ಸರ್ಕಾರಿ ಜಮೀನು ಒತ್ತುವರಿ ತೆರವು: ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆಗೆ ಸಿದ್ದರಾಮಯ್ಯ ಸೂಚನೆ
ನವದೆಹಲಿ: ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿದ್ದು, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
80 ಕೋಟಿ ಮೌಲ್ಯದ ಸರಕಾರಿ ಜಾಗ ವಶಕ್ಕೆ
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 5 ಎಕರೆ ಸರಕಾರಿ ಜಾಗವನ್ನು ಭಾರೀ ಕಾರ್ಯಾಚರಣೆ ಮೂಲಕ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಸುಮಾರು 80 ಕೋಟಿ ಮೌಲ್ಯದ ಸರಕಾರಿ ಸ್ವತ್ತನ್ನು ಸಂರಕ್ಷಿಸಲಾಗಿದೆ ಎಂದು ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಿಇಒ ಕರೀಗೌಡ ತಿಳಿಸಿದರು. ಪೊಲೀಸ್ ಬಿಗಿ ಭದ್ರತೆಯೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ 150ಕ್ಕೂ ಹೆಚ್ಚು ಅನಧಿಕೃತ ಶೆಡ್ಗಳು ಹಾಗೂ ಮನೆಗಳನ್ನು ಜೆಸಿಬಿಗಳ ಮೂಲಕ ನೆಲಸಮ ಮಾಡಲಾಗಿದೆ.
ಇನ್ನೂ ಈ ಕಾರ್ಯಾಚರಣೆಗೆ 9 ಟ್ರ್ಯಾಕ್ಟರ್ಗಳು, 9 ಜೆಸಿಬಿಗಳನ್ನು ಬಳಸಲಾಗಿದ್ದು, 70 ಮಾರ್ಷಲ್ಗಳು ಸೇರಿದಂತೆ 200ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು. ವಶಕ್ಕೆ ಪಡೆದ ಜಾಗವನ್ನು ಮುಂದಿನ ದಿನಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಯೋಜನೆಗಳಿಗೆ ಬಳಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಅಕ್ರಮ ಒತ್ತುವರಿ ವಿರುದ್ಧ ನಗರದಾದ್ಯಂತ ಕಠಿಣ ಕ್ರಮ ಮುಂದುವರಿಯಲಿದ್ದು ಸರಕಾರಿ ಭೂಮಿ ರಕ್ಷಣೆಗಾಗಿ ಇಂತಹ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications