ಪುಟ್ಟಬಸಮ್ಮನ ಜಗಳದಿಂದ ಅಂಗನವಾಡಿ ಕೂಸು ಬಡ!

ಚಾಮರಾಜನಗರ, ಮೇ 24 : ಸ್ಥಳೀಯ ಜನಪ್ರತಿನಿಧಿ ಮತ್ತು ಅಂಗನವಾಡಿ ಕಾರ್ಯಕರ್ತೆಯರ ನಡುವಿನ ವೈಮನಸ್ಸಿನಿಂದಾಗಿ ಅಂಗನವಾಡಿ ಮಕ್ಕಳು ಬೀದಿಪಾಲಾದ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ಬಡಾವಣೆಯ ಅಂಗನವಾಡಿ ಕೇಂದ್ರ-3ರಲ್ಲಿ ಅಂಗನವಾಡಿಯಲ್ಲಿ ಪುಟ್ಟಬಸಮ್ಮ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಕೆಲದಿನಗಳಿಂದ ಸ್ಥಳೀಯ ಜನಪ್ರತಿನಿಧಿಯೊಂದಿಗೆ ಜಗ್ಗಾಟಕ್ಕೆ ಇಳಿದಿರುವ ಈಕೆ, ಅಂಗನವಾಡಿಗೆ ಬೀಗ ಜಡಿದು ಮನೆಯಲ್ಲೇ ಕುಳಿತಿರುವುದರಿಂದ ಮಕ್ಕಳು ಅಂಗನವಾಡಿ ಮುಂದೆ ಕೂರುವಂತಾಗಿದೆ. [ಪಿರಿಯಾಪಟ್ಟಣದಲ್ಲೊಂದು ಪರಿಸರ ಸ್ನೇಹಿ ಅಂಗನವಾಡಿ!]

Anganawadi children suffer in Chamarajanagar

ಕಾರ್ಯಕರ್ತೆ ಪುಟ್ಟಬಸಮ್ಮ ಅಂಗನವಾಡಿ ಕೇಂದ್ರಕ್ಕೆ ಬಾರದೆ, ಅಡುಗೆ ಸಿಬ್ಬಂದಿ ಶೀಲಾಗೂ ಬೀಗದ ಕೀ ನೀಡದಿರುವುದರಿಂದ ಅಮಾಯಕ ಮಕ್ಕಳು ಬಿಸಿಲಲ್ಲಿ ಒಣಗುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಸ್ಥಳೀಯ ನಿವಾಸಿಗಳ ಮನವಿಯಾಗಿದೆ.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶೇಷಾದ್ರಿ ಅವರು ಪ್ರತಿಕ್ರಿಯಿಸಿ, ಸ್ಥಳಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರದ ಬಾಗಿಲು ತೆರೆಯಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+