Anganwadi: ಅಂಗನವಾಡಿ ಸಹಾಯಕಿಯರ 5 ತಿಂಗಳ ವೇತನ ಪಾವತಿ ಅಪ್ಡೇಟ್ ಕೊಟ್ಟ ಆರ್.ವಿ.ದೇಶಪಾಂಡೆ
ಧಾರವಾಡ, ಸೆಪ್ಟಂಬರ್ 04: ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 11,000 ರೂ. ಹಾಗೂ ಸಹಾಯಕಿಯರಿಗೆ 6000 ರೂ. ಗೌರವ ಧನ ನೀಡಲಾಗುತ್ತಿದೆ. ಈ ಸಹಾಯಕಿಯರಿಗೆ ಕಳೆದ 05 ತಿಂಗಳಿನಿಂದ ಗೌರವ ವೇತನ ನೀಡದೇ ಬಾಕಿ ಉಳಿಸಿಕೊಳ್ಳಲಾಗಿದ್ದು, ಅದನ್ನು ಶೀಘ್ರವೇ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.
ಬುಧವಾರ ಧಾರವಾಡದಲ್ಲಿ ಆಡಳಿತ ಸುಧಾರಣೆ ಆಯೋಗದ ಅದ್ಯಕ್ಷ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಆಡಳಿತದಲ್ಲಿ ಸುಧಾರಣೆ ಆಗಬೇಕು. ಅದಕ್ಕಾಗಿಯೇ ನಿರಂತರ ಸಭೆ ನಡೆಸಿದ್ದೇನೆ. ಇಂದಿನ ಸಭೆಗೆ ಬರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರು ಮತ್ತು ಅಧಿಕಾರಿಗಳ ಅಭಿಪ್ರಾಯ ಪಡೆದು ಸುಧಾರಣೆ ಮಾಡಲಾಗುವುದು. ಜನರಿಗೆ ತೊಂದರೆ ಆಗಬಾರದು ಎಂದರು.

ಆಡಳಿತ ಸುಧಾರಣೆ ನಿಟ್ಟಿನಲ್ಲಿ ಐದು ತಿಂಗಳಿಂದ ಅಂಗಮವಾಡಿ ಸಹಾಯಕಿಯರ ಗೌರವ ವೇತನ ಸಹಿತ ಆಗಿಲ್ಲ. ಸಹಾಯಕಿಯರಿಗೆ ಪ್ರತಿ ತಿಂಗಳು ವೇತನ ಆಗಬೇಕು. ಅವರೆಲ್ಲ ಬಡವರು ಸಮರ್ಪಕ ವೇತನ ಪಾವತಿಯಾದರೆ ಅವರಿಗೆ ಅನುಕೂಲವಾಗುತ್ತದೆ. ಅವರೆಲ್ಲ ಕಷ್ಟ ಪಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಸಮರ್ಥಿಸಿಕೊಂಡ ಅಧ್ಯಕ್ಷರು
ಆದಷ್ಟು ಬೇಗ ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದೇ ವಿಚಾರವನ್ನು ಇತ್ತೀಚೆಗೆ ಅಂಗನವಾಡಿ ಸಹಾಯಕಿಯರ ವೇತನ ಬಿಡುಗಡೆ ವಿಚಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ತಿಳಿಸಿದ್ದರು. ಇದನ್ನೆ ಆರ್.ವಿ.ದೇಶಪಾಂಡೆ ಅವರು ಸಮರ್ಥನೆ ಮಾಡಿಕೊಂಡರು.
ರಾಜ್ಯ ಸರ್ಕಾರ ವೇತನ ಬಿಡುಗಡೆ ಮಾಡುತ್ತದೆ. ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿದೆ. ಹೀಗಿದ್ದಾಗ ಸಚಿವೆ ಹೆಬ್ಬಾಳ್ಕರ್ ಅವರ ಏನು ಮಾಡಬೇಕು ಎಂದು ಆರ್.ವಿ.ದೇಶಪಾಂಡೆಯವರು ಪ್ರಶ್ನಿಸಿದರು.

ಅನುದಾನ ವಿಚಾರವಾಗಿ ಅವರು, ರಾಜಕೀಯವಾಗಿ ಏನೂ ಪ್ರತಿಕ್ರಿಯೇ ನೀಡದೆ ಇಷ್ಟು ಹೇಳಿ ಸುಮ್ಮನಾದರು. ಜನರು ಹಾಗೂ ಅಧಿಕಾರಿಗಳಿಂದ ಅಭಿಪ್ರಾಯ ಪಡೆದು, ಸಾರ್ವಜನಿಕರು ಅನುಕೂಲವಾಗುವಂತೆ ಆಡಳಿತದಲ್ಲಿ ಸುಧಾರಣೆ ತರಲಾಗುವುದು ಎಂದು ಅವರು ಭರವಸೆ ನೀಡಿದರು.
ಸಿಎಂ ಒಪ್ಪಿದರೆ ಸಿಎಂ ಆಗುವೆ: ಆರ್ವಿ ದೇಶಪಾಂಡೆ
ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಆಗಿರುವ ಆರ್.ದೇಶಪಾಂಡೆ ಅವರು ಕೆಲವು ಬಾರಿ ಶಾಸಕರಾಗಿ ಆಯ್ಕೆ ಆದವರು. ಮುಖ್ಯಮಂತ್ರಿ ಕುರ್ಚಿ ವಿಚಾರ, ಸಿಎಂ ಬದಲಾವಣೆ ವಿಚಾರ ಆಗಾಗ ಪ್ರಸ್ತಾಪವಾಗುತ್ತಿದ್ದು, ಈ ಮಧ್ಯೆ ನನಗೆ ಸಿಎಂ ಆಗುವ ಆಸೆ ಇದೆ ಎಂದು ಆರ್ವಿ ದೇಶಪಾಂಡೆ ಅವರು ಇಂಗಿತ ವ್ಯಕ್ತಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಅವರು ನಾನು ಆತ್ಮಿಯರು. ಅವರು ನನಗಿಂತ ಎರಡು ವರ್ಷ ದೊಡ್ಡವರು. ಅವರು ಒಪ್ಪಿದರೆ ನಾನು ರಾಜ್ಯದ ಸಿಎಂ ಆಗುವೆ ಎಂದು ತಿಳಿಸಿದ್ದರು.
ಆರ್.ವಿ.ದೇಶಪಾಂಡೆ ಅವರ ಹೇಳಿಕೆ ರಾಜಕೀಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕುವಂತೆ ಮಾಡಿತು. ಇದಕ್ಕೆ ಸಚಿವ ಎಂಬಿ ಪಾಟೀಲ್ ತಿರುಗೇಟು ಕೊಟ್ಟರೆ, ಸಚಿವ ಜಮೀರ್ ಅಹ್ಮದ್ ಅವರು, ಸಿಎಂ ಆಗುವ ಆಸೆ ಯಾರಿಗೆ ಇರಲ್ಲ ಹೇಳಿ. ಎಲ್ಲರಿಗೂ ಇರುತ್ತದೆ. ಆದರೆ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ತಿಳಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications