ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಾಸಮತಕ್ಕೆ 1ದಿನದ ಮುನ್ನ, ನಿರ್ಧಾರ ತಿಳಿಸಿದ ಕೊಳ್ಳೇಗಾಲ ಬಿಎಸ್ಪಿ ಶಾಸಕ

|
Google Oneindia Kannada News

ಬೆಂಗಳೂರು, ಜುಲೈ 17: ಸಮ್ಮಿಶ್ರ ಸರಕಾರ ಮತ್ತು ಬಿಜೆಪಿಗೆ ಒಂದೊಂದು ಶಾಸಕರ ಬೆಂಬಲವೂ ಮುಖ್ಯವಾಗಿರುವ ಈ ಹೊತ್ತಿನಲ್ಲಿ ಕೊಳ್ಲೇಗಾಲ ಕ್ಷೇತ್ರದ ಬಿಎಸ್ಪಿ ಶಾಸಕ ಎನ್ ಮಹೇಶ್ ಕೊನೆಗೂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಾಗ ಮೈತ್ರಿ ಪಕ್ಷದ ಜೊತೆಗೆ ಗುರುತಿಸಿಕೊಂಡು, ಸಚಿವರೂ ಆಗಿದ್ದ ಎನ್ ಮಹೇಶ್, ಲೋಕಸಭಾ ಚುನಾವಣೆಯ ವೇಳೆ ಸರಕಾರದಿಂದ ಹೊರಬಂದು ರಾಜೀನಾಮೆ ನೀಡಿದ್ದರು.

ಬಿಜೆಪಿಯನ್ನು ಸೋಲಿಸುವ ವ್ಯರ್ಥ ಪ್ರಯತ್ನಕ್ಕಿಂತ ಏಕಾಂಗಿ ಸ್ಪರ್ಧೆ ಉತ್ತಮ: ಮಾಯಾವತಿಬಿಜೆಪಿಯನ್ನು ಸೋಲಿಸುವ ವ್ಯರ್ಥ ಪ್ರಯತ್ನಕ್ಕಿಂತ ಏಕಾಂಗಿ ಸ್ಪರ್ಧೆ ಉತ್ತಮ: ಮಾಯಾವತಿ

ಅತೃಪ್ತ ಶಾಸಕರು ಮುಂಬೈಗೆ ತೆರಳಿದ್ದ ವೇಳೆ, ಮಹೇಶ್ ಕೂಡಾ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿ ಹರಡಿತ್ತು. ಈಗ, ವಿಶ್ವಾಸಮತಕ್ಕೆ ಒಂದು ದಿನದ ಮುನ್ನ, ಮಹೇಶ್ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ಸಮ್ಮಿಶ್ರ ಸರಕಾರಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

Alone BSP MLA from Karnataka N Mahesh, decided to outside support to HDK government

ನಮ್ಮದು ಏನಿದ್ದರೂ ವಿಷಯಾಧಾರಿತ ಬೆಂಬಲ, ಪ್ರತ್ಯೇಕ ಆಸನದ ವ್ಯವಸ್ಥೆ ಮಾಡುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಮಹೇಶ್, ಕನಕಪುರದಲ್ಲಿ ಹೇಳಿದ್ದಾರೆ.

ಮಾಯಾವತಿಯವರ ನಿರ್ದೇಶನದಂತೆ ನಾನು ನಡೆಯುತ್ತೇನೆ, ಬಿಜೆಪಿ ಸೇರುತ್ತಿದ್ದೇನೆ ಎನ್ನುವುದೆಲ್ಲಾ ಸುಳ್ಳು. ನಮ್ಮದು ಏನಿದ್ದರೂ ಬಿಎಸ್ಪಿ ರಕ್ತ ಎಂದು ಎನ್ ಮಹೇಶ್ ಹೇಳುವ ಮೂಲಕ, ಸಮ್ಮಿಶ್ರ ಸರಕಾರದ ಮುಖಂಡರು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

ಅಂತಿಮ ಹಂತದವರೆಗೂ ಎನ್ ಮಹೇಶ್ ತಮ್ಮ ಬೆಂಬಲ ಯಾರಿಗೆನ್ನುವ ನಿರ್ಧಾರವನ್ನು ಗೌಪ್ಯವಾಗಿ ಇಟ್ಟಿದ್ದರು. ಇದು ಸಮ್ಮಿಶ್ರ ಸರಕಾರದ ಮುಖಂಡರನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸಿತ್ತು. ದೇವೇಗೌಡ್ರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಮಾಯಾವತಿಯವರಲ್ಲಿ ಮಾತನಾಡಿದ್ದಾರೆಂದು ಹೇಳಲಾಗುತ್ತಿದೆ.

English summary
Alone BSP MLA from Karnataka (Kollegala, Chamaraja Nagar district) N Mahesh, decided to give outside support to HD Kumaraswamy government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X