Live Updates : ಪಂಚಭೂತಗಳಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಲೀನ
ಬೆಂಗಳೂರು, ನವೆಂಬರ್ 26: ಶನಿವಾರ ನಿಧನರಾದ ಮಾಜಿ ಸಚಿವ, ಹಿರಿಯ ನಟ ಅಂಬರೀಶ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ಸೋಮವಾರ ಸಂಜೆ ನಡೆಯಿತು.
ಸೋಮವಾರ ಸಂಜೆ ಪುತ್ರ ಅಭಿಷೇಕ್ ಅವರು ಅಂತಿಮ ವಿಧಿ ವಿಧಾನಗಳನ್ನು ನೇರವೇರಿಸಿದರು ಮತ್ತು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಇದಕ್ಕೂ ಮೊದಲು ಕುಟುಂಬದವರು ಅಂತಿಮ ನಮನ ಸಲ್ಲಿಸಿದರು. ಸುಮಲತಾ ಅಂಬರೀಶ್ ಅವರು ಅಂತಿಮ ನಮನ ಸಲ್ಲಿಸಿದರು.
ಅಂಬರೀಶ್ ಅವರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಪಾಲ್ಗೊಂಡಿದ್ದರು.
ಸೋಮವಾರ ಬೆಳಗ್ಗೆ 11.45ರ ಸುಮಾರಿಗೆ ಮಂಡ್ಯದಿಂದ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಯಿತು. ಬಳಿಕ ಕಂಠೀರವ ಸ್ಟೇಡಿಯಂನಿಂದ ಕಂಠೀರವ ಸ್ಟುಡಿಯೋ ತನಕ ಮೆರವಣಿಗೆ ಮಾಡಲಾಗಯಿತು. ಸಾವಿರಾರು ಅಭಿಮಾನಿಗಳು ರಸ್ತೆಯ ಇಕ್ಕೆಲದಲ್ಲಿ ನಿಂತು ಅಂತಿಮ ನಮನ ಸಲ್ಲಿಸಿದರು.
ಅಂಬರೀಶ್ ಅಂತಿಮ ವಿದಾಯದ ಮಾಹಿತಿಗಳಿಗಳು ಇಲ್ಲಿವೆ ನೋಡಿ...