ಅಂಬೇಡ್ಕರ್ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, ನವೆಂಬರ್ 09; ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಅಡಿ ಸಾಲ ಸೌಲಭ್ಯ ನೀಡುತ್ತಿದೆ. ಆಸಕ್ತರು ಯೋಜನೆ ಸದುಪಯೋಗ ಪಡೆಯುವಂತೆ ಅರ್ಜಿಗಳನ್ನು ಆಹ್ವಾನಿಸಿದೆ.
ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅಡಿ ಸಹಾಯ ಮಾಡಲಿದೆ. 2022-23ನೇ ಸಾಲಿನಲ್ಲಿ ಕೆಳಗಿನ ಯೋಜನೆಗಳಡಿ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡಲಿದೆ.
ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದೆ. ನಿಗಮದ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ, ಮೈಕ್ರೊ ಕ್ರೆಡೊಟ್ ಪ್ರೇರಣಾ ಯೋಜನೆಯಡಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರು ಮತ್ತು ಅರ್ಹರು ಸೇವಾ ಸಿಂಧು ಪೋರ್ಟಲ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರದಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್ಸೈಟ್ನಲ್ಲಿ ಯೋಜನೆಯ ವಿವರಗಳನ್ನು ಸಹ ನೀಡಲಾಗಿದೆ.
ಯೋಜನೆಯ ವಿವರಗಳು; ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ದ್ವಿಚಕ್ರ, ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಹಾಗೂ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಸೌಲಭ್ಯ ಪಡೆಯಲು ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 1,50,000 ರೂ. ಮತ್ತು ನಗರ ಪ್ರದೇಶದಲ್ಲಿ 3,00,000 ರೂ. ನಿಗದಿ ಮಾಡಲಾಗಿದೆ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರ ವಯೋಮಿತಿ ಕನಿಷ್ಠ 21 ವರ್ಷ, ಗರಿಷ್ಠ 50 ವರ್ಷ. ಮೈಕ್ರೊ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಅರ್ಜಿದಾರರ ವಯೋಮಿತಿ ಕನಿಷ್ಠ 21 ವರ್ಷ, ಗರಿಷ್ಠ 60 ವರ್ಷಗಳು.

ಅರ್ಜಿ ಸಲ್ಲಿಕೆ ಮಾಡುವ ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ/ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿರಬಾರರು.
ಉದ್ಯಮ ಶೀಲತಾ ಅಭಿವೃದ್ಧಿ ಯೋಜುನೆಯಡಿ ದ್ವಿಚಕ್ರ/ ತ್ರಿಚಕ್ರ ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂ. 50,000 ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲವನ್ನಾಗಿ ಅರ್ಜಿದಾರರು ಸೇವಾ ವ್ಯಾಪ್ತಿಯ ಬ್ಯಾಂಕುಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನವನ್ನು ಮಂಜೂರು ಮಾಡಲಾಗುತ್ತದೆ. ಫಲಾಪೇಕ್ಷಿಗಳು ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
ಮೈಕ್ರೊ ಕ್ರೆಡಿಟ್; ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಕನಿಷ್ಟ 10 ಮಹಿಳೆಯರು ಸ್ವ- ಸಹಾಯ ಗುಂಪಿನಲ್ಲಿ ಸದಸ್ಯರಿರಬೇಕು. ಸಂಘದ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ ಹೊಂದಿರಬೇಕು.
ಸ್ವ-ಸಹಾಯ ಸಂಘಗಳು ಸಕ್ಷಮ ಪ್ರಧಿಕಾರಗಳಿಂದ ನೋಂದಣಿಯಾಗಿರಬೇಕು ಹಾಗೂ ಸಂಘದ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರಬೇಕು. ಸಂಘದಲ್ಲಿ ಒಬ್ಬ ಸದಸ್ಯರಿಗೆ ರೂ. 25,000 ರಂತೆ (ರೂ. 15000 ಸಹಾಯಧನ ಹಾಗೂ 10,000 ಸಾಲ) ಒಟ್ಟು ರೂ. 2,50,000 ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ 2ನೇ ಮಹಡಿ ಜಿಲ್ಲಾ ಆಡಳಿತ ಭವನ ರೂಂ ನಂಬರ್ 102 ಕೊಪ್ಪಳ ಇವರನ್ನು ಸಂಪರ್ಕಿಸಬಹುದು.
ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ 20/03/1975ರಂದು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಯಿತು. 16/08/2005ರಂದು ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಎಂದು ಮರುನಾಮಕರಣ ಮಾಡಲಾಯಿತು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications