Channapatna Candidate: ಚನ್ನಪಟ್ಟಣ ಕ್ಷೇತ್ರದಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ; ಬಿಜೆಪಿ-ಜೆಡಿಎಸ್‌ ನಾಯಕರ ಲೆಕ್ಕಾಚಾರವೇನು?

ಬೆಂಗಳೂರು, ಜುಲೈ 01: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೀನಾಯವಾಗಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದೀಗ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಡಿಕೆ ಬ್ರದರ್ಸ್‌ ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಚನ್ನಪಟ್ಟಣ ಉಪಚುನಾವಣೆಗೆ ರಾಜಕೀಯ ಮದಗಜಗಳ ಹೋರಾಟದ ಜತೆಗೆ, ವದಂತಿಗಳ ಕೇಂದ್ರಬಿಂದವೂ ಆಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಕಳೆದುಕೊಂಡ ಡಿ ಕೆ ಬ್ರದರ್ಸ್‌, ಚನ್ನಪಟ್ಟಣ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಅಚ್ಚರಿ ಅಭ್ಯರ್ಥಿಯ ಅಸ್ತ್ರ ಪ್ರಯೋಗಿದ್ದಾರೆ. ಇತ್ತ ಒಕ್ಕಲಿಗ ನಾಯಕರಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಕಮಲ-ದಳ ನಾಯಕರು ಮಾಸ್ಟರ್‌ ಪ್ಲಾನ್‌ ನಡೆಸಿದ್ದಾರೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.

Anasuya Manjunath Competition From Channapatnam Is Likely

ಕೆಲ ದಿನಗಳ ಹಿಂದೆಯಷ್ಟೇ ಡಿ ಕೆ ಶಿವಕುಮಾರ್‌ ಅವರು ನಾನು ಚನ್ನಪಟ್ಟಣ ಅಭ್ಯರ್ಥಿಯಾಗದೇ ವಿಧಿಯಿಲ್ಲ ಎಂಬ ಹೇಳಿಕೆ ನೀಡಿದ್ರು. ಈ ಹೇಳಿಕೆ ನೀಡಿ 48 ಗಂಟೆಯ ನಂತರ ನಮ್ಮ ಕುಟುಂಬದಿಂದ ಯಾರು ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ರು. ಇನ್ನೂ ಕಾಂಗ್ರೆಸ್‌ ನಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮಾಸ್ಟರ್‌ ಪ್ಲಾನ್‌ ನಡೆಸಿದ್ದಾರೆ ಎನ್ನಲಾಗಿದೆ.

ನಮ್ಮ ಕುಟುಂಬದಿಂದ ಯಾರು ಸ್ಪರ್ಧೆ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಉಪಚುನವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್ ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಹಿಂದೆ ಡಿ ಕೆ ಬ್ರದರ್ಸ್‌ ಭದ್ರಕೋಟೆಯಾಗಿತ್ತು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಅಳಿಯ ಮಂಜುನಾಥ್‌ ಅವರು ಬಿಜೆಪಿಯಿಂದ ಸ್ಪರ್ಧೆ ನಡೆಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದೀಗ ಚನ್ನಪಟ್ಟಣದಿಂದ ಅನುಸೂಯಾ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ.ಇತ್ತ ಚನ್ನಪಟ್ಟಣದಿಂದ ಸಿ ಪಿ ಯೋಗೇಶ್ವರ್‌ ಅವರು ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ, ಸಿಪಿ ಯೋಗೇಶ್ವರ್‌ ಅವರ ಸ್ಪರ್ಧಿಸಲು ಹಿಂದೆಟ್ಟು ಹಾಕಿದ್ದು, ಸೂಕ್ತ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಚಿಂತನೆಯನ್ನ ಕಮಲ-ದಳ ನಾಯಕರು ನಡೆಸಿದ್ದಾರೆ.

ಇನ್ನೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ ಅವರನ್ನ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ಕೆಲ ನಾಯಕರು ಒತ್ತಡ ಹಾಕಿತ್ತಿದ್ದು, ಒಂದು ವೇಳೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ನಡೆಸಿದ್ರೆ, ಕಾಂಗ್ರೆಸ್‌ ನಾಯಕರು ಚನ್ನಪಟ್ಟಣ ಕ್ಷೇತ್ರವನ್ನ ಸುಲಭವಾಗಿ ಗೆಲ್ಲಬಹುದು ಎಂದು ಮಹಿಳಾ ಅಭ್ಯರ್ಥಿಯಾಗಿ ಅನುಸೂಯ ಅವರನ್ನ ಕಣಕ್ಕಿಳಿಸಲು ಮೈತ್ರಿ ಪಡೆ ಸಜ್ಜಾಗಿದೆ.

ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಅನಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಕ್ಕಲಿಗ ಸಮುದಾಯ ಹಾಗೂ ಮಹಿಳಾ ಮತಗಳನ್ನ ಸೆಳೆಯುವ ನಿಟ್ಟಿನಲ್ಲಿ ಕಮಲ-ದಳ ನಾಯಕರು ಪ್ಲಾನ್‌ ಮಾಡಿದ್ದಾರೆ. ಅಲ್ಲದೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಕಾಣಲೇಬೇಕು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರವನ್ನ ದಳಪತಿಗಳು ಕಳೆದುಕೊಂಡಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರವನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ಅನಿತಾ ಕುಮಾರಸ್ವಾಮಿ ಅವರು ತ್ಯಾಗ ಮಾಡಿದ್ರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ರಾಜಿನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌ ಗೆಲುವು ಸಾಧಿಸಬೇಕು. ಏಕೆಂದರೆ ದಳಪತಿಗಳಿಗೆ ಚನ್ನಪಟ್ಟಣ ಕ್ಷೇತ್ರ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+