Sriramulu: ಅಜ್ಞಾತ ಸ್ಥಳದಲ್ಲಿ ಶ್ರೀರಾಮುಲು, ಅಮಿತ್ ಶಾ ಕರೆ
ಬೆಂಗಳೂರು, ಜನವರಿ 28: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿರುವ ಬೆನ್ನಲ್ಲೇ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಶ್ರೀರಾಮುಲು ಪಕ್ಷ ಬಿಡುವ ಕುರಿತು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದು, ಅಜ್ಞಾತ ಸ್ಥಳದಲ್ಲಿರುವ ಶ್ರೀರಾಮುಲು ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದಾರೆ.
ಆಪ್ತ ಸ್ನೇಹಿತ ಜನಾರ್ದನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಶ್ರೀರಾಮುಲು ಪಕ್ಷ ಬಿಡುವ ಕುರಿತು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಶಾಕ್ ಉಂಟಾಗಿದ್ದು, ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ಬಿ. ಶ್ರೀರಾಮುಲುಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅಲ್ಲದೇ ದೆಹಲಿಗೆ ಬರುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಈಗಾಗಲೇ ಮಾಜಿ ಸಚಿವ ಶ್ರೀರಾಮುಲು ಅವರು ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಸಿಡಿದೆದ್ದಿದ್ದರು. ಇದೀಗ ಶ್ರೀರಾಮುಲುಗೆ ಅಮಿತ್ ಶಾ ಕರೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಜ್ಞಾತ ಸ್ಥಳದಲ್ಲಿ ಶ್ರೀರಾಮುಲು ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಈ ಸೋಮವಾರವೇ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಸೋಮವಾರದಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದ ಸಂದರ್ಭದಲ್ಲಿ ಭೇಟಿಯಾಗಿ, ಚರ್ಚೆ ಮಾಡಲು ಅಮಿತ್ ಶಾ ನಿರ್ಧಾರ ಮಾಡಿದ್ದಾರೆ. ಈ ವೇಳೆ ಅಮಿತ್ ಶಾ ಜೊತೆಗಿನ ಶ್ರೀರಾಮಲು ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ ಎಂದು ಹೇಳಲಾಗಿದೆ. ಇನ್ನೂ ಸಂಡೂರು ಉಪಚುನಾವಣೆ ಸಂದರ್ಭದಲ್ಲಿ ನಾನು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಮೇಲೂ ಶ್ರೀರಾಮುಲು ಸಿಟ್ಟಾಗಿದ್ದಾರೆ.
ಕಳೆದ ವಾರ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅವರ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಸಂಡೂರು ಉಪಚುನಾವಣೆಯ ಚರ್ಚೆ ಬಂದಾಗ ರಾಧಾ ಮೋಹದಾಸ್ ಅಗರವಾಲ್ ಅವರು ಬಂಗಾರು ಹನುಮಂತು ಸೋಲಿಗೆ ಮಾಜಿ ಸಚಿವ ಶ್ರೀರಾಮುಲು ಕಾರಣ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹೀಗಾಗಿ ಇದು ಶ್ರೀರಾಮುಲು ಅಸಮಾಧಾನಕ್ಕೆ ಕಾರಣವಾಗಿತ್ತು.
ಸಂಡೂರು ಚುನಾವಣೆಯ ಬಳಿಕ ಶ್ರೀರಾಮುಲು ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದ ಬಂಗಾರು ಹನುಮಂತು ದೂರು ನೀಡಿದ್ದರು .ಇನ್ನು ಆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ನಾಯಕರ ಶ್ರಮ ಸಾಕಾಗಿಲ್ಲ ಎಂದು ಶ್ರೀರಾಮುಲು ಅವರನ್ನು ಸೇರಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲಾ ಈ ಬೆಳವಣೆಗೆಯ ಮಧ್ಯ ಶ್ರೀರಾಮುಲು ಖಾಸಗಿ ಚಾನಲ್ ನಲ್ಲಿ ಪಕ್ಷ ಬಿಡುಗ ಮಾತನಾಡಿದ್ದಾರೆ. ಅಲ್ಲದೇ ನನ್ನ ಮುಗಿಸಲು ಜನಾರ್ದನ ರೆಡ್ಡಿ ಪ್ರಯತ್ನ ನಡೆಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳರೋದು ಸ್ಪಷ್ಟವಾಗಿದೆ. ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಜನಾರ್ದನ ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ರಾಧಾಮೋಹನ್ ದಾಸ್ ಲಘುವಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಬೇಸರ ಹೊರ ಹಾಕಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications