ವಿಜಯ್ ಕುಮಾರ್ ಸ್ಥಾನ ತುಂಬಬಲ್ಲ ಬಿಜೆಪಿ ಅಭ್ಯರ್ಥಿ ಯಾರು?
Recommended Video
ಬೆಂಗಳೂರು, ಮೇ 4: ಜಯನಗರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನಲೆಯಲ್ಲಿ ಈ ಕ್ಷೇತ್ರದ ಮತದಾನವನ್ನು ಚುನಾವಣಾ ಆಯೋಗ ಮುಂದೂಡಿ ಆದೇಶ ಹೊರಡಿಸಿದೆ. ಈ ನಡುವೆ ಈ ಕ್ಷೇತ್ರದಲ್ಲಿ ಮುಂದಿನ ಬಿಜೆಪಿ ಅಭ್ಯರ್ಥಿ ಯಾರು ಎಂಬ ಲೆಕ್ಕಾಚಾರ ಆರಂಭವಾಗಿದೆ.
ಜಯನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಅವರು ಕಣಕ್ಕಿಳಿದಿದ್ದರು. ಜೆಡಿಎಸ್ನಿಂದ ಕಾಳೇಗೌಡ ಅವರು ಕಣಕ್ಕಿಳಿದಿದ್ದರು. ಕ್ಷೇತ್ರದ ಮತ್ತೊಬ್ಬ ಪ್ರಮುಖ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು ಪಕ್ಷೇತರವಾಗಿ ಕಣಕ್ಕಿಳಿದಿದ್ದರು.
ಜಯನಗರದ ಜನಾನುರಾಗಿ ಶಾಸಕ ಬಿಎನ್ ವಿಜಯ್ ಕುಮಾರ್
ಇದೀಗ ವಿಜಕುಮಾರ್ ಅವರು ನಿಧನ ಹೊಂದಿದ್ದು, ಚುನಾವಣೆ ನಡೆದಾಗ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಹಾಗೂ ಸಜ್ಜನ ರಾಜಕಾರಣಿ ಎಂದು ಹೆಸರಾಗಿದ್ದ ವಿಜಯಕುಮಾರ್ ಅವರ ಸಾವು ಕಾಂಗ್ರೆಸ್ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಿದೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ.
ಶಾಸಕ ವಿಜಯ ಕುಮಾರ್ ಅವರ ಸ್ಥಾನ ತುಂಬಬಲ್ಲ ಮುಂದಿನ ಅಭ್ಯರ್ಥಿ ಬಗ್ಗೆ ಚರ್ಚೆ ಶುರುವಾಗಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಹಲವಾರು ಮಂದಿ ರೇಸ್ ನಲ್ಲಿದ್ದಾರೆ ಕೂಡಾ.
ಶಾಸಕ ವಿಜಯಕುಮಾರ್ ನಿಧನ: ಜಯನಗರ ಚುನಾವಣೆ ಮುಂದೂಡಿಕೆ
ಸದ್ಯಕ್ಕೆ ಮಾಜಿ ಮೇಯರ್ ಎಸ್.ಕೆ ನಟರಾಜು ಹೆಸರು ಮಿಕ್ಕವರಿಗಿಂತ ಮುಂದಿದೆ. ಅಲ್ಲದೆ, ಸಿ.ಕೆ ರಾಮಮೂರ್ತಿ, ಎಂ.ನಾಗರಾಜು, ಸೋಮಶೇಖರ್ ನಡುವೆ ತೀವ್ರ ಪೈಪೋಟಿ ನಡೆದಿದೆ.
ಬಿಜೆಪಿ ಪಾಲಿಗೆ ಇದು ಪ್ರತಿಷ್ಠಿತ ಕ್ಷೇತ್ರವಾಗಿದ್ದು, ಆರೆಸ್ಸೆಸ್ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಹ್ಯತೆ ಹೆಚ್ಚಿದೆ.