ಸಲ್ಲದ ಗಾಳಿ ಸುದ್ದಿಗಳಿಗೆ ಸೂಜಿ ಚುಚ್ಚಿದ ಅಂಬರೀಶ್
Recommended Video

ಬೆಂಗಳೂರು, ನವೆಂಬರ್ 28 : 'ಮಾಜಿ ಸಂಸದೆ ರಮ್ಯಾ ಚುನಾವಣೆಗೆ ಸ್ಪರ್ಧಿಸಿದರೆ ಸ್ವಾಗತ. ಪಕ್ಷ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ' ಎಂದು ಮಾಜಿ ವಸತಿ ಸಚಿವ, ಮಂಡ್ಯ ಶಾಸಕ ಅಂಬರೀಶ್ ಹೇಳಿದರು.
ಮಂಗಳವಾರ ಅಂಬರೀಶ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಹಲವು ವಿಚಾರಗಳ ಕುರಿತು ಹಲವು ಹೊತ್ತು ಚರ್ಚೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.
'ಮಾಜಿ ಸಂಸದೆ ರಮ್ಯಾ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ. ಪಕ್ಷದ ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ' ಎಂದು ಮುಖ್ಯಮಂತ್ರಿಗಳ ಭೇಟಿ ಬಳಿಕ ಹೇಳಿದರು.
ಮಂಡ್ಯ ಜಿಲ್ಲೆಯ ರಾಜಕಾರಣದ ಬಗ್ಗೆ ದಿನಕ್ಕೊಂದು ಸುದ್ದಿಗಳು ಹಬ್ಬುತ್ತಿವೆ. ಸ್ವತಃ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಎಂಬ ಬಗ್ಗೆಯೇ ಚರ್ಚೆಗಳು ನಡೆಯುತ್ತಿದ್ದವು. ಅಂಬರೀಶ್ ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ. ಮಂಡ್ಯದಲ್ಲಿ ರಮ್ಯಾ, ಅಂಬರೀಶ್ ಮುಖಾಮುಖಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಈ ಎಲ್ಲಾ ಸುದ್ದಿಗಳಿಗೆ ಅಂಬರೀಶ್ ಇಂದು ಸ್ಪಷ್ಟನೆ ನೀಡಿದರು...ಅದರ ವಿವರಗಳು ಇಲ್ಲಿವೆ

ಅಂಬರೀಶ್ ಜೆಡಿಎಸ್ ಸೇರ್ಪಡೆ
ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಜೆಡಿಎಸ್ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅಂಬರೀಶ್ ಅಭಿಮಾನಿಗಳು ಜೆಡಿಎಸ್ ಸೇರುವಂತೆ ಒತ್ತಾಯ ಮಾಡುತ್ತಿದ್ದಾರೆ. ಬೆಂಬಲಿಗರ ಜೊತೆ ಈ ಕುರಿತು ಸಭೆಯನ್ನು ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಅಂಬರೀಶ್ ಈ ಸುದ್ದಿಗಳಿಗೆ ಇಂದು ಸ್ಪಷ್ಟನೆ ನೀಡಿದರು. 'ಕಾಂಗ್ರೆಸ್ ಬಿಡುವ ಉದ್ದೇಶವಿಲ್ಲ' ಎಂದು ಹೇಳಿದರು.

ಮಂಡ್ಯದಿಂದ ರಮ್ಯಾ ಸ್ಪರ್ಧೆ
ಮಂಡ್ಯ ಕ್ಷೇತ್ರದಿಂದ 2018ರ ಚುನಾವಣೆಗೆ ರಮ್ಯಾ ಸ್ಪರ್ಧೆ ಮಾಡಲಿದ್ದಾರೆ. ಅಂಬರೀಶ್ ಅವರು ಪಕ್ಷ ಬದಲಾಣೆ ಮಾಡಿ ಜೆಡಿಎಸ್ನಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಇಂದು ಮಾತನಾಡಿದ ಅಂಬರೀಶ್, 'ರಮ್ಯಾ ಸ್ಪರ್ಧೆ ಮಾಡಿದರೆ ಸ್ವಾಗತಿಸುತ್ತೇನೆ' ಎಂದು ಹೇಳಿದರು.

ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ
ಅಂಬರೀಶ್ಗೆ ಟಿಕೆಟ್ ನೀಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಷ್ಟವಿಲ್ಲ. ಆದ್ದರಿಂದ, ಬೇರೆಯವರಿಗೆ ಟಿಕೆಟ್ ನೀಡುವ ಚಿಂತನೆ ನಡೆಸಿದ್ದಾರೆ. ಆದ್ದರಿಂದ, ಅಂಬರೀಶ್ ಜೆಡಿಎಸ್ ಸೇರುತ್ತಾರೆ ಎಂಬ ಮಾತು ಮಂಡ್ಯದಲ್ಲಿ ಕೇಳಿಬಂದಿತ್ತು. 'ಪಕ್ಷದ ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ' ಎಂದು ಅಂಬರೀಶ್ ಹೇಳಿದ್ದಾರೆ.

ಸುಮಲತಾ ಅಂಬರೀಶ್ ಸ್ಪರ್ಧೆ
ಸುಮಲತಾ ಅಂಬರೀಶ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. 'ನನ್ನ ಪತ್ನಿ, ಪುತ್ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಇಂದು ಹೇಳಿದರು.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications