ಪ್ರವಾಹ: ಯಡಿಯೂರಪ್ಪ ಜೊತೆ ಜಂಟಿ ವೈಮಾನಿಕ ಸಮೀಕ್ಷೆ ನಡೆಸಿದ ಶಾ
ಬೆಳಗಾವಿ, ಆಗಸ್ಟ್ 11: ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಪ್ರವಾಹ ತಲೆದೂರಿದ್ದು, ನೆರೆ ವೀಕ್ಷಣೆಗೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಇಂದು ಆಗಮಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಸಿಎಂ ಯಡಿಯೂರಪ್ಪ, ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಬರಮಾಡಿಕೊಂಡರು.
ದೆಹಲಿಯಲ್ಲಿ ಅಮಿತ್ ಶಾ ಅದೇನು ಸೂಚನೆ ಕೊಟ್ಟರೋ. 76ರ ಬಿಎಸ್ವೈ, ಇನ್ ಫುಲ್ ಸ್ವಿಂಗ್
ಕೇಂದ್ರ ಗೃಹ ಸಚಿವರಿಂದ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಅಮಿತ್ ಶಾ ಅವರು ನಂತರ ರಾಜ್ಯದ ಹಿರಿಯ ಅಧಿಕಾರಿಗಳ ಜತೆಗೆ ವಿಮಾನ ನಿಲ್ದಾಣದ ಸಭಾ ಭವನದಲ್ಲಿ ಸಭೆ ನಡೆಸಿದರು.
ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ಅವರು ಜಂಟಿಯಾಗಿ ಪ್ರವಾಹದ ವೈಮಾನಿಕ ಸಮೀಕ್ಷೆ ನಡೆಸಿದರು. ಈ ಸಮಯ ಸಚಿವರ ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ ಹಾಗೂ ಪ್ರಮುಖ ಅಧಿಕಾರಿಗಳೂ ಹಾಜರಿದ್ದರು. ಅಮಿತ್ ಶಾ ಅವರು ಬೆಳಗಾವಿ ಸೇರಿದಂತೆ, ಬಾಗಲಕೋಟೆ ಇನ್ನೂ ಕೆಲವು ಕಡೆಗಳಲ್ಲಿ ನೆರೆ ಪರಿಸ್ಥಿತಿಯನ್ನು ವೀಕ್ಷಿಸಿದರು.
ಆಗ ರಾಜ್ಯದ ನೆರವಿಗೆ ಬಂದಿದ್ದರು ಮನಮೋಹನ್ ಸಿಂಗ್: ಈಗ ಮೋದಿ ಎಲ್ಲಿದ್ದಾರೆ?
ಪ್ರವಾಹದಿಂದ ಈಗಾಗಲೇ 20,000 ಕೋಟಿಗೂ ಹೆಚ್ಚು ಹಾನಿ ಆಗಿದೆ. ಹಾಗಾಗಿ ಕೇಂದ್ರದಿಂದ ಹೆಚ್ಚಿನ ನೆರವಿನ ನಿರೀಕ್ಷೆ ರಾಜ್ಯಕ್ಕೆ ಇದೆ.