ರಾಹುಲ್ ಗಾಂಧಿಯನ್ನು ಸುಳ್ಳಿನ ಸರದಾರ ಎಂದ ಅಮಿತ್ ಶಾ
Recommended Video

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸುಳ್ಳುಗಾರ ಎಂದು ಕರೆದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ರಾಹುಲ್ ಗಾಂಧಿ ಅವರ ಭಾಷಣದ ದೃಶ್ಯದ ತುಣುಕೊಂದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅಮಿತ್ ಶಾ ಅವರು 'ಸುಳ್ಳು ಮತ್ತು ಬರೀ ಸುಳ್ಳು' ಎಂದು ಬರೆದುಕೊಂಡಿದ್ದಾರೆ.
Lies and only Lies!
— Amit Shah (@AmitShah) April 5, 2018
See how @RahulGandhi fictitiously revokes the SC/ST Act to incite hatred in society. pic.twitter.com/4vcnM0zltM
ಅಮಿತ್ ಶಾ ಹಂಚಿಕೊಂಡಿರುವ ವಿಡಿಯೊ ದೃಶ್ಯದಲ್ಲಿ ರಾಹುಲ್ ಗಾಂಧಿ ಅವರು ದಲಿತರ ಮೇಲಿನ ದೌರ್ಜನ್ಯ ಮತ್ತು ಎಸ್ಸಿ/ಎಸ್ಟಿ ಕಾಯ್ದೆ ಬಗ್ಗೆ ಮಾತನಾಡಿದ್ದಾರೆ.

'ದಲಿತರ ಹಾಗೂ ಆದಿವಾಸಿಗಳ ಮೇಲೆ ದೌರ್ಜನ್ಯಗಳು ಆಗುತ್ತಲೇ ಇವೆ, ಆದರೆ ಎಸ್ಸಿ/ಎಸ್ಟಿ ಕಾಯ್ದೆಯನ್ನೇ ರದ್ದು ಮಾಡಲಾಗುತ್ತದೆ ಆದರೆ ಇದರ ಬಗ್ಗೆ ನರೇಂದ್ರ ಮೋದಿ ಒಂದೂ ಮಾತನಾಡುವುದಿಲ್ಲ' ಎಂದು ಹೇಳುತ್ತಿರುವ ವಿಡಿಯೋ ಅದಾಗಿದೆ.
'ನೋಡಿ ಹೇಗೆ ರಾಹುಲ್ ಗಾಂಧಿ ಅವರು ಎಸ್ಸಿ/ಎಸ್ಟಿ ಕಾಯ್ದೆಯ ಬಗ್ಗೆ ಸುಳ್ಳು ಮಾಹಿತಿ ಪಸರಿಸಿ ಸಮಾಜದಲ್ಲಿ ಅಸಹನೆ ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ' ಎಂದು ಅಮಿತ್ ಶಾ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಅಮಿತ್ ಶಾ ಅವರು ಬಾಯಿ ತಪ್ಪಿ ಯಡಿಯೂರಪ್ಪ ಅವರನ್ನು ಭ್ರಷ್ಟ ಎಂದಿದ್ದನ್ನು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿ 'ಸುಳ್ಳುಗಳ ಸರದಾರ ಮೊದಲ ಬಾರಿಗೆ ಸತ್ಯ ಮಾತಾಡಿದ್ದಾರೆ' ಎಂದು ಗೇಲಿ ಮಾಡಿತ್ತು. ಇದೀಗ ಅಮಿತ್ ಶಾ ಅವರು ರಾಹುಲ್ ಅವರ ವಿಡಿಯೋ ಪ್ರಕಟಿಸಿ ಸುಳ್ಳುಗಾರ ಎಂದು ಕರೆದಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಸೋಷಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ತೆರೆದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶ: 473 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ












Click it and Unblock the Notifications