ಅನಂತಕುಮಾರ ಹೆಗಡೆ ಎಲ್ಲಿ ಸಿಗ್ತಾನೋ ಅಲ್ಲೇ ಹಿಡಿದು ಹೊಡೆಯುತ್ತೇವೆ: ವಾರ್ನಿಂಗ್‌ ಕೊಟ್ಟ ಕಾಂಗ್ರೆಸ್‌ ನಾಯಕ

ದಾವಣಗೆರೆ, ಜನವರಿ 16: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು ಕಾಂಗ್ರೆಸ್‌ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಕಾಂಗ್ರೆಸ್‌ ನಾಯಕರು ವಾರ್ನಿಂಗ್‌ ನೀಡಿದ್ದಾರೆ.

ಈ ಕುರಿತು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳ ಜೊತೆಗೆ ಕಾಂಗ್ರೆಸ್‌ ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಸಂಸದ ಅನಂತಕುಮಾರ ಹೆಗಡೆ ಎಲ್ಲಿ ಸಿಗುತ್ತಾರೆ ಅಲ್ಲಿ ಹಿಡಿದು ಹೊಡೆಯಲಾಗುವುದು ಎಂದು ವಾರ್ನಿಂಗ್‌ ನೀಡಿದ್ದಾರೆ.

Ananth Kumar Hegde Will Be Caught And Beaten Wherever We Find It Says Ex-MLA S. Ramappa

ಇಷ್ಟು ದಿನ ಆರೋಗ್ಯ ಸರಿಯಿಲ್ಲ ಅಂತಾ ಹೆಗಡೆ ಮನೆಯಲ್ಲಿ‌ ಮಲಗಿದ್ದರು. ಚುನಾವಣೆ ಹಿನ್ನೆಲೆ ಕೋಮು‌ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಮಪ್ಪ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿದ ಜನರಿಗೆ ಅನ್ನ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದರೂ ಯಾವುದೇ ಕಪ್ಪು‌ಚುಕ್ಕೆ ಇಲ್ಲ. ಬಿಜೆಪಿಯ ಹಲವರು ಜೈಲಿಗೆ ಹೋಗಿದ್ದಾರೆ, ಅವರ ಬಗ್ಗೆ ಮಾತನಾಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಅನಂತ್‌ ಕುಮಾರ್‌ ಹೆಗಡೆ ಯೋಗ್ಯತೆ ಏನು ಎಂದು ಪ್ರಶ್ನಿಸಿದ್ದಾರೆ.

Ananth Kumar Hegde Will Be Caught And Beaten Wherever We Find It Says Ex-MLA S. Ramappa

ಇನ್ನೂ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ತಮ್ಮ ವಯಸ್ಸಿಗೆ ತಕ್ಕಂತೆ ಮಾತನಾಡಲಿ. ರಾಜ್ಯದಲ್ಲಿ ನಿರಂತರವಾಗಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡುತ್ತಿದ್ದಾರೆ. ಇವರು 70 ಗಡಿ ದಾಟಿದ್ದಾರೆ. ಹಿಂದು, ಮುಸ್ಲಿಂ ನಡುವೆ ಜಗಳ ಹಚ್ಚುವ ರೀತಿಯಲ್ಲಿ ಮಾಡುವುದನ್ನ ನಿಲ್ಲಿಸಲಿ ಎಂದು ಹೇಳಿದ್ದಾರೆ.

ಇವರು ಬಿಜೆಪಿಯಲ್ಲಿ ಒಂದಿಷ್ಟು ಜನ ಇದಾರೆ, ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಪಕ್ಷದ ವಿರುದ್ದ ಯಾವಾಗಲೂ ಹೀಗೆ ಮಾತನಾಡುತ್ತಾರೆ. ಹಿಂದುತ್ವ ಅನ್ನೋದು ಬಿಜೆಪಿ ಅಪ್ಪನ ಸ್ವತ್ತಾ ?. ನಾವು ಕೂಡ ಹಿಂದೂಗಳು ನಮಗೂ ಹಿಂದೂತ್ವ ಇದೆ. ಆದರೆ ಎಲ್ಲಾ ಧರ್ಮಗಳು ಒಂದಾಗಿ ಬಾಳಬೇಕು ಅನ್ನೋದು ನಮ್ಮ ಆಸೆ. ಸಿದ್ದರಾಮಯ್ಯನವರು ಅಯೋಧ್ಯ ರಾಮ ಮಂದಿರಕ್ಕೆ ಹೋಗುವುದಿಲ್ಲ ಎಂದಿದ್ದಕ್ಕೆ ಏಕ ವಚನದಲ್ಲಿ ಮಾತನಾಡುತ್ತಾನೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಾನು ಈಗ ಹೋಗುವುದಿಲ್ಲ, ಮುಂದೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೂ ಇವರು ಮಗನೇ ಎಂದು ಮಾತನಾಡುತ್ತಾನೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಗೆ ಏಕವಚನದಲ್ಲೇ ಹರಿಹರ ಮಾಜಿ ಶಾಸಕ ಹಾಗೂ ಸಿದ್ದರಾಮಯ್ಯ ಆಪ್ತನಾಗಿರುವ ರಾಮಪ್ಪ ನಿಂದಿಸಿ ಎಚ್ಚರಿಕೆಯನ್ನ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದೇನು?

ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ' ಎಂದು ನಿಂದಿಸಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ 22 ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್ ಹೆಗಡೆ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+