ಕಂಠೀರವ ಸ್ಟುಡಿಯೋದಲ್ಲಿ ನ.26ರಂದು ಅಂಬರೀಶ್ ಅಂತ್ಯಕ್ರಿಯೆ

ಬೆಂಗಳೂರು, ನವೆಂಬರ್ 25 : ಮಾಜಿ ಸಚಿವ, ಹಿರಿಯ ನಟ ಅಂಬರೀಶ್ ಪಾರ್ಥೀವ ಶರೀರದ ಅಂತ್ಯಕ್ರಿಯೆ ಸೋಮವಾರ (26-11-2018) ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನ ನಡೆಯುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಸಮಾಧಿ ಸ್ಮಾರಕದ ಬಳಿ ಸಕಲ ಸರ್ಕಾರಿ ಗೌರವದೊಂದಿಗೆ ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.

ಭಾನುವಾರ ಇಡೀ ದಿನ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗುತ್ತದೆ. ಅಂತಿಮ‌ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ambareesh

ಅಂಬರೀಶ್ (66) ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

'ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ' ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

'ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು' ಎಂದು ಮುಖ್ಯಮಂತ್ರಿಗಳು ನೆನಪುಮಾಡಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+