Mysore Sandal Soap: ಮೈಸೂರು ಸ್ಯಾಂಡಲ್ ಸೋಪ್ ಬಳಸುತ್ತೇನೆ ಎಂದ ಆನಂದ್ ಮಹಿಂದ್ರಾ; ಸಚಿವ ಎಂಬಿ ಪಾಟೀಲ್ ಹೇಳಿದ್ದೇನು?
ಮೈಸೂರು ಸ್ಯಾಂಡಲ್ ಸೋಪ್, ಕರ್ನಾಟಕದ ಹೆಮ್ಮೆ, ನಾಡಿನ ಶ್ರೀಗಂಧದ ಕಂಪನ್ನು ದೇಶ ವಿದೇಶಗಳಲ್ಲಿ ಹರಡುತ್ತಿರುವ ಸೋಪು. 1918ರಲ್ಲಿ ನಾಲ್ಕನೇ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಈ ಸೋಪು ತಯಾರಿಕಾ ಕಾರ್ಖಾನೆಯನ್ನು ಆರಂಭಿಸಲಾಯಿತು. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಯ ಹೆಸರಿನಲ್ಲಿ ಆರಂಭಿಸಲಾದ ಕಾರ್ಖಾನೆಯಲ್ಲಿ ಶ್ರೀಗಂಧದ ಎಣ್ಣೆಯಿಂದ ಸಾಬೂನು ತಯಾರಿಸಲಾಗುತ್ತದೆ. ಶ್ರೀಗಂಧದ ಎಣ್ಣೆಯನ್ನು ಬಳಸಿ ಸಾಬೂನು ತಯಾರಿಸುವ ಏಕೈಕ ಕಾರ್ಖಾನೆ ಇದು ಎನ್ನವುದು ಹೆಮ್ಮೆಯ ಸಂಗತಿ.
ಶತಮಾನಗಳಿಗಿಂತ ಹೆಚ್ಚಿನ ಕಾಲ ಒಂದು ಸರ್ಕಾರಿ ಸಂಸ್ಥೆ ಉಳಿದು ಬಂದಿರುವುದು ಅದರ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿ. ಇತ್ತೀಚೆಗೆ ಹಲವು ಯೂಟ್ಯೂಬ್, ಸೋಷಿಯಲ್ ಮೀಡಿಯಾಗಳಲ್ಲಿ ಸೋಪು ತಯಾರಿಕಾ ವಿಧಾನದ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವಿಡಿಯೋ ಉದ್ಯಮಿ ಆನಂದ್ ಮಹಿಂದ್ರಾ ಅವರ ಗಮನ ಸೆಳೆದಿದ್ದು ಮೈಸೂರು ಸ್ಯಾಂಡಲ್ ಸೋಪ್ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆನಂದ್ ಮಹಿಂದ್ರಾ, ಈ ದೃಶ್ಯಗಳನ್ನು ನೋಡಿ ಹಳೆಯ ದಿನಗಳನು ನೆನಪಾಯಿತು. ಮೈಸೂರು ಸ್ಯಾಂಡಲ್ ಸೋಪ್ ಇನ್ನೂ ಉಳಿದುಕೊಂಡಿದ್ದು ಅಭಿವೃದ್ಧಿ ಹೊಂದಿರುವುದನ್ನು ನೋಡಿ ಸಂತೋಷವಾಗಿದೆ. ಅದನ್ನು ಮತ್ತೆ ಖರೀದಿಸಿ ಆ ಸಂಪ್ರದಾಯದ ಸುಗಂಧವನ್ನು ಆಸ್ವಾಧಿಸಬೇಕಿದೆ ಎಂದು ಹೇಳಿದ್ದಾರೆ.
ಧನ್ಯವಾದ ತಿಳಿಸಿದ ಸಚಿವ ಎಂಬಿ ಪಾಟೀಲ್
ಆನಂದ್ ಮಹಿಂದ್ರಾ ಅವರ ಎಕ್ಸ್ ಪೋಸ್ಟ್ಗೆ ಪ್ರತಿಕ್ರಿಯೆ ನೀಡಿರುವ ಕೈಗಾರಿಕಾ ಸಚಿವ ಎಂಬಿ ಪಾಟೀಲ್, "ನಿಮ್ಮ ನೆನಪುಗಳನ್ನು ಹಂಚಿಕೊಂಡು ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ಬಗ್ಗೆ ಹೊಗಳಿದ್ದಕ್ಕೆ ಧನ್ಯವಾದಗಳು. ಕೆಎಸ್ಡಿಎಲ್ ತನ್ನ ಪರಂಪರೆಯನ್ನು ಎತ್ತಿಹಿಡಿದಿರುವುದು ಹೆಮ್ಮೆಯ ಸಂಗತಿಯಾಗಿದೆ. ನಿಮ್ಮ ಬೆಂಬಲ ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆಯ ಸಂಗತಿಯಾಗಿದೆ. ನೀವು ಮತ್ತೆ ನಮ್ಮ ಉತ್ಪನ್ನಗಳ ಗ್ರಾಹಕರಾಗಲು ಎದುರುನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.
ಆನಂದ್ ಮಹಿಂದ್ರಾ ಅವರ ಪೋಸ್ಟ್ ಕನ್ನಡಿಗರ ಮೆಚ್ಚುಗೆ ಪಡೆದುಕೊಂಡಿದೆ. ಹಲವು ಮಂದಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಇದನ್ನು ನಾವು ಹಲವು ವರ್ಷಗಳಿಂದ ಮೈಸೂರು ಸ್ಯಾಂಡಲ್ ಸೋಪ್ ಬಳಸುತ್ತೇವೆ ಎಂದಿದ್ದಾರೆ, ಇನ್ನೂ ಹಲವು ಮಂದಿ ಭಾರತದಲ್ಲಿ ಇದು ಅತ್ಯುತ್ತಮ ಸೋಪು ಎಂದು ಶ್ಲಾಘಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications