ಅನಂತ್ ಕುಮಾರ್ ಹೆಗಡೆ ಹೇಳಿಕೆಯೇ ಬಿಜೆಪಿಗೆ ಮುಳುವಾಯ್ತಾ?
ಬಿಜೆಪಿ ಹೀನಾಯ ಹಿನ್ನಡೆ ಕಂಡಿದೆ, ಈ ಬಾರಿ 400 ಸ್ಥಾನ ಗೆಲ್ಲುವ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ನಾಯಕರಿಗೆ ಕೇವಲ 300 ಸ್ಥಾನ ದಾಟುವುದು ಕೂಡ ಸಾಧ್ಯವಾಗಿಲ್ಲ. ಹೀಗಾಗಿ ಈಗ ದೊಡ್ಡ ಸಂಕಷ್ಟ ಎದುರಾಗಿ, ಎದ್ದೂ ಬಿದ್ದು ಸರ್ಕಾರ ರಚಿಸುತ್ತಿದೆ ಎನ್ಡಿಎ. ಆದರೆ ಈ ರೀತಿ ಬಿಜೆಪಿ ಹಿನ್ನಡೆ ಅನುಭವಿಸಲು ಹಲವು ಕಾರಣ ಇವೆ, ಅದರಲ್ಲೂ ಸಂವಿಧಾನದ ಬಗ್ಗೆ ಸ್ವತಃ ಬಿಜೆಪಿ ಸಂಸದರು ನೀಡಿದ್ದ ಹೇಳಿಕೆ ದೊಡ್ಡ ಪರಿಣಾಮ ಬೀರಿದೆ ಎಂಬ ಆರೋಪವು ಕೇಳಿಬಂದಿದೆ.
ಹೌದು, ಬಿಜೆಪಿ ನಾಯಕರು ಪದೇ ಪದೇ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅದ್ರಲ್ಲೂ ಬಿಜೆಪಿಗೆ ಭಾರತದ ಸಂವಿಧಾನ ಬದಲಾಯಿಸುವುದೇ ಗುರಿ ಅಂತಾ ಕಾಂಗ್ರೆಸ್ ನಾಯಕರೆಲ್ಲಾ ಆರೋಪ ಮಾಡುತ್ತಾರೆ. ಈ ಆರೋಪಕ್ಕೆ ಪುಷ್ಟಿ ನೀಡುವ ರೀತಿ, ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ ಒಂದು ಹೇಳಿಕೆ ನೀಡಿದ್ದರು. ಅದು ಇಡೀ ದೇಶದಲ್ಲಿ ವೈರಲ್ ಆಗಿ ಬಿಜೆಪಿ ನಾಯಕರಿಗೆ ಕೂಡ ಭಾರಿ ಇರಿಸು & ಮುರಿಸು ಉಂಟುಮಾಡಿತ್ತು. ಹೀಗೆ ಸಂವಿಧಾನ ಕುರಿತು ನೀಡಿದ ಹೇಳಿಕೆ ಕೂಡ ಬಿಜೆಪಿ ಹಿನ್ನಡೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಸವಿಂಧಾನದ ಬಗ್ಗೆ ಅನಂತ್ ಹೆಗಡೆ ಹೇಳಿಕೆ!
ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರಲು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಬೇಕು ಎಂಬ ಡಿಮ್ಯಾಂಡ್ ಅನ್ನ ಮತದಾರರ ಎದುರು ಇಟ್ಟಿತ್ತು. ಹಾಗೇ ಇದೇ ಕಾರಣಕ್ಕೆ, ಬಿಜೆಪಿಗೆ 400 ಸ್ಥಾನ ಗೆಲ್ಲಿಸಿಕೊಡಿ ಅಂತಾ ಮನವಿ ಮಾಡುತ್ತಿದ್ದರು. ಆದರೆ ಇದೇ ಸಮಯದಲ್ಲಿ ಬಿಜೆಪಿಯ ಸಂಸದರಾಗಿದ್ದ ಅನಂತ್ ಕುಮಾರ್ ಹೆಗಡೆ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದರು.
ನಾವು ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಖಚಿತ, ಇದೇ ಕಾರಣಕ್ಕೆ ನಮಗೆ 400 ಸ್ಥಾನ ಬೇಕು ಎಂಬ ರೀತಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ವೈರಲ್ ಆಗಿ, ಇದೇ ವಿಚಾರ ಮುಂದೆ ಇಟ್ಟುಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಕ್ಯಾಂಪೇನ್ ಮಾಡಿದ್ದರು. ಅದು ಕೂಡ 2024ರ ಲೋಕಸಭೆ ಚುನಾವಣೆಯಲ್ಲಿ ವರ್ಕೌಟ್ ಆಗಿರುವಂತೆ, ಈಗ ಭಾಸವಾಗುತ್ತಿದೆ.
ಸಂಸದರ ಮಾತಿಗೆ ಬಿಜೆಪಿ ಬ್ರೇಕ್?
ಇದೀಗ ಬಿಜೆಪಿ ಸೋತು ಸುಣ್ಣವಾಗಿದೆ, ಆದರೂ ಮಿತ್ರ ಪಕ್ಷಗಳ ಸಹಾಯದಿಂದ ಸರ್ಕಾರದ ರಚನೆಗೆ ಸಿದ್ಧತೆ ನಡೆಸಿದೆ. ಹೀಗಿದ್ದಾಗಲೇ ಬಿಜೆಪಿ ಹಿನ್ನಡೆಗೆ ಕಾರಣ ಏನು? ಎಂಬ ಕುರಿತು, ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿ ತಮ್ಮ ತಮ್ಮ ಸಂಸದರ ಹೇಳಿಕೆಗೆ ಬ್ರೇಕ್ ಹಾಕಲು ಸಿದ್ಧತೆ ನಡೆಸಿದೆ ಎಂಬ ಮಾತು ಕೇಳಿಬಂದಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications