ಪ್ರತಾಪ್ ಸಿಂಹ ವಿಡಿಯೋ ಹೇಳಿಕೆ, ಮುಜುಗರ ತಪ್ಪಿಸಲು ಬಿಜೆಪಿ ಹೆಣಗಾಟ
"ಬಿಜೆಪಿ ಯುವ ಮೋರ್ಚಾ ಈಚೆಗೆ ಯಾವ ಪ್ರತಿಭಟನೆಗಳನ್ನು ಮಾಡಿದೆ? ಆಗ ಎಲ್ಲಾದರೂ ಟಿಯರ್ ಗ್ಯಾಸ್ ಪ್ರಯೋಗ ಮಾಡಿದ್ದರಾ ಅಥವಾ ಲಾಠಿ ಚಾರ್ಜ್ ಆಗಿದೆಯಾ? ಯುವ ಮೋರ್ಚಾದ ಪ್ರತಿಭಟನೆಗಳು ತುಂಬ ಆಕ್ರಮಣಕಾರಿಯಾಗಿರಬೇಕು ಎಂದಿದ್ದರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ. ಇನ್ನು ಮುಂದೆ ಆ ರೀತಿಯ ಪ್ರತಿಭಟನೆಗಳು ಮಾಡುವುದಾಗಿ ಹೇಳಿದ್ದೆ."
-ಹೀಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿರುವ ವಿಡಿಯೋ ಎಲ್ಲೆಲ್ಲೂ ಹರಿದಾಡುತ್ತಿದೆ. ಕಳೆದ ಆಗಸ್ಟ್ ನಲ್ಲಿ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ನಡೆದಿದ್ದ ಸಂಭಾಷಣೆ ಬಗ್ಗೆ ಪ್ರತಾಪ್ ವಿಡಿಯೋ ಮಾಡಿ ಹಾಕಿದ್ದರು. ಈ ವಿಡಿಯೋ ಹಳೆಯದಾದರೂ ಮೈಸೂರು ಜಿಲ್ಲೆಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ನಡೆದ ಗಲಭೆ ಕಾರಣಕ್ಕೆ ಮತ್ತೆ ಜೀವ ಪಡೆದುಕೊಂಡಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದೇ ಬಿಜೆಪಿ ಉದ್ದೇಶ ಎಂದು ಆರೋಪಿಸಿ, ಕಾಂಗ್ರೆಸ್ ನ ನಾಯಕರು ಈ ವಿಡಿಯೋವನ್ನು ಪ್ರಚುರ ಪಡಿಸುತ್ತಿದ್ದಾರೆ. ಇದರಿಂದ ಬಿಜೆಪಿ ಭಾರೀ ಮುಜುಗರ ಎದುರಿಸುತ್ತಿದೆ. ಈ ವಿಡಿಯೋದಿಂದ ಪಕ್ಷಕ್ಕೆ ಆಗುತ್ತಿರುವ ವರ್ಚಸ್ಸಿನ ಹಾನಿಯನ್ನು ತಡೆಯಲು ಮುಂದಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಮಿತ್ ಶಾರನ್ನು ಸಮರ್ಥನೆ ಮಾಡಿಕೊಂಡಿದ್ದು, ಸಂಸದ ಪ್ರತಾಪ್ ಸಿಂಹ ಅವರು ಅಧ್ಯಕ್ಷರ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡಂತಿದೆ ಎಂದು ಹೇಳಿದ್ದಾರೆ.
"ಅಮಿತ್ ಶಾ ಅವರ ಮಾತನ್ನು ಪ್ರತಾಪ್ ಸಿಂಹ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ. ಸಾಮಾಜಿಕ ಸಮಸ್ಯೆಗಳನ್ನು ಯುವ ಮೋರ್ಚಾ ಮೂಲಕ ಆಕ್ರಮಣಕಾರಿಯಾಗಿ ಜನರ ಗಮನಕ್ಕೆ ತರಬೇಕು ಎಂದು ಅಮಿತ್ ಶಾ ಹೇಳಿದ್ದರು ಅಷ್ಟೇ" ಎಂದು ಯಡಿಯೂರಪ್ಪ ಹೇಳಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications