ಮಳೆ ಹಾನಿಯ ಅಧ್ಯಯನ ನಡೆಸಿದ ಅನಂತ ಕುಮಾರ್
ಗುಲ್ಬರ್ಗ, ಸೆ.8 : ಗುಲ್ಬರ್ಗದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಕೇಂದ್ರ ಸಚಿವ ಅನಂತ ಕುಮಾರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದದರು. ಕಮಲಾನಗರದಲ್ಲಿ ಪ್ರವಾಹದಿಂದ ಮೃತಪಟ್ಟ ಆರು ವರ್ಷದ ಮಹಾದೇವಪ್ಪನ ಮನೆಗೆ ಭೇಟಿ ನೀಡಿ ಮೃತನ ತಂದೆ ಗುಂಡಪ್ಪಗೆ ಸಾಂತ್ವನ ಹೇಳಿದರು ಮತ್ತು ವೈಯಕ್ತಿಕವಾಗಿ ಒಂದು ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಕೇಂದ್ರ ರಾಸಾನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಭಾನುವಾರ ಗುಲ್ಬರ್ಗದಲ್ಲಿ ಆಗಸ್ಟ್ 26 ರಿಂದ 30ರವರೆಗೆ ಬಿದ್ದ ಮಳೆಯಿಂದ ಹಾನಿಗೀಡಾದ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಹಾನಿಯ ಬಗ್ಗೆ ಅಧ್ಯಯನ ನಡೆಸಿದರು. ವಿಧಾನ ಪರಿಷತ್ ಶಾಸಕ ಅಮರನಾಥ ಪಾಟೀಲ್, ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ್, ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಮುಂತಾದವರು ಅನಂತ ಕುಮಾರ್ ಅವರ ಜೊತೆ ಪಾಲ್ಗೊಂಡಿದ್ದರು. [ಮಳೆ ಹಾನಿ ಪರಿಹಾರಕ್ಕೆ ಕೇಂದ್ರಕ್ಕೆ ಮೊರೆ : ಸಿಎಂ]
ಅತಿವೃಷ್ಟಿಯಿಂದ ಶರಣಬಸವೇಶ್ವರ ಕೆರೆಯಲ್ಲಿ ನೀರಿನ ತೀವ್ರ ಒತ್ತಡ ತಗ್ಗಿಸಲು ಕೆರೆಯಿಂದ ಹೆಚ್ಚುವರಿ ನೀರು ಬಿಡಲು ಮಾಡಿದ ವ್ಯವಸ್ಥೆಯನ್ನು ಸಚಿವರು ವೀಕ್ಷಿಸಿದರು. ಈ ಕೆರೆಯ ಸುತ್ತಮುತ್ತಲಿನ ಕೆರೆಯ ಒಡ್ಡು ಸದೃಢಗೊಳಿಸಲು 6.74 ಕೋಟಿ ರೂ. ಅಂದಾಜು ಮೊತ್ತದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ ವಿವರವನ್ನು ಗುಲ್ಬರ್ಗ ಮಹಾನಗರ ಪಾಲಿಕೆಯ ಆಯುಕ್ತರಿಂದ ಪಡೆದರು. ಅನಂತ ಕುಮಾರ್ ಭೇಟಿಯ ಚಿತ್ರಗಳು

ಮಳೆ ಹಾನಿ ಅಧ್ಯಯನ ನಡೆಸಿದ ಕೇಂದ್ರ ಸಚಿವ
ಗುಲ್ಬರ್ಗದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದದರು.

ಒಂದು ಲಕ್ಷ ರೂ.ಪರಿಹಾರ ನೀಡಿಕೆ
ಕಮಲಾನಗರದಲ್ಲಿ ಪ್ರವಾಹದಿಂದ ಮೃತಪಟ್ಟ ಆರು ವರ್ಷದ ಮಹಾದೇವಪ್ಪನ ಮನೆಗೆ ಭೇಟಿ ನೀಡಿದ ಅನಂತ ಕುಮಾರ್, ಮೃತನ ತಂದೆ ಗುಂಡಪ್ಪಗೆ ಸಾಂತ್ವನ ಹೇಳಿದರು ಮತ್ತು ವೈಯಕ್ತಿಕವಾಗಿ ಒಂದು ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.

ಸಚಿವರಿಂದ ಕೆರೆ ವೀಕ್ಷಣೆ
ಭಾರೀ ಮಳೆಯಿಂದ ಶರಣಬಸವೇಶ್ವರ ಕೆರೆಯಲ್ಲಿ ನೀರಿನ ಒತ್ತಡ ಹೆಚ್ಚಾಗಿದ್ದು, ಅದನ್ನು ತಗ್ಗಿಸಲು ಕೆರೆಯಿಂದ ಹೆಚ್ಚುವರಿ ನೀರು ಬಿಡಲು ಮಾಡಿದ ವ್ಯವಸ್ಥೆಯನ್ನು ಅನಂತ ಕುಮಾರ್ ವೀಕ್ಷಿಸಿದರು. ಕೆರೆಯ ಸುತ್ತಮುತ್ತಲಿನ ಒಡ್ಡು ಸದೃಢಗೊಳಿಸಲು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯ ವಿವರಗಳನ್ನು ಮಹಾನಗರ ಪಾಲಿಕೆಯ ಆಯುಕ್ತರಿಂದ ಪಡೆದರು.

ರಸಗೊಬ್ಬರ ಕಾರ್ಖನೆ ಸ್ಥಾಪನೆ
ಬೆಳಗಾವಿ-ಹುಬ್ಬಳ್ಳಿ ಮಧ್ಯೆ ಹಾಗೂ ಬಿಡದಿಯಲ್ಲಿ ಸ್ಪರ್ಲೈನ್ ಆಧಾರಿತ ರಸಗೊಬ್ಬರ ಕಾರ್ಖಾನೆ ಸ್ಥಾಪಿಸಲಾಗುತ್ತದೆ ಎಂದು ಗುಲ್ಬರ್ಗದಲ್ಲಿ ಸಚಿವರು ಹೇಳಿದರು. ಗ್ಯಾಸ್ ಅಥಾರಿಟಿ ಆಫ್ ಇಂಡಿಯಾವು ದಾಬೂಲ್ನಿಂದ ಬೆಳಗಾವಿ ಮೂಲಕ ಹುಬ್ಬಳ್ಳಿ, ಬೆಂಗಳೂರು ಬಿಡದಿವರೆಗೆ ಪೈಪ್ಲೈನ್ ನಿರ್ಮಿಸಿದೆ. ಇದರ ಸಹಾಯದಿಂದ ರಸಗೊಬ್ಬರ ಕಾರ್ಖಾನೆ ಸ್ಥಾಪಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಶೀಘ್ರ ರಾಷ್ಟ್ರೀಯ ರಸಗೊಬ್ಬರ ನೀತಿ
ಯೂರಿಯಾ, ಎನ್ಪಿಕೆ (ಸಾರಜನಕ, ಪಾಸ್ಪರಸ್, ಪೊಟ್ಯಾ ಶಿಯಂ) ಬಳಕೆ ಕುರಿತು ಹೆಚ್ಚುತ್ತಿರುವ ಆತಂಕ ಹಾಗೂ ಭೂಮಿ- ಕೃಷಿಯ ಮೇಲೆ ಆಗುತ್ತಿರುವ ಪ್ರತಿಕೂಲ ಪರಿಣಾಮ ತಡೆಗೆ ಶೀಘ್ರವೇ ರಾಷ್ಟ್ರೀಯ ರಸಗೊಬ್ಬರ ನೀತಿ ಜಾರಿ ಗೊಳಿಸಲಾಗುವುದು ಎಂದು ಅನಂತ್ ಕುಮಾರ್ ಹೇಳಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications