ಅಂಬರೀಶ್ ಸಾವಿಗೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ

ಬೆಂಗಳೂರು, ನವೆಂಬರ್ 25 : ಮಾಜಿ ಸಚಿವ ಎಂ.ಎಚ್.ಅಂಬರೀಶ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. 'ಕಾಂಗ್ರೆಸ್ ಕುಟುಂಬ ಒಬ್ಬ ಸದಸ್ಯನನ್ನು ಕಳೆದುಕೊಂಡಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಎಂ.ಎಚ್.ಅಂಬರೀಶ್ ಅವರು ನ.24ರ ಶನಿವಾರ ರಾತ್ರಿ 10.15ಕ್ಕೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನ.26ರಂದು ಅಂತ್ಯಕ್ರಿಯೆ ನಡೆಯಲಿದೆ.

'ಅಂಬರೀಶ್ ಅವರು ನಟನೆ ಮತ್ತು ರಾಜಕೀಯ ಕೆಲಸದಿಂದಾಗಿ ಕರ್ನಾಟಕ ಮತ್ತು ಇಡೀ ದೇಶದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Ambareesh death : Congress family lost a valuable member says Rahul Gandhi

'ಕಾಂಗ್ರೆಸ್ ಪಕ್ಷ ಒಬ್ಬ ಕುಟುಂಬ ಸದಸ್ಯನನ್ನು ಕಳೆದುಕೊಂಡಿದೆ. ಅಂಬರೀಶ್ ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ' ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಂಜೆ 4 ಗಂಟೆಗೆ ಮಂಡ್ಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಸೋಮವಾರ ಬೆಳಗ್ಗೆ 6 ಗಂಟೆ ತನಕ ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+