗಿದೆ ಎಂಬ ಆರೋಪ ಕೇಳಿಬರುತ್ತದೆ. ಯಾಕಂದ್ರೆ ಆರೋಗ್ಯ ಕ್ಷೇತ್ರದ ಮೇಲೆ ಹೂಡಿಕೆ ಮಾಡಿ, ಭಾರಿ ಲಾಭ ಮಾಡಲು ಕೆಲವರು ಪ್ರಯತ್ನ ಮಾಡುತ್ತಾರೆ. ಇದು ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳನ್ನು ದುಡ್ಡಿಗಾಗಿ ಬಳಸಿಕೊಳ್ಳುವ ದಂಧೆಯೇ ಆಗಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಹೀಗಿದ್ದಾಗಲೇ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯ ಹೊಟ್ಟೆ ಒಳಗೆ ಬಟ್ಟೆ ಬಿಟ್ಟು, ಭಾರಿ ಎಡವಟ್ಟು ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸುಮಾರು 3 ಅಡಿ ಉದ್ದದ ಬಟ್ಟೆ ಮಹಿಳೆ ಹೊಟ್ಟೆಯಲ್ಲಿ ಯಾಕೆ ಇತ್ತು? ಬನ್ನಿ ತಿಳಿಯೋಣ.

ಸರ್ಕಾರಿ ಆಸ್ಪತ್ರೆಯಲ್ಲೇ ಎಡವಟ್ಟು!
ಅಂದಹಾಗೆ ಕೋಲಾರದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ಒಬ್ಬರಿಗೆ ಹೆರಿಗೆ ಆಗಿತ್ತು. ನಾರ್ಮಲ್ ಡೆಲಿವರಿ ಆಗಿ, ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಕೋಲಾರ ಜಿಲ್ಲೆ ಮಾಲೂರು ತಾಲೂಕಿನವರಾದ ಮಹಿಳೆ ಚಂದ್ರಿಕಾ ಎಂಬುವವರು ಹೀಗೆ ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿ ಮಾಡಿಸಿಕೊಂಡು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೀಗೆ ನಾರ್ಮಲ್ ಡೆಲಿವರಿ ಆದ ನಂತರ ಮಹಿಳೆಗೆ ಹೆಚ್ಚು ರಕ್ತಸ್ರಾವ ಆಗಿದೆ. ಆಗ ರಕ್ತಸ್ರಾವ ನಿಲ್ಲಿಸುವುದಕ್ಕೆ ಅಂತಾ ವೈದ್ಯರು ಮಹಿಳೆಯ ಗುಪ್ತಾಂಗಕ್ಕೆ ಬಟ್ಟೆ ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಂತರ ಆ ಬಟ್ಟೆಯನ್ನ ವೈದ್ಯರು ಮಹಿಳೆಯ ದೇಹದಿಂದ ಹೊರಗೆ ತೆಗೆದೇ ಇಲ್ಲ.
ವೈದ್ಯ ಅಧಿಕಾರಿಗಳಿಗೆ ಶಿಕ್ಷೆ ಗ್ಯಾರಂಟಿ?
ಮೇ 5ರಂದು ಮಹಿಳೆಗೆ ಹೆರಿಗೆ ಆಗಿತ್ತು, ಅಂದು ಮಹಿಳೆಯ ಗುಪ್ತಾಂಗದಲ್ಲಿ ರಕ್ತಸ್ರಾವ ಆಗದ ರೀತಿ ಬಟ್ಟೆ ಇಟ್ಟಿದ್ದರು. ಆದರೆ ಆ ಬಟ್ಟೆಯನ್ನು ಅವರು ಹೊರಗೆ ತೆಗೆದೇ ಇಲ್ಲ. ಕೊನೆಗೆ ಮಹಿಳೆ ಮನೆಯವರು ಮಹಿಳೆ ಹೊಟ್ಟೆ ಪರಿಶೀಲನೆ ಮಾಡುವಾಗ ಬಟ್ಟೆ ಇರುವುದು ಕಂಡಿದೆ. ಆ ತಕ್ಷಣವೇ ವೈದ್ಯರನ್ನು ಸಂಪರ್ಕ ಮಾಡಿದ್ದು, ಸುಮಾರು 3 ಅಡಿ ಉದ್ದದ ಬಟ್ಟೆ ಹೊರ ತೆಗೆದಿದ್ದಾರೆ. ಇದೀಗ ಸಂತ್ರಸ್ತ ಮಹಿಳೆಯ ಪತಿ ಜಿಲ್ಲಾ ಸರ್ಜನ್ಗೆ ಈ ಬಗ್ಗೆ ದೂರು ನೀಡಿ, ಸರ್ಕಾರಿ ಆಸ್ಪತ್ರೆಯ ಎಡವಟ್ಟು ಬಯಲು ಮಾಡಿದ್ದಾರೆ. ಹೀಗಾಗಿ ತಪ್ಪು ಮಾಡಿದ್ದ ವೈದ್ಯ ಅಧಿಕಾರಿಗಳಿಗೆ ಶಿಕ್ಷೆ ಆಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ












Click it and Unblock the Notifications