ಅಮಿತ್ ಶಾ ಆಗಸ್ಟ್ 12ರಿಂದ ರಾಜ್ಯ ಪ್ರವಾಸ

ಬೆಂಗಳೂರು, ಆಗಸ್ಟ್ 6: ಆಗಸ್ಟ್ 12ರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವಾಸ ಮಾಡಲಿದ್ದಾರೆ. ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ.

ಪ್ರವಾಸದ ವೇಳೆ ಮೊದಲ ದಿನ ಚಿಂತಕರು ಮತ್ತು ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ. ಎರಡನೇ ದಿನ ಎಸ್.ಸಿ ಎಸ್.ಟಿ ಮತ್ತು ಒಬಿಸಿ ಸಂಘಟನೆಗಳು ಮತ್ತು ನಾಯಕರ ಜತೆ ವಿಶೇಷ ಸಭೆ ನಡೆಸಲಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಗ್ರಂಥಾಲಯ ಉದ್ಘಾಟನೆ, ಬೂತ್ ಸಮಿತಿ ಸಭೆ, ದಲಿತರ ಮನೆಯಲ್ಲಿ ಉಪಹಾರ ಸೇವನೆ, ಹೀಗೆ ಹಲವು ಕಾರ್ಯಕ್ರಮಗಳು ನಿಗದಿಯಾಗಿವೆ.

Amit Shah starts his Karnataka tour from August 12th

ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಗಸ್ಟ್ 13 ರಂದು ಅಮಿತ್ ಶಾ ಭೇಟಿಯಾಗಲಿದ್ದಾರೆ. ಬಿಜೆಪಿ ನಾಯಕರು, ಪದಾಧಿಕಾರಿಗಳ ಜತೆಯೂ ಹಲವು ಸಭೆಗಳನ್ನು, ಸಂವಾದಗಳನ್ನು ಶಾ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+