ಕರ್ನಾಟಕ ಲಾಕ್ ಡೌನ್ ಸಂದರ್ಭದಲ್ಲಿ ಬಾಲ್ಯವಿವಾಹಗಳೇ ಹೆಚ್ಚು!
ಬೆಂಗಳೂರು, ಆಗಸ್ಟ್.28: ದೇಶಾದ್ಯಂತ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಆತಂಕ ಸೃಷ್ಟಿಸುತ್ತಿದ್ದರೆ, ಕರ್ನಾಟಕದಲ್ಲಿ ಲಾಕ್ ಡೌನ್ ಮತ್ತು ಮಹಾಮಾರಿ ಭೀತಿ ನಡುವೆ ಬಾಲ್ಯವಿವಾಹಗಳೇ ಹೆಚ್ಚಾಗಿರುವ ವಿಚಾರ ಇದೀಗ ಬಯಲಾಗಿದೆ.
Recommended Video
ಕಳೆದ ಏಪ್ರಿಲ್, ಮೇ, ಜೂನ್ ಮತ್ತು ಜುಲೈ ತಿಂಗಳಿನಲ್ಲೇ ಅತಿಹೆಚ್ಚು ಬಾಲ್ಯವಿವಾಹಗಳು ನಡೆದಿರುವ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಮಾಹಿತಿ ನೀಡಿದೆ. ಕಳೆದ ವರ್ಷ 12 ತಿಂಗಳಿನಲ್ಲಿ 156 ಬಾಲ್ಯವಿವಾಹ ಪ್ರಕರಣಗಳು ಪತ್ತೆಯಾಗಿದ್ದರೆ, ಈ ವರ್ಷ ಕೇವಲ ನಾಲ್ಕೇ ತಿಂಗಳಿನಲ್ಲಿ 107 ಬಾಲ್ಯವಿವಾಹ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯಾದ್ಯಂತ ಆಡಳಿತ ಮಂಡಳಿ ಮತ್ತು ಸರ್ಕಾರಿ ಅಧಿಕಾರಿಗಳು ಕೊವಿಡ್-19 ವಿರುದ್ಧ ಹೋರಾಡುವಲ್ಲಿ ನಿರತರಾಗಿದ್ದರು. ಮಹಾಮಾರಿ ಕಡಿವಾಣಕ್ಕೆ ಅಧಿಕಾರಿಗಳು ಶ್ರಮಿಸುತ್ತಿದ್ದರೆ ಪೋಷಕರು ಇದೇ ಸಂದರ್ಭವನ್ನು ಬಳಸಿಕೊಂಡು ತಮ್ಮ ಮಕ್ಕಳಿಗೆ ಮದುವೆ ಮಾಡಲು ಮುಂದಾಗಿದ್ದರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಚೇರ್ಮನ್ ಸೆಬಾಸ್ಟಿಯನ್ ಆಂಟೋನಿ ತಿಳಿಸಿದ್ದಾರೆ.

ರಾಜ್ಯ ಲಾಕ್ ಡೌನ್ ಸಂದರ್ಭದಲ್ಲೇ ಬಾಲ್ಯವಿವಾಹ
ಕರ್ನಾಟಕ ಲಾಕ್ ಡೌನ್ ಸಂದರ್ಭವೇ ತಮ್ಮ ಮಕ್ಕಳ ಮದುವೆಗೆ ಸೂಕ್ತ ಸಮಯ ಎಂದು ಪೋಷಕರು ಭಾವಿಸಿದ್ದರು. ಅಧಿಕಾರಿಗಳೆಲ್ಲ ಕೊವಿಡ್-19 ನಿಯಂತ್ರಣದ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಬಾಲ್ಯವಿವಾಹಗಳ ಮೇಲೆ ಹೆಚ್ಚಾಗಿ ಗಮನ ಹರಿಸುವುದಿಲ್ಲ. ಇದನ್ನೇ ಬಳಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯವಿವಾಹ ಮಾಡಿದ ಪ್ರಕರಣಗಳು ಹೆಚ್ಚಾಗಿವೆ ಎಂದು ಅವರು ತಿಳಿಸಿದ್ದಾರೆ.

ಈ ಜಿಲ್ಲೆಗಳಲ್ಲೇ ಅತಿಹೆಚ್ಚು ಬಾಲ್ಯವಿವಾಹ ಪ್ರಕರಣ
ಕರ್ನಾಟಕದಲ್ಲಿ ಲಾಕ್ ಡೌನ್ ನಡುವೆಯೂ ಅತಿಹೆಚ್ಚು ಬಾಲ್ಯವಿವಾಹಗಳು ನಡೆದಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಬಳ್ಳಾರಿ, ಮೈಸೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿವೆ.

ಬಾಲ್ಯವಿವಾಹ ತಡೆಯಲು 181 ಸಹಾಯವಾಣಿಗೆ ಕರೆ ಮಾಡಿ
ಕಳೆದ ವರ್ಷದ ಬಾಲ್ಯವಿವಾಹ ಪ್ರಕರಣಗಳನ್ನು ಈ ವರ್ಷಕ್ಕೆ ತಾಳೆಹಾಕಿ ನೋಡಿದಾಗ ಬಹುತೇಕ ಎರಡು ಪಟ್ಟು ಪ್ರಕರಣಗಳು ಹೆಚ್ಚಾಗಿವೆ. ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 181 ಸಹಾಯವಾಣಿಯನ್ನು ಆರಂಭಿಸಲಾಗಿದೆ. ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಸಿಕ್ಕಲ್ಲಿ ತಕ್ಷಣ ಈ ಸಹಾಯವಾಣಿಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ್ ತಿಳಿಸಿದ್ದಾರೆ.

ಲಾಕ್ ಡೌನ್ ನಿಂದ ಕಡಿಮೆ ಖರ್ಚಿನಲ್ಲಿಯೇ ಮದುವೆ
ಕೊರೊನಾವೈರಸ್ ಭೀತಿ ಮತ್ತು ಲಾಕ್ ಡೌನ್ ನಿಂದಾಗಿ ಕಡಿಮೆ ಖರ್ಚಿನಲ್ಲಿಯೇ ಮಕ್ಕಳ ಮದುವೆ ಮಾಡುವುದಕ್ಕೆ ಪೋಷಕರು ಆಲೋಚಿಸುತ್ತಿದ್ದಾರೆ. ಸಾಮಾನ್ಯವಾಗಿ ಹೆಣ್ಣಿನ ಕಡೆಯವರಿಗೆ ಮದುವೆಯ ಖರ್ಚು ಬಲು ದುಬಾರಿ ಎನಿಸುತ್ತದೆ. ಮಧ್ಯಮ ಮತ್ತು ಬಡವರ್ಗದ ಜನರು ಮಕ್ಕಳ ಮದುವೆಗಾಗಿ ಸಾಲ ಮಾಡಿಕೊಳ್ಳುವಂತಾ ಸ್ಥಿತಿಯಿದೆ. ಇದರ ನಡುವೆ ಕಡಿಮೆ ಖರ್ಚಿನಲ್ಲಿ ಸರಳವಾಗಿ ಮದುವೆ ಮಾಡುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಇದನ್ನೇ ಅವಕಾಶವಾಗಿ ತೆಗೆದುಕೊಂಡ ಹಲವರು 18 ವರ್ಷಕ್ಕಿಂತ ಚಿಕ್ಕವಯಸ್ಸಿನ ಮಕ್ಕಳಿಗೂ ಮದುವೆ ಮಾಡಿರುವುದು ಬೆಳಕಿಗೆ ಬಂದಿದೆ. ಅದಾಗ್ಯೂ ಸೀಮಿತ ಸಿಬ್ಬಂದಿಯನ್ನು ಬಳಸಿಕೊಂಡು ದೂರುಗಳ ಆಧಾರದಲ್ಲಿ ಹಲವು ಬಾಲ್ಯವಿವಾಹಗಳನ್ನು ತಡೆಯುವಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಯಶಸ್ವಿಯಾಗಿದೆ ಎಂದು ಚೇರ್ಮನ್ ಸೆಬಾಸ್ಟಿಯನ್ ಆಂಟೋನಿ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications