"ಅಂಗನವಾಡಿಯ ಒಂದು ಮಗುವಿನ ತರಕಾರಿ ಖರ್ಚಿಗೆ ಕೇವಲ 50 ಪೈಸೆ"
ರಾಜ್ಯ ಸರ್ಕಾರವು ಅಂಗನವಾಡಿಯ ಒಂದು ಮಗುವಿನ ತರಕಾರಿ ಖರ್ಚಿಗೆ ಕೇವಲ 50 ಪೈಸೆ ನೀಡುತ್ತಿರುವುದು ನಿಜಕ್ಕೂ ಆಘಾತ ತಂದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಂಡಿಸಿದ್ದಾರೆ. ಮಕ್ಕಳ ಆರೋಗ್ಯಕರ ಮತ್ತು ಸದೃಢ ಬೆಳವಣಿಗೆಗೆ ಪೌಷ್ಟಿಕ ಆಹಾರವು ಅತ್ಯಗತ್ಯ. ಮಕ್ಕಳಿಗೆ ನೀಡುವ ಆಹಾರವು ಅವರ ಬೆಳವಣಿಗೆಗೆ ಪೂರಕವಾಗಿರಬೇಕು. ದವಸ, ಧಾನ್ಯಗಳು, ತರಕಾರಿಗಳು, ಹಣ್ಣುಗಳು, ಹಾಲು ಇವೆಲ್ಲವೂ ಅಂಗನವಾಡಿ ಮಕ್ಕಳ ಊಟದಲ್ಲಿ ಇರಬೇಕು. ಮಕ್ಕಳಲ್ಲಿ ಇರುವ ಅಪೌಷ್ಟಿಕತೆಯನ್ನು ನಿವಾರಣೆ ಮಾಡುವುದು ಅಂಗನವಾಡಿಯ ಮುಖ್ಯ ಧ್ಯೇಯೋದ್ದೇಶ. ಆದರೆ, ಸರ್ಕಾರದ ನಡೆ ಖಂಡನೀಯ ಎಂದಿದ್ದಾರೆ.
ಈ ಹಿಂದೆ ಅಂಗನವಾಡಿಯ ಮಕ್ಕಳಿಗೆ ನೀಡುತ್ತಿದ್ದ ಹೆಸರು ಕಾಳು, ಬೆಲ್ಲ, ವಿವಿಧ ರೀತಿಯ ಬೇಳೆ ಕಾಳುಗಳನ್ನು ಸಹ ಸರ್ಕಾರ ನಿಲ್ಲಿಸಿದೆ. ಅಂಗನವಾಡಿ ಮಕ್ಕಳಿಗೆ ಇರುವ ಪೌಷ್ಟಿಕತೆಯ ಮಾರ್ಗಸೂಚಿಗಳನ್ನು ಸರ್ಕಾರ ಸಂಪೂರ್ಣವಾಗಿ ಮರೆತಿದೆ ಎಂದು ದೂರಿದ್ದಾರೆ. ಅಂಗನವಾಡಿಯ ಮಕ್ಕಳಿಗೆ ಇರುವ ಪೌಷ್ಟಿಕತೆಯ ಮಾರ್ಗಸೂಚಿಯನ್ನು ಸರ್ಕಾರ ಚಾಚೂ ತಪ್ಪದೆ ಪಾಲಿಸಿ, ಅದಕ್ಕೆ ಬೇಕಾದ ತರಕಾರಿ, ಹಣ್ಣು, ದವಸ, ಧಾನ್ಯ, ಹಾಲು ಹಾಗೂ ಇತರೆ ಸಾಮಗ್ರಿಗಳನ್ನು ಕೂಡಲೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಕಾಲದಲ್ಲಿ ಶಿಕ್ಷಕರ ವೇತನ ನೀಡಿ
ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಹಾಜರಾತಿ ಹೆಚ್ಚಿಸಲು ಗುಣಮಟ್ಟದ ಶಿಕ್ಷಣ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಸೃಜನಶೀಲ ಬೋಧನಾ ವಿಧಾನವನ್ನು ಪರಿಚಯಿಸಬೇಕೇ ಹೊರತು, ಶಿಕ್ಷಕರನ್ನು ಅಧ್ಯಯನದ ಸಲುವಾಗಿ ವಿದೇಶಕ್ಕೆ ಕಳುಹಿಸುವುದು ಸರಿಯಲ್ಲ ಎಂದು ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ.
ಸರ್ಕಾರಕ್ಕೆ ಶಿಕ್ಷಕರ ಮೇಲೆ ಅಷ್ಟೊಂದು ಕಾಳಜಿಯಿದ್ದರೆ, ಅವರಿಗೆ ಸಕಾಲದಲ್ಲಿ ವೇತನ ಪಾವತಿ ಮಾಡಲಿ. ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಿ. ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ವಿದೇಶಕ್ಕೆ ಕಳುಹಿಸುವುದರಿಂದ ಯಾರಿಗೂ ಪ್ರಯೋಜನ ಇಲ್ಲ. ಶಿಕ್ಷಣ ಸಚಿವರು ಪ್ರಬುದ್ಧರಾಗಿ ಯೋಚಿಸಬೇಕೇ ಹೊರತು, ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರವು ಶಿಕ್ಷಕರ ವೇತನವನ್ನು ಪಾವತಿಸದಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ಖಂಡಿಸಿದೆ. ಶಿಕ್ಷಣ ಇಲಾಖೆಯು 19 ತಿಂಗಳಿನಿಂದ ಬಾಕಿ ಇರುವ ವೇತನವನ್ನು ಪಾವತಿಸಲು ನಿರ್ದೇಶಿಸುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಕೆಯಾಗಿದೆ. ಈ ಅರ್ಜಿ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಕೂಡಲೇ ವೇತನ ಪಾವತಿಸದಿದ್ದರೆ, ದಂಡ ವಿಧಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿರುವವರನ್ನು ಸಂಬಳವಿಲ್ಲದೆ ಕೆಲಸ ಮಾಡಲು ಒತ್ತಾಯಿಸಬಾರದು ಎಂದು ಕೋರ್ಟ್ ನಿರ್ದೇಶಿಸಿದೆ. ಬೋಧನಾ ಸಿಬ್ಬಂದಿಗೆ ಸಂಬಳ ಪಾವತಿಸಲು ವಿಫಲವಾಗುವ ಮೂಲಕ ಕಾಂಗ್ರೆಸ್ ಸರ್ಕಾರವು ಹೊಸ ಕೆಳಮಟ್ಟಕ್ಕೆ ಇಳಿದಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕ ಸ್ಥಿತಿ ಸಂಪೂರ್ಣ ಅಸ್ತವ್ಯಸ್ತವಾಗಿ ರಾಜ್ಯದ ಖಜಾನೆಯನ್ನು ಬರಿದಾಗಿಸುತ್ತಿವೆ. ಈಗ ಸರ್ಕಾರಿ ನೌಕರರ ಸಂಬಳ ಪಾವತಿಗೆ ಹೈಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು ಎಂದು ಟೀಕಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications