ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಸಂಸ್ಕೃತಿಗೆ ಆಳ್ವಾಸ್ ನುಡಿಸಿರಿ ಸೇವೆ ಅನನ್ಯ: ಜಯಶ್ರೀ

By ದಕ್ಷಿಣ ಕನ್ನಡ ಜಿಲ್ಲೆ ಪ್ರತಿನಿಧಿ
|
Google Oneindia Kannada News

ಮೂಡುಬಿದಿರೆ, ನವೆಂಬರ್,17: ಆಳ್ವಾಸ್ ನುಡಿಸಿರಿ- ಕನ್ನಡ ನಾಡು, ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಆಳ್ವಾಸ್ ವಿದ್ಯಾರ್ಥಿಸಿರಿ'-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಹಾಗೂ ಆಳ್ವಾಸ್ ಸಿನಿಸಿರಿ'-ಮಿನಿ ಚಲನಚಿತ್ರೋತ್ಸವವನ್ನು ಇಲ್ಲಿನ ರತ್ನಾಕರರ್ಣ ವೇದಿಕೆಯಲ್ಲಿ ಗುರುವಾರ ಉದ್ಘಾಟಿಸಲಾಯಿತು.

ಆಳ್ವಾಸ್ ವಿದ್ಯಾರ್ಥಿಸಿರಿಯನ್ನು ಉದ್ಘಾಟಿಸಿದ ಕನ್ನಡ ರಂಗಭೂಮಿಯ ಖ್ಯಾತ ಕಲಾವಿದೆ ಬಿ.ಜಯಶ್ರೀ, 'ಆಳ್ವಾಸ್ ನುಡಿಸಿರಿಯ ಮೂಲಕ ಕನ್ನಡ ಸಂಸ್ಕೃತಿ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಎಂ. ಮೋಹನ್ ಆಳ್ವರ ಕಾರ್ಯ ನಿಜಕ್ಕೂ ಶ್ಲಾಘನೀಯವಾದುದು ಎಂದರು.

ತನ್ನ ವೈಶಿಷ್ಟ್ಯತೆಯಿಂದಾಗಿ ಕನ್ನಡದ ಇತರೆ ಹಬ್ಬಗಳಿಗಿಂತ ಆಳ್ವಾಸ್ ನುಡಿಸಿರಿ ವಿಭಿನ್ನವಾಗಿ ನಿಲ್ಲುತ್ತದೆ. ನಾವಿಂದು ಇತರ ಭಾಷೆಗಳನ್ನು ಕಲಿಯುವ, ಪ್ರೀತಿಸುವ ಹಂಬಲದಲ್ಲಿ ನಮ್ಮತನ'ವನ್ನು ಕಡೆಗಣಿಸುತ್ತಿದ್ದೇವೆ.

ಆದರೆ ನಮ್ಮ ಸಂಸ್ಕೃತಿಯನ್ನು ಪ್ರೀತಿಸಿ ಬೆಳೆಸುವ ಕಾಯಕ ಅಗತ್ಯವಾಗಿ ನಡೆಯಬೇಕಿದೆ.ಇಂತಹ ಸಂದರ್ಭಗಳಲ್ಲಿ ಆಳ್ವಾಸ್ ನುಡಿಸಿರಿಯಂತಹ ಸಮ್ಮೇಳನಗಳು ತುಂಬಾ ಮುಖ್ಯವೆನಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಮನುಷ್ಯನ ಜ್ಞಾನದಿಂದಲೇ ಭಿನ್ನ

ಮನುಷ್ಯನ ಜ್ಞಾನದಿಂದಲೇ ಭಿನ್ನ

ವಿದ್ಯಾರ್ಥಿಸಿರಿಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯಾ ಮಾತನಾಡಿ, ಮನುಷ್ಯನಲ್ಲಿರುವ ಜ್ಞಾನ, ಆಲೋಚನಾ ಶಕ್ತಿಯೇ ಅವನನ್ನು ಇತರ ಪ್ರಾಣಿಗಳಿಗಿಂತ ಭಿನ್ನವಾಗಿ ನಿಲ್ಲುವಂತೆ ಮಾಡುತ್ತದೆ.

ವೇದಕಾಲದಿಂದಲೂ ಜ್ಞಾನರ್ಜನೆಗೆ ಒತ್ತು

ವೇದಕಾಲದಿಂದಲೂ ಜ್ಞಾನರ್ಜನೆಗೆ ಒತ್ತು

ಮನುಷ್ಯನ ಪರಿಪೂರ್ಣ ವ್ಯಕ್ತಿತ್ವಕ್ಕೆ ಅವನಲ್ಲಿರುವ ಬುದ್ಧಿವಂತಿಕೆಯೇ ಬುನಾದಿಯಾಗುತ್ತದೆ. ಇದೇ ಕಾರಣಕ್ಕೆ ವೇದಕಾಲದಿಂದಲೂ ನಮ್ಮಲ್ಲಿ ಜ್ಞಾನಾರ್ಜನೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ' ಎಂದರು.

ಸಂಸ್ಕೃತಿಯೆಂಬುದು ಒಬ್ಬ ಮನುಷ್ಯನಲ್ಲಿ ಎಲ್ಲಾ ಒಳ್ಳೆಯ ಗುಣಗಳನ್ನು ಬೆಳೆಸುತ್ತದೆ. ನಾವು ಪಡೆದುಕೊಳ್ಳುತ್ತಿರುವ ಶಿಕ್ಷಣದ ಉದ್ದೇಶವೂ ಒಳ್ಳೆಯ ಗುಣಗಳನ್ನು ಬೆಳೆಸುವುದೇ ಆದ್ದರಿಂದ ನಮ್ಮ ಕಲಿಕೆಯನ್ನು ಒಂದು ಸಂಸ್ಕೃತಿಯೆಂದೇ ಹೇಳಬಹುದು.

ಸಮಾಜ ನಿರ್ಮಾಣದಲ್ಲಿ ಕುಟುಂಬದ ಪಾತ್ರ ಮುಖ್ಯ

ಸಮಾಜ ನಿರ್ಮಾಣದಲ್ಲಿ ಕುಟುಂಬದ ಪಾತ್ರ ಮುಖ್ಯ

ಉನ್ನತ ಸಂಸ್ಕೃತಿಯನ್ನು ಹೊಂದಿರುವ ಸಮಾಜವನ್ನು ನಿರ್ಮಿಸುವಲ್ಲಿ ಒಂದು ಕುಟುಂಬದ ಪಾತ್ರ ತುಂಬಾ ಮುಖ್ಯವಾದುದು. ಇದಕ್ಕಾಗಿ ನಮ್ಮ ಮನೆಯ ಮಕ್ಕಳಲ್ಲಿ ಯುವಜನತೆಯಲ್ಲಿ, ಆರೋಗ್ಯಕರ ಗುಣಗಳನ್ನು ಬೆಳೆಸಬೇಕಾದದ್ದು ತುಂಬಾ ಮುಖ್ಯ' ಎಂದು ಹೇಳಿದರು.

ಇಂದಿನ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಯನ್ನು ಹೊಂದುವಂತಾಗಬೇಕು. ಕೇವಲ ಪುಸ್ತ ಓದುವುದರಿಂದ ಮಾತ್ರ ನಮ್ಮ ವ್ಯಕ್ತಿತ್ವ ಪರಿಪೂರ್ಣವಾಗದು. ಅದರ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಆಸಕ್ತಿಯಿಂದ ಪಾಲ್ಗೊಳ್ಳಬೇಕು.

ಇಲ್ಲದಿದ್ದರೆ ಕೊನೆಯ ಪಕ್ಷ ಅದರ ಬಗ್ಗೆ ಪರಿಚಯವನ್ನಾದರೂ ಅವರು ಹೊಂದಿರುವಂತಾಗಬೇಕು. ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಿಂದ ದೂರವಿರಿಸಿ ಬರೀ ಪುಸ್ತಕದ ಹುಳುಗಳಾಗುವಂತೆ ಮಾಡುವುದು ಪೋಷಕರು ಮಾಡುವ ದೊಡ್ಡ ಅಪರಾಧ' ಎಂದು ಅಭಿಪ್ರಾಯಪಟ್ಟರು.

ಸಿನಿಮಾ ಮತ್ತು ಸಾಹಿತ್ಯ ಬೇರೆ ಅಲ್ಲ

ಸಿನಿಮಾ ಮತ್ತು ಸಾಹಿತ್ಯ ಬೇರೆ ಅಲ್ಲ

ಆಳ್ವಾಸ್ ನುಡಿಸಿರಿಯಲ್ಲಿ ಈ ಬಾರಿ ವಿಶೇಷವಾಗಿ ನಡೆಯುತ್ತಿರುವ ಆಳ್ವಾಸ್ ಸಿನಿಸಿರಿ ಉದ್ಘಾಟನೆಯನ್ನು ಖ್ಯಾತ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಉದ್ಘಾಟಿಸಿದರು. ಸಿನಿಮಾ ಮತ್ತು ಸಾಹಿತ್ಯ ಯಾವತ್ತೂ ಬೇರೆ ಬೇರೆಯಲ್ಲ.

ಆದರೆ ದುರಂತವೆಂದರೆ ನಮ್ಮಲ್ಲಿ ಸಿನಿಮಾ ಮತ್ತು ಸಾಹಿತ್ಯದ ನಡುವೆ ದೊಡ್ಡ ಕಂದರ ಸೃಷ್ಟಿಯಾಗಿದೆ. ನಾವು ಮೊದಲು ಈ ಎರಡು ಜಗತ್ತುಗಳ ನಡುವಿನ ಅಂತರವನ್ನು ಕಡಿಮೆ ಮಾಡುವತ್ತ ದೃಷ್ಟಿ ಹರಿಸಬೇಕಿದೆ.

12 ಚಿತ್ರಗಳ ಪ್ರದರ್ಶನ

12 ಚಿತ್ರಗಳ ಪ್ರದರ್ಶನ

ಆಳ್ವಾಸ್ ಸಿನಿಸಿರಿ ಈ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆ. ಸಿನಿಸಿರಿಯಲ್ಲಿ ಪ್ರದರ್ಶನಗೊಳ್ಳಲಿರುವ 12 ಚಿತ್ರಗಳು ವಿಭಿನ್ನ ವಿಭಿನ್ನತೆಯಿಂದ ಕೂಡಿದ್ದು, ಸಾಹಿತ್ಯ ಹಾಗೂ ಸಿನಿಮಾದ ಸೃಜನಾತ್ಮಕತೆಯ ಬಗ್ಗೆ ಸ್ಪಷ್ಟ ಚಿತ್ರಣ ನೀಡುತ್ತವೆ' ಎಂದರು.

ಸೃಜನಶೀಲತೆಗೆ ಮುನ್ನುಡಿ ಬರೆದ ವಿದ್ಯಾರ್ಥಿಸಿರಿ

ಸೃಜನಶೀಲತೆಗೆ ಮುನ್ನುಡಿ ಬರೆದ ವಿದ್ಯಾರ್ಥಿಸಿರಿ

ವಿದ್ಯಾರ್ಥಿಗಳ ಪ್ರತಿಭೆಗೆ, ಸೃಜನಶೀಲತೆಗೆ ವಿದ್ಯಾರ್ಥಿಸಿರಿ ದೊಡ್ಡ ವೇದಿಕೆಯನ್ನು ಕಲ್ಪಿಸಿತು. ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಮೂರ್ತಿ ಹಾಗೂ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಪೂರ್ಣಿಮಾ ಜೈನ್ ಕಥಾಭಿನಯ ಮಾಡಿದರೆ, ಪುತ್ತೂರಿನ ಸದನ ವಸತಿ ಶಾಲೆಯ ತಂಡ ಹಾಗೂ ಆಳ್ವಾಸ್ ಪ್ರೌಢಶಾಲೆಯ ಅಯನಾ ವಿ. ರಮಣ್ ನೃತ್ಯದ ಮೂಲಕ ಸಭಿಕರನ್ನು ರಂಜಿಸಿದರು.

ಬೆಂಗಳೂರಿನ ಪಶುಪಾಲನಾ ಇಲಾಖೆಯ ಡಾ. ಜಾನಕಿ ಸುಂದರೇಶ್ ವಿಶೇಷ ಉಪನ್ಯಾಸ, ಪೈವಳಿಕೆಯ ಸರಕಾರಿ ಪ್ರೌಢಶಾಲೆಯ ಗೋವರ್ಧನ ಗಿರಿಧಾರಿ ಹರಿಕಥೆ ಕಾರ್ಯಕ್ರಮ ನೀಡಿದರು.

ಕವಿಗೋಷ್ಠಿಯಲ್ಲಿ ವಿಶಿಷ್ಟ ಕವನಗಳ ವಾಚನ

ಕವಿಗೋಷ್ಠಿಯಲ್ಲಿ ವಿಶಿಷ್ಟ ಕವನಗಳ ವಾಚನ

ಕವಿಗೋಷ್ಠಿಯಲ್ಲಿ ಸರಕಾರಿ ಪ.ಪೂ. ಕಾಲೇಜಿನ ಸಹನಾ ವಿ.ಎನ್.ವಳಕಾಡಿನ ಸರಕಾರಿ ಪ್ರೌಢಶಾಲೆಯ ಕಿಶನ್, ಮಹಾಜನ ಸಂಸ್ಕೃತ ಪ್ರೌಢಶಾಲೆಯ ಶರ್ವಾಣಿ ಕೆ., ಶ್ರೀರಾಮ ಪ.ಪೂ. ಕಾಲೇಜಿನ ಸುರೇಖಾ ಮರಾಠೆ ಕವನ ವಾಚನ ನಡೆಸಿದರು.

ಆಳ್ವಾಸ್ ಕಿರಿಯ ಪ್ರಾಥಮಿಕ ಶಾಲೆಯ ಮನುಜ ನೇಹಿಗ ರಂಗಜಾದೂ, ಆಳ್ವಾಸ್ ಪ.ಪೂ. ಕಾಲೇಜಿನ ಪ್ರಣವ್ ಬೆಳ್ಲಾರೆ ಏಕಪಾತ್ರಾಭಿನಯವನ್ನು ಪ್ರಸ್ತುತ ಪಡಿಸಿದರು.

English summary
Alva’s Education Foundation, in the backdrop of Alva’s Nudisiri -2016, had organised “Vidyarthisiri”, a student literary cultural fest and movie fest “Alva’s Cinisiri” on Thursday, at Ratnakarvarni Stage, Moodbidri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X