ದೇವಿಗೆ ನಾಲಿಗೆಯನ್ನೇ ಕೊಟ್ಟ ಆನಂದ್ ಸಿಂಗ್ ಅಭಿಮಾನಿ!
ಹೊಸಪೇಟೆ, ಜ. 25: ಆತನ ಮಾತು ತೊದಲುತ್ತಿತ್ತು. ಖಾಸಗಿ ವಾಹಿನಿಯ ನಿರೂಪಕಿ ಕೇಳುವ ಪ್ರಶ್ನೆಗೆ ಉತ್ತರ ನೀಡಲು ತಡವರಿಸುತ್ತಿದ್ದ. ಹರಕೆ ತೀರಿಲ್ಲ, ನಾನು ಹರಕೆ ತೀರಸಬೇಕು ಎಂದು ಎಂದು ಪದೇ ಪದೇ ಹೇಳುತ್ತಿದ್ದ. ಅಷ್ಟಕ್ಕೂ ಇದೇನು ತೊಟ್ಟಿಲು ನೀಡುವ, ಅಥವಾ ತುಲಾಭಾರ ಮಾಡಿಸುವ ಹರಕೆಯಲ್ಲ. ನಾಲಿಗೆಯನ್ನೇ ಕತ್ತರಿಸಿಕೊಳ್ಳುವ ವಿಚಿತ್ರ ಹರಕೆ!
ಹೌದು.. ಇಂಥದ್ದೊಂದು ಹರಕೆ ತೀರಿಸಲು ಮುಂದಾದವ ಆಸ್ಪತ್ರೆ ಸೇರಿದ್ದು ಚೇತರಿಸಿಕೊಳ್ಳುತ್ತಿದ್ದಾನೆ. ಶಾಸಕ ಆನಂದ್ ಸಿಂಗ್ ಜೈಲಿನಿಂದ ಬಿಡುಗಡೆಯಾದರೆ ನಾಲಿಗೆ ಕತ್ತರಿಸಿಕೊಳ್ಳುತ್ತೇನೆ ಎಂದು ಕೊಪ್ಪಳದ ಹುಲೇಗಮ್ಮ ದೇವಿಗೆ ಹರಕೆ ಹೊತ್ತಿದ್ದ ಕಾರಿಗನೂರು ಗ್ರಾಮದ ಲಾರಿ ಚಾಲಕ ಮುರಳಿ (38) ಹಾಗೇ ಮಾಡಿಕೊಂಡು ಆಪತ್ತು ತಂದುಕೊಂಡಿದ್ದಾನೆ.[ಬೇಲೇಕೇರಿ ಪ್ರಕರಣ : ಶಾಸಕ ಆನಂದ್ ಸಿಂಗ್ ಗೆ ಜಾಮೀನು]

ಜಯಲಲಿತಾ ಜೈಲು ಸೇರಿದ್ದಾಗ 25ಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡರು, ನೂರಾರು ಜನ ಜೀವ ತೆಗೆದುಕೊಳ್ಳಲು ಯತ್ನ ನಡೆಸಿದರು. ಇಂಥ ಅತಿರೇಕದ ವರ್ತನೆಗೆ ಈಗ ಹೊಸಪೇಟೆಯೂ ಸಾಕ್ಷಿಯಾಗಿದೆ.
ಆನಂದ್ ಸಿಂಗ್ ಬಿಡುಗಡೆಯಾಗುತ್ತಿದ್ದಂತೆ ದೇವಾಲಯಕ್ಕೆ ತೆರಳಿ ನಾಲಿಗೆ ಕತ್ತರಿಸಿಕೊಳ್ಳಲು ಮುಂದಾಗಿದ್ದ ಮುರಳಿಯನ್ನು ಪೊಲೀಸರು ಮತ್ತು ಮನೆಯವರು ಮನವೊಲಿಸಿ ವಾಪಸ್ ಕರೆತಂದಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಮುರಳಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾಲಿಗೆ ಕತ್ತರಿಸಿಕೊಂಡಿದ್ದು ಆಸ್ಪತ್ರೆ ಸೇರಿದ್ದಾನೆ.[ಬೇಲೇಕೇರಿ ಪ್ರಕರಣ, ಶಾಸಕ ಆನಂದ್ ಸಿಂಗ್ ಬಂಧನ]
ಮುರಳಿಯನ್ನು ಆನಂದ್ ಸಿಂಗ್ ಸಂಬಂಧಿಕರು ಸಂಪರ್ಕ ಮಾಡಿದ್ದು ಇಂಥ ಅತಿರೇಕದ ವರ್ತನೆ ತೋರಬಾರದು ಎಂದು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ನಾಯಕನ ಮೇಲಿನ ಅಂಧಾಭಿಮಾನಕ್ಕೆ ಮುರಳಿ ತನ್ನ ನಾಲಿಗೆಯನ್ನೇ ಬಲಿ ನೀಡಿದ್ದಾನೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications