ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆ್ಯಂಕರ್ ಬ್ಯಾಂಕ್ ಸ್ಥಾಪನೆ: ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಏ.9: ರಾಜ್ಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆ್ಯಂಕರ್ ಬ್ಯಾಂಕನ್ನು ಆರಂಭಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ ದುಡಿಮೆಯ ಕ್ರಾಂತಿ ಸಾಧ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಘೋಷಿಸಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದಡಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 10 ದಿನಗಳ ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಸ್ವಸಹಾಯ ಸಂಘಗಳಿಗೆ ಬಲ ತುಂಬಲು ಈ ಸಲದ ಬಜೆಟ್ಟಿನಲ್ಲಿ 500 ಕೋಟಿ ರೂ. ಕೊಡಲಾಗಿದೆ. ಈ ಮೂಲಕ 4 ಲಕ್ಷ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.

Anchor Bank soon to aid Womens Self Help Groups: Basavaraj Bommai

ಅಲ್ಲದೆ, ಈ ವರ್ಷ ಮಹಿಳಾ ಕಾರ್ಯಕ್ರಮಗಳಿಗೆ 47 ಸಾವಿರ ಕೋಟಿ ರೂ. ಮತ್ತು ಮಕ್ಕಳಿಗೆ ಸಂಬಂಧಿಸಿದ ನಾನಾ ಯೋಜನೆಗಳಿಗೆ 43 ಸಾವಿರ ಕೋಟಿ ರೂ.ಗಳಷ್ಟು ಅಗಾಧ ಮೊತ್ತವನ್ನು ಬಜೆಟ್ಟಿನಲ್ಲಿ ಪ್ರಕಟಿಸಲಾಗಿದೆ. ಇವೆಲ್ಲವುಗಳ ಅನುಷ್ಠಾನದ ಸಂಬಂಧ ಇನ್ನು ಒಂದು ವಾರದಲ್ಲಿ ಸೂಕ್ತ ಆದೇಶಗಳನ್ನು ಹೊರಡಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ನಮ್ಮ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದರೂ ಅವರ ದುಡಿಮೆಗೆ ಮನ್ನಣೆ ಸಿಗುತ್ತಿಲ್ಲ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಜನಾಂಗಗಳ ಮಹಿಳೆಯರಲ್ಲಿ ಅಪಾರ ಪ್ರತಿಭೆ ಮತ್ತು ಕೌಶಲ್ಯಗಳಿವೆ. ಆದರೆ, ಒಟ್ಟು ಸ್ತ್ರೀಯರ ಪೈಕಿ ಶೇ.5ರಿಂದ 10ರಷ್ಟು ಮಂದಿ ಮಾತ್ರ ಆರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಹೆಣ್ಣು ಮಕ್ಕಳ ದುಡಿಮೆಗೆ ನೆಲೆ-ಬೆಲೆಗಳು ಸಿಕ್ಕಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಇವರನ್ನು ಹೊರಗಿಟ್ಟು ಸಮಗ್ರ ಅಭಿವೃದ್ಧಿ ಬಗ್ಗೆ ಮಾತನಾಡಿದರೆ ಅದಕ್ಕೆ ಯಾವ ಅರ್ಥವೂ ಇಲ್ಲ ಎಂದು ಅವರು ಪ್ರತಿಪಾದಿಸಿದರು.

ಹಳ್ಳಿಗಳ ಮಹಿಳೆಯರಲ್ಲಿ ಅಪಾರ ಪ್ರತಿಭೆ ಇದೆ. ಇವರು ತಯಾರಿಸುವ ಕಸೂತಿ ವಸ್ತ್ರಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅದನ್ನೇ ಅಮೆರಿಕ, ಇಂಗ್ಲೆಂಡುಗಳಲ್ಲಿ ಎಷ್ಟೋ ಜನ ನೂರು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಲಾಭ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಕಸೂತಿಯನ್ನು ರಕ್ತಗತ ಮಾಡಿಕೊಂಡಿರುವ ಮಹಿಳೆಯರಿಗೆ ಗೌರವವೇ ಸಿಕ್ಕುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಏ.8ರಿಂದ 18ರವರೆಗೆ ರಾಷ್ಟ್ರೀಯ 'ಸಂಜೀವಿನಿ ಸರಸ್' ಮೇಳಬೆಂಗಳೂರಿನಲ್ಲಿ ಏ.8ರಿಂದ 18ರವರೆಗೆ ರಾಷ್ಟ್ರೀಯ 'ಸಂಜೀವಿನಿ ಸರಸ್' ಮೇಳ

ತಲಾದಾಯ ಹೀಗಿದೆ:

ಬೆಂಗಳೂರಿನಲ್ಲಿ ವಾರ್ಷಿಕ 3 ಲಕ್ಷ ರೂ. ತಲಾವಾರು ಆದಾಯವಿದ್ದರೆ, ಬೀದರ್ ಜಿಲ್ಲೆಯಲ್ಲಿ ಕೇವಲ 1.50 ಲಕ್ಷ ರೂ. ಇದೆ. ತಲಾವಾರು ಆದಾಯದಲ್ಲಿ ರಾಜ್ಯವು ದೇಶದಲ್ಲಿ 4ನೇ ಸ್ಥಾನದಲ್ಲಿದ್ದರೂ ಒಟ್ಟು ಜನಸಂಖ್ಯೆಯ ಶೇ.30ರಷ್ಟು ಮಂದಿ ಮಾತ್ರ ಆರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಉಳಿದ ಶೇ.70ರಷ್ಟು ಮಂದಿಯನ್ನು ಕೂಡ ಸುಸ್ಥಿರ ಬದುಕಿನ ಜತೆಗೆ ಆರ್ಥಿಕ ಚಟುವಟಿಕೆಗಳ ಭಾಗವಾಗಿಸಬೇಕು ಎನ್ನುವುದು ಸರಕಾರದ ಸಂಕಲ್ಪವಾಗಿದೆ. ಹೀಗಾದರೆ ಮಾತ್ರ ರಾಜ್ಯದ ಜಿಡಿಪಿ ಏರುಗತಿಯಲ್ಲಿ ಸಾಗಲಿದೆ. ಈ ದೇಶ ಮುನ್ನಡೆ ಸಾಧಿಸುತ್ತಿರುವುದು ಬಡವರಿಂದಲೇ ವಿನಾ ಶ್ರೀಮಂತರಿಂದಲ್ಲ ಎಂದು ಅವರು ನುಡಿದರು.

Anchor Bank soon to aid Womens Self Help Groups: Basavaraj Bommai

ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಶಯ ನುಡಿಗಳನ್ನಾಡಿ, ಮಹಿಳಾ ಸ್ತ್ರೀಸಹಾಯ ಸಂಘಗಳ ಸಬಲೀಕರಣಕ್ಕೆ ಕಾರ್ಪೊರೇಟ್ ಸಂಸ್ಥೆಗಳು, ನವೋದ್ಯಮಗಳು, ಎನ್.ಜಿ.ಒ.ಗಳ ನೆರವು ತೆಗೆದುಕೊಳ್ಳಲಾಗುತ್ತಿದೆ. ಜತೆಗೆ ಈ ಸಂಘಗಳ ಉತ್ಪನ್ನಗಳ ಬ್ರ್ಯಾಂಡಿಂಗ್, ಪ್ಯಾಕಿಂಗ್ ಮಾತ್ತು ಮಾರುಕಟ್ಟೆ ವಿಸ್ತರಣೆಗೆ ಒತ್ತು ಕೊಡಲಾಗುತ್ತಿದೆ. ಕೇಂದ್ರ ಸರಕಾರವು ಡಿಜಿಟಲೀಕರಣಕ್ಕೆ ಆದ್ಯತೆ ಕೊಟ್ಟಿದ್ದು, ಸುಗಮ ವಹಿವಾಟಿಗೆ ಆ್ಯಪ್ ಒದಗಿಸಿದೆ. ಸ್ವಸಹಾಯ ಸಂಘಗಳು ಇದರ ಲಾಭ ಪಡೆದುಕೊಳ್ಳಬೇಕು' ಎಂದರು.

ಈ ವರ್ಷವನ್ನು ಜೀವನೋಪಾಯ ವರ್ಷ'ವೆಂದು ಘೋಷಿಸಲಾಗಿದ್ದು, ಈ ಕಾರ್ಯಕ್ರಮಗಳಿಗೆ 1,500 ಕೋಟಿ ರೂ. ಒದಗಿಸಲಾಗುತ್ತಿದೆ. ಇದರಿಂದ ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ 30 ಲಕ್ಷ ಮಹಿಳೆಯರಿಗೆ ಆರ್ಥಿಕ ಚೈತನ್ಯ ಸಿಗಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಟಿ.ಬಿ.ನಾಗರಾಜ್, ಶಂಕರಗೌಡ ಪಾಟೀಲ ಮುನೇನಕೊಪ್ಪ, ಶಾಸಕರಾದ ಉದಯ್ ಗರುಡಾಚಾರ್ ಮತ್ತು ರವಿ ಸುಬ್ರಹ್ಮಣ್ಯ, ಎಂಎಲ್ಸಿ ಎ.ದೇವೇಗೌಡ, ಜೀವನೋಪಾಯ ಅಭಿಯಾನದ ನಿರ್ದೇಶಕಿ ಮಂಜುಶ್ರೀ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮತ್ತು ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಯೋಜನಾಧಿಕಾರಿ ಸುಮತಿ, ನಟಿಯರಾದ ಲಕ್ಷ್ಮಿ ಗೋಪಾಲಸ್ವಾಮಿ ಮತ್ತು ಸೋನು ಗೌಡ ಉಪಸ್ಥಿತರಿದ್ದರು.

23 ರಾಜ್ಯಗಳು ಮೇಳದಲ್ಲಿ ಭಾಗಿ

ಏ.18ರವರೆಗೆ ನಡೆಯಲಿರುವ ಸಂಜೀವಿನಿ ಸರಸ್ ಮೇಳ'ದಲ್ಲಿ 23 ರಾಜ್ಯಗಳ 300ಕ್ಕೂ ಹೆಚ್ಚು ಮಳಿಗೆಗಳಿದ್ದು, ಇಲ್ಲಿ ಕರಕುಶಲ ಉತ್ಪನ್ನಗಳು, ಕಸೂತಿ, ಉಪ್ಪಿನಕಾಯಿ, ಅಲಂಕಾರಿಕ ವಸ್ತುಗಳು, ವರ್ಣಚಿತ್ರಗಳು, ಟೆರಾಕೋಟಾ ವಸ್ತುಗಳು, ಕೈಮಗ್ಗದ ವಸ್ತ್ರಗಳು, ಸಿಹಿತಿಂಡಿಗಳು ಮತ್ತು ಸಾಂಬಾರ ಪದಾರ್ಥಗಳು, ವೈವಿಧ್ಯಮಯ ಸೀರೆಗಳು ಮತ್ತು ಮಹಿಳೆಯರ ಉಡುಪುಗಳು ಮುಂತಾದವು ಲಭ್ಯವಿವೆ. ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶಾವಕಾಶವಿದೆ.

ಪತ್ನಿಗೆ ಸೀರೆ ಖರೀದಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಉದ್ಘಾಟಿಸುವುದಕ್ಕೂ ಮುನ್ನ ಮೇಳದಲ್ಲಿ ಒಂದು ಸುತ್ತು ಹಾಕಿದ ಮುಖ್ಯಮಂತ್ರಿ ಬೊಮ್ಮಾಯಿ, ತಮ್ಮ ಪತ್ನಿಗೆ 2,500 ರೂ.ಗಳ ಒಂದು ಸೀರೆಯನ್ನು ಖರೀದಿಸಿದರು.

4 ಗ್ರಾಪಂ ಒಕ್ಕೂಟಗಳಿಗೆ ಪ್ರಶಸ್ತಿ

Recommended Video

Pandya ತಾನೇ ಔಟ್ ಆಗಿ Miller ಮೇಲೆ ಸಿಟ್ಟಾದರು | Oneindia Kannada

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಪಂ ವ್ಯಾಪ್ತಿಯ ದಿವ್ಯಜ್ಯೋತಿ ಸ್ವಸಹಾಯ ಸಂಘಗಳು ಒಕ್ಕೂಟ, ಹೊಸಕೋಟೆ ತಾ.ನ ದೊಡ್ಡನಲ್ಲಾಳ ಗ್ರಾಮದ ಚೇತನಾ ಒಕ್ಕೂಟ, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾ.ನ ಯಳನಾಡಿನ ನಿಸರ್ಗ ಒಕ್ಕೂಟ ಮತ್ತು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾ.ನ ರಾಮನಗರ ಗ್ರಾಪಂ ವ್ಯಾಪ್ತಿಯ ಪರಿವಾರ ಒಕ್ಕೂಟಗಳಿಗೆ ಮುಖ್ಯಮಂತ್ರಿಯವರು ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಿದರು.

English summary
An Anchor Bank would be established within a month to meet the financial needs of the members of Women's Self Help Groups. It would herald a revolution in employment in the state, Chief Minister Basavaraj Bommai said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X