9 ಆನೆ ಕೊಡಿ, ಆಂಧ್ರ ಪದೇಶದಿಂದ ಕರ್ನಾಟಕಕ್ಕೆ ಬೇಡಿಕೆ!
ಬೆಂಗಳೂರು, ಜೂನ್ 10: ಆಂಧ್ರ ಪ್ರದೇಶದ ಅರಣ್ಯ ಇಲಾಖೆ ತರಬೇತಿ ಪಡೆದ 9 ಆನೆಗಳನ್ನು ನೀಡುವಂತೆ ಕರ್ನಾಟಕದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ ಮಾಡಿದೆ. ಆದರೆ ಸರ್ಕಾರ ಇನ್ನೂ ಆನೆಗಳನ್ನು ನೀಡುವ ಕುರಿತಾಗಿ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ.
ಆಂಧ್ರ ಪ್ರದೇಶ ತರಬೇತಿ ಪಡೆದ ಆನೆಗಳಿಗೆ ಬೇಡಿಕೆ ಇಟ್ಟಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ರಾಜ್ಯದ ಆನೆ ಶಿಬಿರಗಳಲ್ಲಿರುವ ತರಬೇತಿ ಪಡೆದ ಆನೆಗಳ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ.

ತರಬೇತಿ ಪಡೆದ ಕುಮ್ಕಿ ಆನೆಗಳನ್ನು ಕಾಡು ಆನೆಗಳನ್ನು ಬಲೆಗೆ ಬೀಳಿಸಲು, ಹುಲಿ ಹಿಡಿಯುವ ಕಾರ್ಯಾಚರಣೆಗಳಲ್ಲಿ, ಕೆಲವೊಮ್ಮೆ ಗಾಯಗೊಂಡ ಅಥವಾ ಸಿಕ್ಕಿಬಿದ್ದ ಕಾಡು ಆನೆಯನ್ನು ಬಿಡಿಸುವ ಕಾರ್ಯಾಚರಣೆಯಲ್ಲಿ ಬಳಕೆ ಮಾಡಲಾಗುತ್ತದೆ.
ಹೋರಾಟಗಾರರ ವಿರೋಧ: ಆಂಧ್ರ ಪ್ರದೇಶಕ್ಕೆ ತರಬೇತಿ ಪಡೆದ ಕುಮ್ಕಿ ಆನೆಗಳನ್ನು ನೀಡುವುದಕ್ಕೆ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ದಸರಾ ಆನೆ ಅರ್ಜುನನ ಸಾವಿನ ಬಳಿಕ ರಾಜ್ಯದಲ್ಲಿ ತರಬೇತಿ ಪಡೆದ ಆನೆಗಳನ್ನು ಬೇರೆ ರಾಜ್ಯಕ್ಕೆ ನೀಡುವುದು ಬೇಡ ಎಂದು ಹೇಳುತ್ತಿದ್ದಾರೆ.
ಅರಣ್ಯ, ವನ್ಯಜೀವಿಗಳ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಲ್ಖಾಡೆ ಮಾತನಾಡಿ, "ಕೆಲವು ತಿಂಗಳ ಹಿಂದೆ ಆಂಧ್ರ ಪ್ರದೇಶದಿಂದ ಮನವಿ ಬಂದಿದೆ. ಇದುವರೆಗೂ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ವಿವಿಧ ಆನೆ ಶಿಬಿರಗಳ ಸಿಬ್ಬಂದಿಗೆ ಆನೆಗಳನ್ನು ಗುರುತಿಸಿ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ" ಎಂದು ಹೇಳಿದ್ದಾರೆ.
"ಪ್ರತಿಯೊಂದು ಆನೆ ಶಿಬಿರದಲ್ಲಿಯೂ ಬಳಕೆ ಮಾಡದ 2-3 ಆನೆಗಳಿವೆ. ಇಂತಹ ಬಳಕೆ ಮಾಡದ ಆನೆಗಳ ಪಟ್ಟಿಯನ್ನು ತಯಾರು ಮಾಡಲಾಗುತ್ತದೆ. ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ದಸರಾದಲ್ಲಿ ಭಾಗವಹಿಸಲು ತರಬೇತಿ ಪಡೆದ, ಕುಮ್ಕಿ ಆನೆಗಳಿಲ್ಲ. ಆಂಧ್ರ ಪ್ರದೇಶದ ಅರಣ್ಯ ಇಲಾಖೆ ತರಬೇತಿ ಪಡೆದ ಆನೆಗಳನ್ನು ಕುಮ್ಕಿ ಕಾರ್ಯಾಚರಣೆಗೆ ಬಳಕೆ ಮಾಡಲು ಕೇಳುತ್ತಿಲ್ಲ. ಅವರು ಗಸ್ತು ತಿರುಗಲು ಆನೆಗಳಿಗಾಗಿ ಬೇಡಿಕೆ ಇಟ್ಟಿದ್ದಾರೆ ಎಂದರು.
ಪ್ರತಿ 5 ವರ್ಷಗಳಿಗೊಮ್ಮೆ ಆನೆಗಳ ಗಣತಿಯನ್ನು ನಡೆಸಲಾಗುತ್ತದೆ. ಆದರೆ ಈ ವರ್ಷದ ಮೇ ತಿಂಗಳಿನಲ್ಲಿ ಮೂರು ದಿನಗಳ ಕಾಲ ಮೊದಲ ಬಾರಿಗೆ ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ 4 ರಾಜ್ಯಗಳಲ್ಲಿ ಆನೆಗಳ ವಿಶೇಷ ಗಣತಿಯನ್ನು ನಡೆಸಲಾಗಿತ್ತು.
ಮೇ 23 ರಿಂದ 25ರ ತನಕ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಗಡಿಗಳಲ್ಲಿ ವಿಶೇಷವಾಗಿ ಆನೆಗಳ ಗಣತಿಯನ್ನು ನಡೆಸಲಾಗಿತ್ತು. ಆನೆಗಳ ಹಾವಳಿ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಯೋಜನೆ ತಯಾರು ಮಾಡಲು ಅಂತರರಾಜ್ಯ ಗಡಿಯಲ್ಲಿಈ ಗಣತಿ ನಡೆದಿತ್ತು.
ದಕ್ಷಿಣ ಭಾರತದಲ್ಲಿ ಹೆಚ್ಚು ಆನೆಗಳಿರುವ ರಾಜ್ಯ ಕರ್ನಾಟಕ. 2022-23ರಲ್ಲಿ ನಡೆದ ಆನೆಗಳ ಗಣತಿ ಬಳಿಕ ಆನೆಗಳ ಸಂಖ್ಯೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿತ್ತು. ರಾಜ್ಯದಲ್ಲಿ 6,395 ಆನೆಗಳಿದ್ದವು. 2017ರ ಬಳಿಕ ರಾಜ್ಯದಲ್ಲಿ ಆನೆಗಳ ಸಂಖ್ಯೆ 346 ಏರಿಕೆಯಾಗಿದೆ ಎಂದು 2023ರ ಆಗಸ್ಟ್ನಲ್ಲಿ ಪ್ರಕಟವಾದ ಏಷ್ಯಾನ್ ಎಲಿಫೆಂಟ್ ಪಾಪ್ಯುಲೇಷನ್ ಮಧ್ಯಂತರ ಸಮೀಕ್ಷಾ ವರದಿ ತಿಳಿಸಿತ್ತು.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications