ಅನಂತ್ ಕುಮಾರ್ ಹೆಗಡೆ ಹೇಳಿಕೆಯೇ ಬಿಜೆಪಿಗೆ ಮುಳುವಾಯ್ತಾ?
ಬಿಜೆಪಿ ಹೀನಾಯ ಹಿನ್ನಡೆ ಕಂಡಿದೆ, ಈ ಬಾರಿ 400 ಸ್ಥಾನ ಗೆಲ್ಲುವ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ನಾಯಕರಿಗೆ ಕೇವಲ 300 ಸ್ಥಾನ ದಾಟುವುದು ಕೂಡ ಸಾಧ್ಯವಾಗಿಲ್ಲ. ಹೀಗಾಗಿ ಈಗ ದೊಡ್ಡ ಸಂಕಷ್ಟ ಎದುರಾಗಿ, ಎದ್ದೂ ಬಿದ್ದು ಸರ್ಕಾರ ರಚಿಸುತ್ತಿದೆ ಎನ್ಡಿಎ. ಆದರೆ ಈ ರೀತಿ ಬಿಜೆಪಿ ಹಿನ್ನಡೆ ಅನುಭವಿಸಲು ಹಲವು ಕಾರಣ ಇವೆ, ಅದರಲ್ಲೂ ಸಂವಿಧಾನದ ಬಗ್ಗೆ ಸ್ವತಃ ಬಿಜೆಪಿ ಸಂಸದರು ನೀಡಿದ್ದ ಹೇಳಿಕೆ ದೊಡ್ಡ ಪರಿಣಾಮ ಬೀರಿದೆ ಎಂಬ ಆರೋಪವು ಕೇಳಿಬಂದಿದೆ.
ಹೌದು, ಬಿಜೆಪಿ ನಾಯಕರು ಪದೇ ಪದೇ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅದ್ರಲ್ಲೂ ಬಿಜೆಪಿಗೆ ಭಾರತದ ಸಂವಿಧಾನ ಬದಲಾಯಿಸುವುದೇ ಗುರಿ ಅಂತಾ ಕಾಂಗ್ರೆಸ್ ನಾಯಕರೆಲ್ಲಾ ಆರೋಪ ಮಾಡುತ್ತಾರೆ. ಈ ಆರೋಪಕ್ಕೆ ಪುಷ್ಟಿ ನೀಡುವ ರೀತಿ, ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ ಒಂದು ಹೇಳಿಕೆ ನೀಡಿದ್ದರು. ಅದು ಇಡೀ ದೇಶದಲ್ಲಿ ವೈರಲ್ ಆಗಿ ಬಿಜೆಪಿ ನಾಯಕರಿಗೆ ಕೂಡ ಭಾರಿ ಇರಿಸು & ಮುರಿಸು ಉಂಟುಮಾಡಿತ್ತು. ಹೀಗೆ ಸಂವಿಧಾನ ಕುರಿತು ನೀಡಿದ ಹೇಳಿಕೆ ಕೂಡ ಬಿಜೆಪಿ ಹಿನ್ನಡೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಸವಿಂಧಾನದ ಬಗ್ಗೆ ಅನಂತ್ ಹೆಗಡೆ ಹೇಳಿಕೆ!
ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರಲು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಬೇಕು ಎಂಬ ಡಿಮ್ಯಾಂಡ್ ಅನ್ನ ಮತದಾರರ ಎದುರು ಇಟ್ಟಿತ್ತು. ಹಾಗೇ ಇದೇ ಕಾರಣಕ್ಕೆ, ಬಿಜೆಪಿಗೆ 400 ಸ್ಥಾನ ಗೆಲ್ಲಿಸಿಕೊಡಿ ಅಂತಾ ಮನವಿ ಮಾಡುತ್ತಿದ್ದರು. ಆದರೆ ಇದೇ ಸಮಯದಲ್ಲಿ ಬಿಜೆಪಿಯ ಸಂಸದರಾಗಿದ್ದ ಅನಂತ್ ಕುಮಾರ್ ಹೆಗಡೆ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದರು.
ನಾವು ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಖಚಿತ, ಇದೇ ಕಾರಣಕ್ಕೆ ನಮಗೆ 400 ಸ್ಥಾನ ಬೇಕು ಎಂಬ ರೀತಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ವೈರಲ್ ಆಗಿ, ಇದೇ ವಿಚಾರ ಮುಂದೆ ಇಟ್ಟುಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಕ್ಯಾಂಪೇನ್ ಮಾಡಿದ್ದರು. ಅದು ಕೂಡ 2024ರ ಲೋಕಸಭೆ ಚುನಾವಣೆಯಲ್ಲಿ ವರ್ಕೌಟ್ ಆಗಿರುವಂತೆ, ಈಗ ಭಾಸವಾಗುತ್ತಿದೆ.
ಸಂಸದರ ಮಾತಿಗೆ ಬಿಜೆಪಿ ಬ್ರೇಕ್?
ಇದೀಗ ಬಿಜೆಪಿ ಸೋತು ಸುಣ್ಣವಾಗಿದೆ, ಆದರೂ ಮಿತ್ರ ಪಕ್ಷಗಳ ಸಹಾಯದಿಂದ ಸರ್ಕಾರದ ರಚನೆಗೆ ಸಿದ್ಧತೆ ನಡೆಸಿದೆ. ಹೀಗಿದ್ದಾಗಲೇ ಬಿಜೆಪಿ ಹಿನ್ನಡೆಗೆ ಕಾರಣ ಏನು? ಎಂಬ ಕುರಿತು, ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿ ತಮ್ಮ ತಮ್ಮ ಸಂಸದರ ಹೇಳಿಕೆಗೆ ಬ್ರೇಕ್ ಹಾಕಲು ಸಿದ್ಧತೆ ನಡೆಸಿದೆ ಎಂಬ ಮಾತು ಕೇಳಿಬಂದಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications